Thursday, June 12, 2025
Thursday, June 12, 2025

Kisan Samman Nidhi Yojana ಕಿಸಾನ್ ಸಮ್ಮಾನ್ ನೋಂದಣಿಗೆ ಜೂನ್ 30 ಅಂತಿಮ ದಿನಾಂಕ

Date:

Kisan Samman Nidhi Yojana ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದೆ.

ಭೂ ಒಡೆತನ ಹೊಂದಿರುವ ಪ್ರತಿ ಅರ್ಹ ರೈತರು ಜೂ.30 ರೊಳಗಾಗಿ ಯೋಜನೆಯ ಮಾರ್ಗಸೂಚಿಯಂತೆ e-KYC ಮಾಡಿಸುವುದು.

ಪ್ರತಿ ಅರ್ಹ ರೈತ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ಒಂದು ವರ್ಷಕ್ಕೆ ರೂ.6000/- ಗಳನ್ನು, ಪ್ರತಿ 4 ತಿಂಗಳಿಗೊಮ್ಮೆ 3 ಕಂತುಗಳಲ್ಲಿ ಹಾಗೂ ರಾಜ್ಯ ಸರ್ಕಾರದಿಂದ ರೂ.4000/- ಗಳನ್ನು 2 ಕಂತುಗಳಲ್ಲಿ ಒಟ್ಟು ರೂ.10000/- ಗಳನ್ನು ನೀಡಲಾಗುತ್ತಿದೆ.

Kisan Samman Nidhi Yojana ಈ ಯೋಜನೆಯಡಿಯಿರುವ ಫಲಾನುಭವಿಗಳಿಗೆ ಮುಂದಿನ ಕಂತು ತಮ್ಮ ಬ್ಯಾಂಕ್‌ ಖಾತೆಗೆ ಜಮೆಯಾಗಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ.

ಆದ್ದರಿಂದ ರೈತರು ತಮ್ಮ ಆಧಾರ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನಲ್ಲಿ ನೊಂದಾಯಿಸಿರುವ ಮೊಬೈಲ್‌ನೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ಗ್ರಾಮ ಒನ್‌ ಕೆಂದ್ರಗಳಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸುವುದು.

ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿರುವ PMKISAN e-KYC through Face Recognition App ಮೂಲಕ ಸಹ ಜೂ.30 ರೊಳಗಾಗಿ e-KYC ಮಾಡಿಸುವಂತೆ ರೈತರಿಗೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...