Monday, May 4, 2026
Monday, May 4, 2026

M. B. Patil ರಾಜ್ಯದಲ್ಲಿ ತಯಾರಿಕಾ ಘಟಕ ಸ್ಥಾಪನೆ: ಟೆಸ್ಲಾ ಕಂಪನಿಗೆ ಸಚಿವ ಎಂ ಬಿ ಪಾಟೀಲ ಆಹ್ವಾನ

Date:

M. B. Patil ಎಲೆಕ್ಟ್ರಿಕ್ ಕಾರುಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಅಮೆರಿಕದ ಟೆಸ್ಲಾ ಕಂಪನಿಯು ರಾಜ್ಯದಲ್ಲಿ ಉತ್ಪಾದನಾ ಘಟಕ ಸ್ಥಾಪಿಸುವ ಬಗ್ಗೆ ಪರಿಗಣಿಸಬೇಕು. ಕಂಪನಿ ಘಟಕ ಸ್ಥಾಪಿಸಲು ನಿರ್ಧರಿಸಿದರೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಕೋರಿದ್ದಾರೆ.

ಟೆಸ್ಲಾ ಕಂಪನಿಯು ತನ್ನ ಉದ್ಯಮವನ್ನು ಭಾರತದಲ್ಲಿ ವಿಸ್ತರಿಸಲು ಇಷ್ಟಪಡುವುದಾದರೆ ಕರ್ನಾಟಕ ರಾಜ್ಯವು ಅದಕ್ಕೆ ಪ್ರಶಸ್ತ ತಾಣವಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಈ ಕಂಪನಿಯು ಎಲೆಕ್ಟ್ರಿಕ್ ಕಾರುಗಳ ಜೊತೆಗೆ ಸೌರಫಲಕಗಳು ಮತ್ತಿತರ ಪರ್ಯಾಯ ಇಂಧನ ಉತ್ಪನ್ನಗಳನ್ನು ತಯಾರಿಸುತ್ತದೆ. ಅಲ್ಲದೇ, ಸ್ಪೇಸ್- ಎಕ್ಸ್ ಕಂಪನಿ ಮೂಲಕ ಉಪಗ್ರಹ ಅಂತರ್ಜಾಲ ಸೇವೆ (ಸ್ಟಾರ್ ಲಿಂಕ್) ಒದಗಿಸುತ್ತಿದೆ. ಈ ಕಂಪನಿಗಳನ್ನು ಮುನ್ನಡೆಸುತ್ತಿರುವ ಉದ್ಯಮಿ ಎಲಾನ್ ಮಸ್ಕ್ ಅವರು ಕರ್ನಾಟಕದಲ್ಲಿ ಯಾವುದೇ ಉದ್ಯಮ ಸ್ಥಾಪಿಸುವುದಾದರೆ ಸಹಕಾರ ಕೊಡಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಈ ಬಗ್ಗೆ ಉತ್ಸುಕರಾಗಿದ್ದಾರೆ ಎಂದು ಪಾಟೀಲ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯವು ತಂತ್ರಜ್ಞಾನ ಮತ್ತು ತಯಾರಿಕಾ ಕ್ಷೇತ್ರದಲ್ಲಿ 5.0 ಪ್ರಮಾಣೀಕೃತ ಮಟ್ಟ ಅಳವಡಿಸಿಕೊಂಡು ಕೈಗಾರಿಕಾ ಬೆಳವಣಿಗೆ ಸಾಧಿಸುವ ಗುರಿ ಹೊಂದಿದೆ. ಆದ್ದರಿಂದ, ಟೆಸ್ಲಾ ಘಟಕ ತೆರೆಯಲು ಇದು ಸೂಕ್ತ ನೆಲೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

M. B. Patil ಅಮೆರಿಕಾ ಪ್ರವಾಸದಲ್ಲಿ ಇರುವ ಪ್ರಧಾನಿ ನರೇಂದ್ರ ಮೋದಿ ಅವರು ಎಲನ್‌ ಮಸ್ಕ್ ಅವರನ್ನು ಭೇಟಿ‌ ಮಾಡಿ ದೇಶದಲ್ಲಿ ಬಂಡವಾಳ ಹೂಡುವಂತೆ ಕೋರಿದ್ದರು. ಆ ಹಿನ್ನೆಲೆಯಲ್ಲಿ ಪಾಟೀಲ್ ಅವರು ಟ್ವೀಟ್ ಮಾಡಿ ಕರ್ನಾಟಕಕ್ಕೇ ಬನ್ನಿ ಎನ್ನುವ ಮನವಿ‌ ಮಾಡಿದ್ದಾರೆ. ಹಾಗೆಯೇ ತಮ್ಮ‌ ಫೇಸ್ ಬುಕ್ ನಲ್ಲೂ ಸಚಿವರು ಬರೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...