Tuesday, August 25, 2026
Tuesday, August 25, 2026

Department Of Transport ಅಂಗವಿಕಲರಿಗೂ ಗ್ಯಾರಂಟಿ ಉಚಿತ ಸಾರಿಗೆ ನೀಡಲು ಮನವಿ

Date:

Department Of Transport ಭಾರತೀಯ ಅಂಗವಿಕಲರ ಸಬಲೀಕರಣ ಸಂಸ್ಥೆ ಸ್ಥಾಪಕ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರು ಕರ್ನಾಟಕ ಸರಕಾರದ ಸಾರಿಗೆ ಸಚಿವ ಶ್ರೀ ರಾಮಲಿಂಗ ರೆಡ್ಡಿ ಅವರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿ ಸಮಸ್ತ ಅಂಗವಿಕಲರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಉಚಿತ ಮತ್ತು ಅನಿಯಮಿತ ಪ್ರಯಾಣಕ್ಕೆ ಅನುಮತಿ ಕೊಡಬೇಕೆಂದು ಮನವಿ ಸಲ್ಲಿಸಿದರು.

ಈ ಹಿಂದೆ ಅಂಗವಿಕಲರಿಗೆ ರಾಜ್ಯಾದ್ಯಂತ ಉಚಿತ ಪ್ರಯಾಣದ ಅವಕಾಶ ಒದಗಿಸಲಾಗಿತ್ತಾದರೂ ಕಾರಣಾಂತರದಿಂದ ಅದನ್ನು ಹಿಂಪಡೆದು 100 ಕಿ.ಮೀ. ಪರಿಮಿತಿಯೊಳಗೆ ವರ್ಷಕ್ಕೆ ರೂ.660 /- ಪಾವತಿಸುವಂತೆ ಮಾರ್ಪಡಿಸಿದ್ದು ಇದರಿಂದ ಅಂಗವಿಕಲರಿಗೆ ಸ್ವಚಂದ ಪ್ರಯಾಣಕ್ಕೆ ಅನಾನುಕೂಲವಾಗಿರುವದನ್ನು ಕೊಡಕ್ಕಲ್ ಅವರು ಸಚಿವರ ಗಮನಕ್ಕೆ ತಂದಾಗ ಅವರು ಮನವಿಯನ್ನು ಸ್ವೀಕರಿಸಿ ಪರಿಶೀಲಿಸುವ ಭರವಸೆ ನೀಡಿದರು.

Department Of Transport ಈ ಸಂದರ್ಭದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಮೋಹನ, ಬೆಂಗಳೂರು ರೋಟರಿ ಕ್ಲಬ್ ಅಧ್ಯಕ್ಷೆ ಡಾ.ಮಧುರಾಣ ಗೌಡ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...