Thursday, March 19, 2026
Thursday, March 19, 2026

Christ King School ಮಕ್ಕಳ ಮೃದು ಮನಸ್ಸಿಗೆ ಉನ್ನತ ಮಾರ್ಗದರ್ಶನ ನೀಡುವಲ್ಲಿ ಗುರುವಿನ ಪಾತ್ರ ಬಹಳ ಮುಖ್ಯ

Date:

Christ King School ಮಕ್ಕಳ ಮೃದು ಮನಸ್ಸನ್ನು ಸಮಾಜದ ಉನ್ನತದ ಬೆಳವಣಿಗೆಯ ಕಡೆ ಮಾರ್ಗದರ್ಶನ ತೋರಲು ಗುರುಗಳ ಪಾತ್ರ ಬಹಳ ಮುಖ್ಯವಾಗಲಿದೆ ಎಂದು ಶ್ರೀರಾಮಚಂದ್ರ ಮಿಷನ್ ಹಾರ್ಟ್ ಫುಲ್ ನೆಸ್‌ನ ಜಿಲ್ಲಾ ಸಂಚಾಲಕ ಆರ್.ಎಸ್.ಸತ್ಯನಾರಾಯಣ್ ಹೇಳಿದರು.

ಚಿಕ್ಕಮಗಳೂರು ಕೋಟೆ ಚನ್ನಪುರ ಸಮೀಪ ಕ್ರೈಸ್ತ ಕಿಂಗ್ ಶಾಲೆಯಲ್ಲಿ ಗುರುಪೂರ್ಣಿಮಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮನುಷ್ಯನ ಜೀವನದಲ್ಲಿ ಗುರುವು ಮಹತ್ವದ ಪಾತ್ರ ವಹಿಸುತ್ತಾರೆ. ಗುರುವನ್ನು ದೇವರಂತೆ ಪೂಜಿಸುವುದು ಭಾರತೀಯ ಸಂಸ್ಕೃತಿಯಲ್ಲಿದೆ. ಹಾಗಾಗಿ ಗುರುಪೂರ್ಣಿಮಾ ಬಹಳ ಮಹತ್ವವನ್ನು ಪಡೆದುಕೊಂಡಿದೆ ಎಂದು ಹೇಳಿದರು.

Christ King School ಬಹುತೇಕ ಜನರು ಗುರುವನ್ನು ತಮ್ಮ ಜೀವನದ ಅವಿಭಾಜ್ಯ ಅಂಗವಾಗಿ ಪರಿಗಣಿಸುವ ಮೂಲಕ ತಮ್ಮ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸುವ ದಿನವಾಗಿದೆ. ಗುರು ಪೂರ್ಣಿಮೆಗೆ ಧಾರ್ಮಿಕ ಪ್ರಾಮುಖ್ಯತೆ ಅಲ್ಲದೇ ಶೈಕ್ಷಣ ಕ ಮತ್ತು ವಿದ್ವಾಂಸರ ವೃಂದದಲ್ಲೂ ಮಹತ್ವವಿದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಶಾಲೆಯ ಪ್ರಾಂಶುಪಾಲೆ ಚಂದ್ರಪ್ರಭ ಮಾತನಾಡಿ ಜೀವನದ ನಿಜವಾದ ಮಾರ್ಗತೋರಿಸಲು ಗುರುಗಳ ಸಹಾಯ ಅವಶ್ಯಕತೆಯಿದೆ. ಭಾರತೀಯ ಸಂಸ್ಕೃತಿಯ ಪರಂಪರೆ, ಸಂಸ್ಕಾರ ಮತ್ತು ಹಿಂದಿನ ಗುರುಕುಲ ಶಿಕ್ಷಣ ವನ್ನು ಮರುಕಳಿಸುವುದು ಹಾಗೂ ಮಕ್ಕಳ ಉತ್ತಮ ಸಂಸ್ಕಾರ, ಮೌಲ್ಯಗಳನ್ನು ಬೆಳೆಸುವುದಾಗಿದೆ ಎಂದು ತಿಳಿಸಿದರು.

ಇದೇ ವೇಳೆ ವಿದ್ಯಾರ್ಥಿಗಳು ಹಿಂದೂ, ಮುಸ್ಲೀಂ ಹಾಗೂ ಕ್ರೈಸ್ತ ಧರ್ಮಗ್ರಂಥಗಳ ಮೂಲಕ ಗುರು ಪೂಣ ðಮಾ ಶುಭಾಶಯ ಕೋರಿದರು. ಬಳಿಕ ವಿದ್ಯಾರ್ಥಿಗಳು ಗುರುಬ್ರಹ್ಮ, ಗುರವೇ ನಮಃ ಸಂದೇಶವನ್ನು ಸಾರಿ ಶಿಕ್ಷಕರಿಗೆ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಕಾರ್ಯದರ್ಶಿ ಸಿ.ಹೆಚ್.ಶ್ರೀನಿವಾಸ್, ಮುಖ್ಯಶಿಕ್ಷಕಿ ಸುಮ, ಶಿಕ್ಷಕರಾದ ಮಂಜುಳಾ, ಹೆಚ್.ಎನ್.ಬಾನುಪ್ರಿಯಾ, ಬಿಂದುಶ್ರೀ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...