Friday, April 17, 2026
Friday, April 17, 2026

Dalit woman murder case be handed over to CBI ದಲಿತ ಮಹಿಳೆ ಕೊಲೆ ಪ್ರಕರಣ ಸಿಬಿಐ ಗೆ ವಹಿಸಲು ದಸಂಸ ಆಗ್ರಹ

Date:

Dalit woman murder case be handed over to CBI ದಲಿತ ಮಹಿಳೆಯನ್ನು ಅತ್ಯಾಚಾರವೆಸಗಿ ಬಂದೂಕಿನಿಂದ ಕೊಲೆ ಮಾಡಿ ರುವ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಮುಖಂಡರುಗಳು ಚಿಕ್ಕಮಗಳೂರು ಜಿಲ್ಲಾಡಳಿತ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಶುಕ್ರವಾರ ಒತ್ತಾಯಿಸಿದರು.

ಈ ಸಂಬಂಧ ಶಿರಸ್ತೇದಾರ್ ಮನು ಅವರಿಗೆ ಮನವಿ ಸಲ್ಲಿಸಿದ ದಸಂಸ ಮುಖಂಡರುಗಳು ಜಾಗರ ಹೋಬ ಳಿಯ ಸಿರವಾಸೆ ಗ್ರಾ.ಪಂ. ವ್ಯಾಪ್ತಿಯ ಸಿದ್ದಾಪುರ ಗ್ರಾಮದ ತೋಟದ ಮಾಲೀಕರ ಮಗ ಹಾಗೂ 11 ಮಂದಿ ಮಂದಿ ಇತರರು ಕೂಲಿ ಕಾರ್ಮಿಕ ಮಹಿಳೆ ಜಯಮ್ಮ ಎಂಬುವವರನ್ನು ಅತ್ಯಾಚಾರವೆಸಗಿ ಕೊಲೆಗೈದು ತೋಟದ 2 ಕಿ.ಮೀ. ದೂರದಲ್ಲಿ ಬೆಂಕಿಯಿಂದ ಸುಟ್ಟ ಹಾಕಲಾಗಿರುವ ಪ್ರಕರಣ ವರದಿಯಾಗಿತ್ತು ಎಂದರು.
ತದನಂತರ ಅತ್ಯಾಚಾರವೆಸಗಿ ಕೊಲೆಗೈದು ಸುಟ್ಟುಬೂದಿ ಮಾಡಿದ ಮಾಹಿತಿಯು ಮಲ್ಲಂದೂರು ಪೊಲೀಸ್ ಅಧಿಕಾರಿಗಳು ಪ್ರಕರಣ ದಾಖಲಿಸಿರುವುದು ಶುದ್ಧ ಸುಳ್ಳಾಗಿದೆ. ಸಿದ್ದಾಪುರ ಗ್ರಾಮದ ತೋಟದ ಮಾಲೀಕರ ಕುಟುಂ ಬದವರನ್ನು ಬಂಧಿಸಿ ಚರ್ಚಿಸಿ ನಂತರ ಅದೇ ತೋಟದ ಕೂಲಿ ಕಾರ್ಮಿಕ ನಾಗರಾಜ್‌ನಾಯ್ಕ ಎಂಬುವವರನ್ನು ಹಣದ ಆಸೆ ತೋರಿಸಿ ಅವರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ ಎಂದು ದೂರಿದರು.

ಕೊಲೆಯು ಸಿದ್ದಾಪುರ ಗ್ರಾಮದ ಮಾಲೀಕನ ತೋಟದಲ್ಲಿ ನಡೆದಿದೆಯಾದರೂ ಆತನ ಕುಟುಂಬದವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಆ ನಿಟ್ಟಿನಲ್ಲಿ ದಲಿತ ಹೆಣ್ಣುಮಗಳನ್ನು ಅತ್ಯಾಚಾರವೆಸಗಿ ಕೊಲೆಗೈದ ಎಲ್ಲಾ ಅಪರಾಧಿಗಳನ್ನು ಹಾಗೂ ಬೆಂಬಲಿಸಿರುವ ಅಧಿಕಾರಿಗಳನ್ನು ವಿರುದ್ಧವು ಕ್ರಮ ಕೈಗೊಳ್ಳಬೇಕು ಎಂದರು.

ಕೂಡಲೇ ಜಿಲ್ಲಾಡಳಿತ ಸಾಕ್ಷಿಗಳು ನಾಶವಾಗುವ ಮುನ್ನ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸಿ ನೊಂದ ಕುಟುಂಬಕ್ಕೆ ಹಾಗೂ ಭಯದಿಂದ ಬದುಕುತ್ತಿರುವ ಬಡಕೂಲಿ ಕಾರ್ಮಿಕರಿಗೆ ರಕ್ಷಣೆ ಒದಗಿಸಿಕೊಡುವುದರ ಮೂಲಕ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು.

Dalit woman murder case be handed over to CBI ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ್, ಮುಖಂಡರುಗಳಾದ ಅಂಬಳೆ ಕುಮಾರ್, ಲಕ್ಷ್ಮ ಣ್ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಗುಡ್ ಲಕ್ ಆರೈಕೆ ಕೇಂದ್ರದಲ್ಲಿನ ಅನಾಥ ಮಹಿಳೆಯರಿಗೆ ಭಾವನಾ ಜೆಸಿಐನಿಂದ ಉಡುಪು ವಿತರಣೆ

JCI Shivamogga ಶಿವಮೊಗ್ಗ ನಗರದ ಜೆಸಿಐ ಶಿವಮೊಗ್ಗ ಭಾವನದಿಂದ ಗುಡ್...

Brahmakumari Ishwariya University ಆಧ್ಯಾತ್ಮ , ಧ್ಯಾನ ಮತ್ತು ಯೋಗ ಮನುಷ್ಯನ ನೈಜ ಸಂಪತ್ತು-ಬ್ರಹ್ಮಕುಮಾರಿ ಸ್ವಾತಿ

Brahmakumari Ishwariya University ಒತ್ತಡ ಮತ್ತು ಅಶಾಂತಿಯ ಜೀವನಶೈಲಿಯಲ್ಲಿ ಬದುಕುತ್ತಿರುವ ಜನರಿಗೆ...

Dr. B.R. Ambedkar ಡಾ.ಅಂಬೇಡ್ಕರ್ ಜಯಂತಿ ಪ್ರಯುಕ್ತ 19 ಜನಕ್ಕೆ ಜೀವ ವಿಮಾ ಬಾಂಡ್ ವಿತರಣೆ

Dr. B.R. Ambedkar ಶಿವಮೊಗ್ಗ ಜಿಲ್ಲೆಯ ಹೊಳೆ ಬೆನವಲ್ಲಿ ಗ್ರಾಮದಲ್ಲಿ ಸಂವಿಧಾನ...

VISL ಡಾ.ಅಂಬೇಡ್ಕರ್ ಮತ್ತು ವಿಶ್ವೇಶ್ವರಯ್ಯನವರ ಜೀವನದ ವಿಚಾರಗಳು ಮಕ್ಕಳಿಗೆ ಅಗತ್ಯ- ಬಿ.ವಿಶ್ವನಾಥ್

VISL ವಿಐಎಸ್‌ಎಲ್ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ದ ಆಯೋಜಿಸಲಾಗಿತ್ತು. ಈ...