Monday, February 2, 2026
Monday, February 2, 2026

Radio Shivamogga ರೇಡಿಯೋ ಶಿವಮೊಗ್ಗ ಫೋನ್ ಇನ್ ನಲ್ಲಿ ವಿವಿಧ ಸಮಸ್ಯೆಗಳಿಗೆ‌ ಸ್ಪಂದಿಸಿದ ಶಾಸಕ ಚೆನ್ನಿ

Date:

Radio Shivamogga ರೇಡಿಯೋ ಶಿವಮೊಗ್ಗ 90.8 ಎಫ್ ಎಂನಲ್ಲಿ ಶಿವಮೊಗ್ಗ ನಗರ ಶಾಸಕ ಎಸ್ ಎನ್ ಚನ್ನಬಸಪ್ಪ (ಚೆನ್ನಿ) ಅವರೊಂದಿಗೆ ನೇರಪ್ರಸಾರದ ಸಾರ್ವಜನಿಕ ಸಂವಾದ ಯಶಸ್ವಿಯಾಗಿ ಜರುಗಿತು. ಆರ್ ಜೆ ಅಶ್ವಿನಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಚನ್ನಬಸಪ್ಪನವರು ಮಾತನಾಡಿ, ಪರಿಸರ ತಮ್ಮ ಮೊದಲ ಆದ್ಯತೆಯಾಗಿದೆ. ಪರಿಸರ ಬಜೆಟ್ ಮಂಡನೆ ಆಗಿದ್ದು, ಶಿವಮೊಗ್ಗದಲ್ಲಿ ಮಾತ್ರ. ಈಗಲೂ ಪರಿಸರ ಸಂಬಂಧಿ ಚಟುವಟಿಕೆಗಳು ಹೆಚ್ಚು ನಡೆಸಲಾಗುತ್ತಿದೆ. ತುಂಗಾ ನದಿಗೆ ಮಲಿನ ನೀರು ಸೇರದಂತೆ ಕೂಡಾ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದ್ದು ತುಂಗಾ ಯೋಜನೆಯಡಿ ವಿಶೇಷ ಆದ್ಯತೆ ನೀಡಲಾಗಿದೆ. ಹಸಿರು ಉಳಿವಿಗಾಗಿ 24 ಸಾವಿರ ಮಕ್ಕಳನ್ನು ಒಗ್ಗೂಡಿಸಿಕೊಂಡು ಜಾಗೃತಿ ಮೂಡಿಸುವ ಕಾರ್ಯ ನಡೆಸಲಾಗುತ್ತಿದೆ. ಪರಿಸರ ಪಾರ್ಕ್ ಯೋಜನೆಗೂ ಕೂಡಾ ಚಿಂತನೆ ನಡೆದಿದೆ. ಗುಡ್ಡಗಳನ್ನು ಕಾಪಾಡಿಕೊಂಡರೆ ಜೀವವೈವಿಧ್ಯವನ್ನು ಉಳಿಸಿದಂತೆ ಎಂದರು.

ಆರೋಗ್ಯ ಶಿವಮೊಗ್ಗಕ್ಕಾಗಿ ಸರ್ವ ಯೋಜನೆಗಳ ಚಿಂತನೆ ಇದೆ. ಬೊಮ್ಮನಕಟ್ಟೆ ಆಸ್ಪತ್ರೆಯಲ್ಲಿ ಅಭಿವೃದ್ಧಿ ಕಾರ್ಯಗಳಾಗುತ್ತಿವೆ. ಸಾಮಾನ್ಯ ಮಹಿಳೆಯೋರ್ವರು ಬಡವರಿಗೆ ಸರ್ಕಾರಿ ಯೋಜನೆಗಳು ದೊರಕುತ್ತಿಲ್ಲ ಎಂದು ದೂರಿದ್ದರು.

ಇದರಂತೆ ಯಡಿಯೂರಪ್ಪ ಅಧಿಕಾರಾವಧಿಯಲ್ಲಿ ಶಿವಮೊಗ್ಗದಲ್ಲಿ ಪೌರಕಾರ್ಮಿಕ ಯೋಜನೆ ಅನುಷ್ಠಾನವಾಯಿತು. ಇದನ್ನು ಮಾದರಿಯಾಗಿಸಿಕೊಂಡು ರಾಜ್ಯದಾದ್ಯಂತ ಇದನ್ನು ಜಾರಿ ಮಾಡಲು ನಿರ್ಧರಿಸಲಾಯಿತು. ಶಿವಮೊಗ್ಗ ನಗರದ ಅಭಿವೃದ್ಧಿಗೆ ಸಾರ್ವಜನಿಕರ ಸಲಹೆಗಳಿಗೆ ಮುಕ್ತ ಸ್ವಾಗತವಿದೆ ಎಂದರು.

Radio Shivamogga ಬ್ರಹ್ಮಾನಂದ ರಾನಡೆ, ಕೃಷ್ಣ, ಪ್ರೇಮಕುಮಾರ್, ಮಧುಮತಿ, ನವೀನ ಕುಮಾರ್, ಡಾ. ರವೀಂದ್ರ, ಅರ್ಚನಾ, ವಿಜಯಾ, ಕೃಷ್ಣಮೂರ್ತಿ, ಅಂಬರೀಶ್, ರೂಪಾ, ಶಾಂತಿನಿ ಹಾಸನ, ಗುಂಡಣ್ಣ, ಜಾಲ, ಸತೀಶ್, ಚಂದ್ರು, ಲೀಲಾ, ಯುವರಾಜ್, ಮಹೇಶ್ವರಪ್ಪ, ಕುಸುಮಾ, ಮಂಜುಳಾ, ಶೋಭಾ, ಪೂರ್ಣಿಮಾ, ಬಿಂದು, ಭರತ್ ಕರೆ ಮಾಡಿ ಮಾತನಾಡಿದರು. ಇವರೆಲ್ಲರಿಗೂ ಶಾಸಕರು ಸಕಾರಾತ್ಮಕವಾಗಿ, ಆತ್ಮೀಯವಾಗಿ ಸ್ಪಂದಿಸಿದರು.

ಈ ಸಂದರ್ಭದಲ್ಲಿ ರೇಡಿಯೋ ಶಿವಮೊಗ್ಗದ ನಿಲಯ ನಿರ್ದೇಶಕ ಜಿ.ಎಲ್. ಜನಾರ್ದನ್, ಕಿಡ್ಸ್ ಸಂಸ್ಥೆಯ ಪದಾಧಿಕಾರಿಗಳಾದ ಸಿ.ಎಸ್. ಚಂದ್ರಶೇಖರ್, ಎ.ಎಸ್. ಚಂದ್ರಶೇಖರ್, ಭಾಗ್ಯಾ ಇನ್ನಿತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...