Tuesday, April 22, 2025
Tuesday, April 22, 2025

Attack by Street Dogs ಅರಸಾಳು ಸುತ್ತಮುತ್ತ ಚಿರತೆ ಕಾಟ ಬಿಟ್ಟು ಈಗ ನಾಯಿಗಳ ಕಾಟ:ಕುರಿಗಳ ಬಲಿ

Date:

Attack by Street Dogs ರಿಪ್ಪನ್‌ಪೇಟೆಯ ಕೆಂಚನಾಲ,ಅರಸಾಳು ವ್ಯಾಪ್ತಿಯಲ್ಲಿ ಇತ್ತೀಚಿಗೆ ಚಿರತೆಯಿಂದ ಆತಂಕಕ್ಕೊಳಗಾಗಿರುವ ರೈತರಿಗೆ ಈಗ ನಾಯಿಗಳ ಕಾಟದಿಂದಾಗಿ ಇನ್ನಷ್ಟು ಆತಂಕಕ್ಕೊಳಗಾಗಿದ್ದಾರೆ.

ಅರಸಾಳು ಸಮೀಪ ಮಾಣಿಕೆರೆ ಗ್ರಾಮದಲ್ಲಿ ಬುಧವಾರ ಬೀದಿನಾಯಿಗಳ ದಾಳಿಗೆ ವೇಲಾಯದನ್ ಅವರಿಗೆ ಸೇರಿದ ಸುಮಾರು 25 ಕುರಿಗಳು ಬಲಿಯಾಗಿವೆ.

ಎಂದಿನಂತೆ ವೇಲಾಯದನ್ ಗ್ರಾಮದ ಸಮೀಪದಲ್ಲಿ ಕುರಿಗಳನ್ನು ಮೇಯಲು ಬಿಟ್ಟಿದ್ದಾರೆ. ಆಗ ಮನೆಯ ಕೊಟ್ಟಿಗೆಯಲ್ಲಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ಬೀದಿ ನಾಯಿಗಳ ಹಿಂಡು ಸಿಕ್ಕ ಸಿಕ್ಕ ಕುರಿಗಳನ್ನು ಕಚ್ಚಲು ಆರಂಭಿಸಿವೆ. ವಿಷಯ ತಿಳಿದು ಸ್ಥಳಕ್ಕೆ ಹೋಗುವ ವೇಳೆಗೆ ನಾಯಿಗಳು ಓಡಿ ಹೋಗಿವೆ. ಆದರೆ, ಅಷ್ಟರಲ್ಲಾಗಲೇ ನಾಯಿಗಳು ಸುಮಾರು 25 ಕುರಿಗಳನ್ನು ಕಚ್ಚಿ ಸಾಯಿಸಿದೆ.

ನಾಯಿಯ ದಾಳಿಯಿಂದ ಬೆಚ್ಚಿರುವ ಅರಸಾಳು,ಮಾಣಿಕೆರೆ ಗ್ರಾಮಸ್ಥರು ‘ರಕ್ತದ ರುಚಿಕಂಡಿರುವ ಈ ನಾಯಿಗಳು ಮಕ್ಕಳ ಮತ್ತು ಜಾನುವಾರುಗಳ ಮೇಲೂ ದಾಳಿ ನಡೆಸಬಹುದೆಂದು ಆತಂಕ ವ್ಯಕ್ತಪಡಿಸಿದ್ದಾರೆ.

Attack by Street Dogs ವಾಸಿಸಲು ಮನೆ ಇಲ್ಲದ ಬಡ ಕೃಷಿಕನ ಜೀವನಕ್ಕೆ ಆಸರೆಯಾಗಿದ್ದ ಕುರಿಗಳು ನಾಯಿ ದಾಳಿಯಿಂದ ಬಲಿಯಾಗಿರುವುದರಿಂದ ಬೇಸತ್ತು
ನಾಯಿಗಳ ಹಾವಳಿಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸುವ ಜೊತೆಗೆ, ಕುರಿಗಳ ಸಾವಿನಿಂದ ತಮಗಾಗಿರುವ ನಷ್ಟಕ್ಕೆ ಪರಿಹಾರ ನೀಡುವಂತೆ ಪಶು ವೈದ್ಯಕೀಯ ಮತ್ತು ಸೇವಾ ಇಲಾಖೆಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ravi Telex ಪತ್ರಕರ್ತ‌ “ಟೆಲೆಕ್ಸ್ ರವಿ ” ಗೆ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ

Ravi Telex ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ...

Inner Wheel East Shimoga ಆಶ್ರಮವಾಸಿಗಳ ಸೇವೆ ,ದೇವರ ಸೇವೆಗೆ ಸಮ- ವಾಗ್ದೇವಿ ಬಸವರಾಜ್

Inner Wheel East Shimoga ಆಶ್ರಮವಾಸಿಗಳ ಸೇವೆ ದೇವರ ಸೇವೆಗೆ ಸಮಾನ....

Dr. Raj Kumar ಡಾ.ರಾಜ್ ಅಭಿನಯದ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ

Dr. Raj Kumar ವರನಟ ಡಾ ರಾಜ್ ಕುಮಾರ್ ರವರ ಜನ್ಮದಿನಾಚರಣೆ...

S.N.Chennabasappa ಜನಿವಾರ ತೆಗೆಸಿದ ಪ್ರಕರಣ, ಘಟನೆ‌ಮುಂದೆ ತಪ್ಪಿಸಲು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ವಿಪ್ರ ಸಂಘಟನೆಯ ಮನವಿ

S.N.Chennabasappa ಶಿವಮೊಗ್ಗದ ದುರ್ಗಿಗುಡಿಯ ಶ್ರೀ ರಾಘವೇಂದ್ರ ಸ್ವಾಮಿ ಮಠದಿಂದ ಜಿಲ್ಲಾಧಿಕಾರಿ...