Monday, December 15, 2025
Monday, December 15, 2025

Department of Youth Empowerment and Sports ಅಪ್ಪಂದಿರ ದಿನ ಮಕ್ಕಳು ಹೆತ್ತವರ ಸಂಭ್ರಮ ಉತ್ಸಾಹ ಇಮ್ಮಡಿಸಿದೆ- ಡಿ.ಎಸ್.ಅರುಣ್

Date:

Department of Youth Empowerment and Sports ವಿಶ್ವ ಅಪ್ಪಂದಿರ ದಿನಾಚರಣೆ ಅಂಗವಾಗಿ, ನಗರದ ನೆಹರು ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಕಾರದಲ್ಲಿ ಆರ್ಯವೈಶ್ಯ ಅಧಿಕಾರಿಗಳ ಮತ್ತು ವೃತ್ತಿ ನಿರತರ ಸಂಘ ‘ಆವೋಪ’, ವಾಸವಿ ಮಹಿಳಾ ಸಂಘ ಮತ್ತು ವಾಸವಿ ಯುವಜನ ಸಂಘ ಇವರುಗಳ ಸಂಯುಕ್ತ ಆಶ್ರಯದಲ್ಲಿ ಅಪ್ಪ ಮತ್ತು ಮಕ್ಕಳಿಂದ ಗಾಳಿಪಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ವಿಧಾನ ಪರಿಷತ್ ಸದಸ್ಯ ಡಿ. ಎಸ್. ಅರುಣ್ ರವರು ತಮ್ಮ ಪುತ್ರಿ ಸುಪ್ರಿತ ರೊಂದಿಗೆ ಪಾಲ್ಗೊಂಡು ಗಾಳಿಪಟ ಹಾರಿಸುವುದರ ಮೂಲಕ ಸ್ಪರ್ಧೆಯನ್ನು ಉದ್ಘಾಟಿಸಿದರು.

ಸಾರ್ವಜನಿಕವಾಗಿ ಏರ್ಪಡಿಸಲಾಗಿದ್ದ ಗಾಳಿಪಟ ಸ್ಪರ್ಧೆಯಲ್ಲಿ ಸುಮಾರು 50ಕ್ಕೂ ಹೆಚ್ಚು ಅಪ್ಪ ಮಕ್ಕಳು ಭಾಗವಹಿಸಿದ್ದು ವಿಶೇಷವಾಗಿತ್ತು.

Department of Youth Empowerment and Sports ಈ ಸಂದಭ೯ದಲ್ಲಿ ಮಾತನಾಡಿದ ಅರುಣ್, ಇಂದಿನ ಬಿಡುವಿಲ್ಲದ ಸಮಯದಲ್ಲಿಯೂ ಸಹ ಇಷ್ಟೊಂದು ಮಂದಿ, ತಮ್ಮ ತಮ್ಮ ಮಕ್ಕಳೊಂದಿಗೆ ಭಾಗವಹಿಸಿರುವುದು ನಿಜಕ್ಕೂ ಗಮನಾಹ೯ ಸಂಗತಿ. ಮಕ್ಕಳೊಂದಿಗೆ ಅವರವರ ತಂದೆಯರು ಸಹ ಸಂಭ್ರಮ ಪಡುತ್ತಿರುವುದು, ಉತ್ಸಾಹವನ್ನು ಹೆಚ್ಚಿಸಿದೆ ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಘದ ಉಪಾಧ್ಯಕ್ಷರು ರೋಟರಿ ಮಾಜಿ ಅಧ್ಯಕ್ಷರು ಆದ ಜಿ. ವಿಜಯಕುಮಾರ್ ಅವರು ವಿಶೇಷ ಅತಿಥಿಗಾಗಿ ಭಾಗವಹಿಸಿ, ಎಲ್ಲಾ ಸ್ಪರ್ದಾಳುಗಳಿಗೆ ಶುಭ ಕೋರಿ, ಆರ್ಯವೈಶ್ಯ ಸಮಾಜದವರು ಸಾರ್ವಜನಿಕರಿಗಾಗಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಅನುಕರಣೀಯ ಎಂದರು.

ಆಯೋಜಕರಾದ ವಾಸವಿ ಮಹಿಳಾ ಸಂಘದ ಅಧ್ಯಕ್ಷರಾದ ರಾಧಿಕಾ ಜಗದೀಶ್,ವಾಸವಿ ಯುವಜನ ಸಂಘದ ಅಧ್ಯಕ್ಷರಾದ ಈಶ್ವರ್ ಭೂದಾಳ್ ಹಾಗೂ ಅವೋಪ ಅಧ್ಯಕ್ಷರಾದ ಎಚ್. ಜಿ. ದತ್ತ ಕುಮಾರ್ ಹಾಗೂ ಆರ್ಯ ಸಮಾಜದ ಅನೇಕ ಗಣ್ಯರು ಮತ್ತು ಅನೇಕ ಸಾರ್ವಜನಿಕ ಮುಖಂಡರು ಭಾಗವಹಿಸಿದ್ದರು.

ಅಪ್ಪ ಮಗ ವಿಭಾಗದಲ್ಲಿ ಯುವಜನ ಸೇವಾ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಸ್ವಾಮಿ ಮತ್ತು ಅದ್ವೈತ್ ಕ್ರಿಯಾಂಶ ಇವರಿಗೆ ಹಾಗೂ ಅತ್ಯಾಕರ್ಷಕ ಗಾಳಿಪಟ ವಿಭಾಗದಲ್ಲಿ ರಾಜೇಶ್ ಮತ್ತು ಸಿಂಧು ಹಾಗೂ ಅತಿ ಎತ್ತರಕ್ಕೆ ಹಾರಿದ ಗಾಳಿಪಟ ವಿಭಾಗದಲ್ಲಿ ಇಸ್ಮಾಯಿಲ್ ಮತ್ತು ಸೈಯದ್ ಪೈಜಾನ್ ಹಾಗೂ ಅತಿ ದೂರಕ್ಕೆ ಹಾರಿದ ಗಾಳಿಪಟ ವಿಭಾಗದಲ್ಲಿ ಸತೀಶ್ ಮತ್ತು ವಿಸ್ಮಿತ್ ಇವರುಗಳಿಗೆ ನಗದು ಬಹುಮಾನ ಮತ್ತು ಭಾಗವಹಿಸಿದ ಎಲ್ಲರಿಗೂ ಅಭಿನಂದನಾ ಪತ್ರವನ್ನು ವಿತರಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...