Sunday, December 14, 2025
Sunday, December 14, 2025

Dr. Selvamani R ಶಿವಮೊಗ್ಗ ಜಿಲ್ಲೆಯಲ್ಲಿ ಸಾಕಷ್ಟು ಪ್ರವಾಸಿತಾಣಗಳಿವೆ-ಡಾ.ಆರ್.ಸೆಲ್ವಮಣಿ

Date:

Dr. Selvamani R ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಸ್ಕಾಲ್‌ ಇಂಟರ್‌ನ್ಯಾಷನಲ್‌ ಇಂಡಿಯಾ ವತಿಯಿಂದ ಅಕ್ಟೋಬರ್‌ ತಿಂಗಳಿನಲ್ಲಿ ನಡೆಯಲಿರುವ ಸ್ಕಾಲ್‌ ಇಂಡಿಯಾ ಕಾಂಗ್ರೆಸ್‌ ಕಾರ್ಯಕ್ರಮದ ʼಫ್ಲಾಗ್‌‌ ಆಫ್‌ ಫೇತ್ʼ ಅನ್ನು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್. ಅವರು ಬಿಡುಗಡೆ ಮಾಡಿದರು.

ಶಿವಮೊಗ್ಗದ ಒಕ್ಕಲಿಗರ ಭವನದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸ್ಕಾಲ್‌ ಸಂಸ್ಥೆಯು ನಡೆಸುತ್ತಿರುವ ಈ ಕಾರ್ಯಕ್ರಮ ಶ್ಲಾಘನೀಯ. ಶಿವಮೊಗ್ಗದಲ್ಲಿ ಬಹಳಷ್ಟು ಪ್ರವಾಸಿ ತಾಣಗಳಿವೆ. ಇಲ್ಲಿನ ಪ್ರವಾಸೋದ್ಯಮ ಸಾಕಷ್ಟು ಅಭಿವೃದ್ಧಿಯಾಗಲಿದೆ. ಇಂತಹ ಕಾರ್ಯಕ್ರಮಕ್ಕೆ ನಮ್ಮ ಸಹಕಾರ ಸದಾ ಇರುತ್ತದೆ ಎಂದರು.

ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸ್ಕಾಲ್‌ ಇಂಡಿಯಾ ಕಾಂಗ್ರೆಸ್‌ನ ಚೇರ್‌ಮನ್‌ ಸುದೀಪ್ತಾ ಮಾತನಾಡಿ, ಕೊರೊನಾದಿಂದ ಬಹಳಷ್ಟು ನಷ್ಟ ಅನುಭವಿಸಿದ ಕ್ಷೇತ್ರಗಳ ಪೈಕಿ ಪ್ರವಾಸೋದ್ಯಮ ಪ್ರಮುಖವಾದುದು. ಕರ್ನಾಟಕದ ಪ್ರವಾಸೋದ್ಯಮವನ್ನು ಉತ್ತೇಜಿಸಿ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ರಾಜ್ಯ ಹೆಸರು ಮಾಡುವಂತೆ ಮಾಡುವುದು ನಮ್ಮ ಉದ್ದೇಶ. ಮೈಸೂರು ಹಾಗೂ ಬೆಂಗಳೂರಿನಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಎಕ್ಸಿಬಿಷನ್‌ಗಳು, ಚರ್ಚಾಕೂಟಗಳು ಇರಲಿವೆ ಎಂದು ವಿವರಿಸಿದರು.

ಸ್ಕಾಲ್‌ ಬೆಂಗಳೂರು ವಿಭಾಗದ ಅನುರಾಗ್‌ ಗುಪ್ತಾ ಮಾತನಾಡಿ, ಶಿವಮೊಗ್ಗದಲ್ಲಿ ಸಾಕಷ್ಟು ಪ್ರವಾಸಿ ತಾಣಗಳಿವೆ. ಪ್ರಕೃತಿಯ ಮಡಿಲಿನಲ್ಲಿ ಸಮಯ ಕಳೆಯಬೇಕು ಎನ್ನುವವರು ಶಿವಮೊಗ್ಗಕ್ಕೆ ಬರಬೇಕು. ಇಲ್ಲಿನ ಪ್ರವಾಸೋದ್ಯಮವನ್ನು ರಾಷ್ಟ್ರಮಟ್ಟದಲ್ಲಿ ಪ್ರಸಿದ್ಧವಾಗಿಸಲು ಸ್ಕಾಲ್‌ ಕಾಂಗ್ರೆಸ್‌ ಕಾರ್ಯಕ್ರಮ ಸಹಕಾರಿಯಾಗಲಿದೆ.

ಕಾರ್ಯಕ್ರಮದಲ್ಲಿ ನಡೆಯುವ ಎಕ್ಸಿಬಿಷನ್‌ನಲ್ಲಿ ಶಿವಮೊಗ್ಗ ಪ್ರವಾಸೋದ್ಯಮವನ್ನು ಪರಿಚಯಿಸುವ ಮಳಿಗೆ ಸಹ ಇರಲಿದೆ. ಈ ಕಾರ್ಯಕ್ರಮದಿಂದ ಒಟ್ಟಾರೆಯಾಗಿ ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಯಾಗಲಿದೆ ಎಂದು ತಿಳಿಸಿದರು.

Dr. Selvamani R ಸ್ಕಾಲ್‌ ಇಂಟರ್‌ನ್ಯಾಷನಲ್‌ ಇಂಡಿಯಾ ವತಿಯಿಂದ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಅಕ್ಟೋಬರ್‌4ರಿಂದ 7ರವರೆಗೆ ಮೈಸೂರು ಹಾಗೂ ಬೆಂಗಳೂರಿನಲ್ಲಿ ಸ್ಕಾಲ್‌ಇಂಡಿಯಾ ಕಾಂಗ್ರೆಸ್‌ ಕಾರ್ಯಕ್ರಮ ನಡೆಯಲಿದೆ. ಪ್ರವಾಸೋದ್ಯಮದ ಏಳಿಗೆಗೆ, ಅಭಿವೃದ್ಧಿಗೆ ಶ್ರಮಿಸುವ ವೃತ್ತಿಪರರ ಸಮಾಗಮ ಇದಾಗಿದೆ. ಈ ನಿಟ್ಟಿನಲ್ಲಿ ಮುಂದಿನ ಮೂರು ತಿಂಗಳುಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸೋದ್ಯಮಕ್ಕೆ ಸಂಬಂಧಪಟ್ಟ ವಿವಿಧ ಚಟುವಟಿಕೆಗಳು ನಡೆಯಲಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...