Sunday, August 2, 2026
Sunday, August 2, 2026

E-account Scam in Chikkamagaluru ಚಿಕ್ಕಮಗಳೂರು ನಗರಸಭೆಯಲ್ಲಿ ಇ-ಖಾತೆ ಹಗರಣ: ಕ್ರಮ ಕೈಗೊಳ್ಳಲು ಆಗ್ರಹ

Date:

E-account Scam in Chikkamagaluru ಚಿಕ್ಕಮಗಳೂರು, ನಗರಸಭೆಯಲ್ಲಿ ನಡೆದಿರುವ ಪ್ರಕರಣ ಸಂಬಂಧ ಕಂದಾಯ ಭೂಮಿಗೆ ಇ-ಖಾತೆ ಮಾಡಿರುವ ಮೇಲಾಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ಹಿತರಕ್ಷಣಾ ವೇದಿಕೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರನ್ನು ಗುರುವಾರ ಮನವಿ ಸಲ್ಲಿಸಿ ಒತ್ತಾಯಿಸಿದೆ.

ಈ ವೇಳೆ ಮಾತನಾಡಿದ ವೇದಿಕೆಯ ಹೆಚ್.ಕೆ.ಕೇಶವಮೂರ್ತಿ ಕಂದಾಯ ಭೂಮಿಗೆ ಇ-ಖಾತೆ ಮಾಡಿರುವ ಪ್ರಕರಣ ದಲ್ಲಿ ಇ-ಖಾತೆಗೆ ನೋಟ್‌ಶೀಟ್ ಬರೆದಿರುವ ದ್ವಿತೀಯ ದರ್ಜೆ ಸಹಾಯಕರನ್ನು ಅಮಾನತ್ತುಪಡಿಸಬೇಕು. ಭೂಮಿಯ ಇ-ಖಾತೆ ಮಾಡಬೇಕಾದರೆ ಕಂದಾಯ ಅಧಿಕಾರಿ ಹಾಗೂ ಆಯುಕ್ತರ ಗಮನಕ್ಕೆ ತಂದು ಸಹಿ ಮು ಖಾಂತರವೇ ಆಗುಬೇಕೆಂಬುದು ಸಾಮಾನ್ಯ ಜನರಿಗೂ ತಿಳಿದಿರುವ ವಿಚಾರವಾಗಿದೆ ಎಂದರು.

ಆದರೆ, ಈ ಪ್ರಕರಣದಲ್ಲಿ ಕೇವಲ ದ್ವಿತೀಯ ದರ್ಜೆ ಸಹಾಯಕರ ಮೇಲೆ ಮಾತ್ರ ಕಾನೂನು ಕ್ರಮ ಕೈಗೊಂಡಿರುವುದು ಗಮನಿಸಿದರೆ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸಿದಂತಾಗಿದೆ. ಇದರ ಹಿಂದೆ ಶಾಮೀಲಾ ಗಿರುವ ಕಂದಾಯ ಅಧಿಕಾರಿ ಹಾಗೂ ಆಯುಕ್ತರ ಮೇಲೆ ಪ್ರಕರಣ ದಾಖಲಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಶೀಘ್ರವೇ ಈ ವಿರುದ್ಧ ಕ್ರಮ ಜರುಗಿಸದಿದ್ದಲ್ಲಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗುವುದು ಹಾಗೂ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮುನ್ನ ಜಿಲ್ಲಾಡಳಿತ ಎಚ್ಚೆತ್ತುಕೊಂಡು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

E-account Scam in Chikkamagaluru ಈ ಸಂದರ್ಭದಲ್ಲಿ ವೇದಿಕೆಯ ಮುಖಂಡರುಗಳಾದ ಆರ್.ಕೆ.ನರಸಿಂಹಮೂರ್ತಿ, ರಾಜಕುಮಾರ್, ರೇವಂತ್, ಎಸ್.ಡಿ.ಎಂ. ಮಂಜು, ಪ್ರದೀಪ್, ಧನಂಜಯ್, ವಿನೋದ್, ಜಗದೀಶ್, ಗಣೇಶ್, ರಾಜು, ನಂದನ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...