Monday, December 15, 2025
Monday, December 15, 2025

E-account Scam in Chikkamagaluru ಚಿಕ್ಕಮಗಳೂರು ನಗರಸಭೆಯಲ್ಲಿ ಇ-ಖಾತೆ ಹಗರಣ: ಕ್ರಮ ಕೈಗೊಳ್ಳಲು ಆಗ್ರಹ

Date:

E-account Scam in Chikkamagaluru ಚಿಕ್ಕಮಗಳೂರು, ನಗರಸಭೆಯಲ್ಲಿ ನಡೆದಿರುವ ಪ್ರಕರಣ ಸಂಬಂಧ ಕಂದಾಯ ಭೂಮಿಗೆ ಇ-ಖಾತೆ ಮಾಡಿರುವ ಮೇಲಾಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ಹಿತರಕ್ಷಣಾ ವೇದಿಕೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರನ್ನು ಗುರುವಾರ ಮನವಿ ಸಲ್ಲಿಸಿ ಒತ್ತಾಯಿಸಿದೆ.

ಈ ವೇಳೆ ಮಾತನಾಡಿದ ವೇದಿಕೆಯ ಹೆಚ್.ಕೆ.ಕೇಶವಮೂರ್ತಿ ಕಂದಾಯ ಭೂಮಿಗೆ ಇ-ಖಾತೆ ಮಾಡಿರುವ ಪ್ರಕರಣ ದಲ್ಲಿ ಇ-ಖಾತೆಗೆ ನೋಟ್‌ಶೀಟ್ ಬರೆದಿರುವ ದ್ವಿತೀಯ ದರ್ಜೆ ಸಹಾಯಕರನ್ನು ಅಮಾನತ್ತುಪಡಿಸಬೇಕು. ಭೂಮಿಯ ಇ-ಖಾತೆ ಮಾಡಬೇಕಾದರೆ ಕಂದಾಯ ಅಧಿಕಾರಿ ಹಾಗೂ ಆಯುಕ್ತರ ಗಮನಕ್ಕೆ ತಂದು ಸಹಿ ಮು ಖಾಂತರವೇ ಆಗುಬೇಕೆಂಬುದು ಸಾಮಾನ್ಯ ಜನರಿಗೂ ತಿಳಿದಿರುವ ವಿಚಾರವಾಗಿದೆ ಎಂದರು.

ಆದರೆ, ಈ ಪ್ರಕರಣದಲ್ಲಿ ಕೇವಲ ದ್ವಿತೀಯ ದರ್ಜೆ ಸಹಾಯಕರ ಮೇಲೆ ಮಾತ್ರ ಕಾನೂನು ಕ್ರಮ ಕೈಗೊಂಡಿರುವುದು ಗಮನಿಸಿದರೆ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸಿದಂತಾಗಿದೆ. ಇದರ ಹಿಂದೆ ಶಾಮೀಲಾ ಗಿರುವ ಕಂದಾಯ ಅಧಿಕಾರಿ ಹಾಗೂ ಆಯುಕ್ತರ ಮೇಲೆ ಪ್ರಕರಣ ದಾಖಲಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಶೀಘ್ರವೇ ಈ ವಿರುದ್ಧ ಕ್ರಮ ಜರುಗಿಸದಿದ್ದಲ್ಲಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗುವುದು ಹಾಗೂ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮುನ್ನ ಜಿಲ್ಲಾಡಳಿತ ಎಚ್ಚೆತ್ತುಕೊಂಡು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

E-account Scam in Chikkamagaluru ಈ ಸಂದರ್ಭದಲ್ಲಿ ವೇದಿಕೆಯ ಮುಖಂಡರುಗಳಾದ ಆರ್.ಕೆ.ನರಸಿಂಹಮೂರ್ತಿ, ರಾಜಕುಮಾರ್, ರೇವಂತ್, ಎಸ್.ಡಿ.ಎಂ. ಮಂಜು, ಪ್ರದೀಪ್, ಧನಂಜಯ್, ವಿನೋದ್, ಜಗದೀಶ್, ಗಣೇಶ್, ರಾಜು, ನಂದನ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...