Thursday, March 19, 2026
Thursday, March 19, 2026

Department of Social Welfare ಪರಿಶಿಷ್ಟ ಪಂಗಡಕ್ಕೆ ನೀಡುವ ಅನುದಾನವನ್ನ ಪರಿಶಿಷ್ಟೇತರ ಕಾಮಗಾರಿಗೆ ಬಳಕೆಗೆ ಬೇಡ ಎಂದು ಆಗ್ರಹ

Date:

Department of Social Welfare ಪ.ಪಂಗಡದ ಧಾರ್ಮಿಕ ಸಂಸ್ಥೆಗಳಲ್ಲದ ಸಂಸ್ಥೆಗೆ ಪರಿಶಿಷ್ಟ ಜಾತಿ ಪರಿವರ್ಗದ ಅನುದಾನದಲ್ಲಿ ಹಣ ಬಿಡುಗಡೆ ಮಾಡಿಕೊಂಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರನ್ನು ಸೋಮವಾರ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ದಸಂಸ ಚಿಕ್ಕಮಗಳೂರು ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಮರ್ಲೆ ಅಣ್ಣಯ್ಯ ತರೀಕೆರೆ ಪಟ್ಟಣ ದಲ್ಲಿರುವ ಬಸವಣ್ಣನವರ ಸಹೋದರಿ ವೀರಮಾತೆ ಅಕ್ಕನಾಗಲಾಂಬಿಕೆ ಲಿಂಗೈಕ್ಯೆ ಸ್ಥಳದಲ್ಲಿ ಕಟ್ಟಡ ನಿರ್ಮಾಣಕ್ಕೆ ಪ.ಪಜಾತಿಗೆ ಸಂಬಂಧ ಪಡೆದ 2.50 ಕೋಟಿ ಅನುದಾನವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಮಂಜೂರು ಮಾಡಿಸಿಕೊಂಡು ಅನುದಾನ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ದೂರಿದರು.

ಇದಲ್ಲದೇ ಹೆಚ್ಚುವರಿಯಾಗಿ 2.60 ಕೋಟಿ ಅನುದಾನ ಮಂಜೂರು ಮಾಡುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಪ.ಜಾತಿ, ಪ.ಪಂಗಡಕ್ಕೆ ಸೇರದ ವೀರಮಾತೆ ಸ್ಥಳದ ಅಭಿವೃದ್ದಿಗೆ ಪ.ಪಂಗಡದ ಅನುದಾನ ಮಂಜೂರು ಮಾಡಿರುವುದು ಜನಾಂಗಕ್ಕೆ ಮಾಡಿ ರುವ ಅನ್ಯಾಯವಾಗಿದೆ ಎಂದು ದೂರಿದರು.

ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಬಿಡುಗಡೆ ಮಾಡಿರುವ ಅನುದಾನವನ್ನು ವಾಪಸ್ ಪಡೆಯಬೇಕು. ನಂತರ ಪ್ರಸ್ತಾವನೆ ಅರ್ಜಿ ಸಲ್ಲಿಸಿರುವುದನ್ನು ತಡೆಹಿಡಿಯಬೇಕು, ಸುಳ್ಳು ವರದಿ ನೀಡಿ ಹಣ ದುರುಪಯೋಗ ಮಾಡಿರುವ ಧಾರ್ಮಿಕ ಸಂಸ್ಥೆಯ ಮುಖ್ಯಸ್ಥೆ ಹಾಗೂ ಸಮಾಜ ಕಲ್ಯಾಣ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Department of Social Welfare ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಖಜಾಂಚಿ ಸಂತೋಷ್ ಲಕ್ಯಾ, ತರೀಕೆರೆ ತಾಲ್ಲೂಕು ಸಂಚಾಲಕರಾದ ರಾಮಚಂದ್ರ, ಸುಚೇಂದ್ರಕುಮಾರ್, ಎನ್.ಆರ್.ಪುರ ಸಂಚಾಲಕ ಮಂಜುನಾಥ್, ಸಂಘಟನಾ ಸಂಚಾಲಕ ಮೌಂಟ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...