Monday, February 2, 2026
Monday, February 2, 2026

2023 Karnataka Budget ರಾಜ್ಯದ ಬಜೆಟ್ ರೈತಾಪಿ ಮತ್ತು ಸಾರ್ವಜನಿಕ ಹಿತ ರಕ್ಷಣೆ ಗುರಿಯಾಗಿಸಿದೆ

Date:

2023 Karnataka Budget ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಜನಪರ, ರೈತಾಪಿ ವರ್ಗ ಹಾಗೂ ಸಾರ್ವಜನಿಕರ ಹಿತ ಕಾಪಾಡುವ ಬಜೆಟ್ ಆಗಿದೆ ಎಂದು ಕೆಪಿಸಿಸಿ ರಾಜ್ಯ ವಕ್ತಾರ ಹೆಚ್.ಹೆಚ್. ದೇವರಾಜ್ ಸ್ವಾಗತಿಸಿದ್ದಾರೆ.

ಈ ಸಂಬಂಧ ಶನಿವಾರ ಹೇಳಿಕೆಯಲ್ಲಿ ತಿಳಿಸಿರುವ ಅವರು ಕಳೆದ ಚುನಾವಣಾ ಸಮಯದಲ್ಲಿ ನೀಡಿದಂತಹ ಐದು ಗ್ಯಾರಂಟಿಗಳನ್ನು ಈಡೇರಿಸುವ ಸಲುವಾಗಿ ಹಣ ಮೀಸಲಿಡಲಾಗಿದೆ. ನೀರಾವರಿ ಆದ್ಯತೆ ಹಾಗೂ ಅಂಗನವಾಡಿ ಶಿಕ್ಷಕರು ಹಾಗೂ ಆಶಾಕಾರ್ಯಕರ್ತೆಯರಿಗೆ ವೇತನ ಪರಿಷ್ಕರಣೆ ಮಾಡುವ ಮೂಲಕ ನೀಡಿದಂತಹ ಭರವಸೆ ಈಡೇರಿಸಲಾಗಿದೆ ಎಂದಿದ್ದಾರೆ.

ಗ್ರಾಂಡ್ ಬೆಂಗಳೂರಿಗೆ 42 ಸಾವಿರ ಕೋಟಿ ಮೀಸಲಿಡುವ ಮೂಲಕ ಇತಿಹಾಸ ದಾಖಲು ಮಾಡಲಾಗಿದೆ. ರೈತರಿಗೆ 3 ಲಕ್ಷದವರೆಗೆ ಬಡ್ಡಿ ಸಾಲವನ್ನು 5 ಲಕ್ಷ ಹಾಗೂ ಅಭಿವೃದ್ದಿ ಸಾಲವನ್ನು 10 ಲಕ್ಷದಿಂದ 20 ಲಕ್ಷಕ್ಕೆ ಏರಿಸಲಾಗಿದೆ.

2023 Karnataka Budget ಗಿರಿತಪ್ಪಲಿನ ಬೆಳೆಗಾರರಿಗೂ ಕಾಫಿ ಬ್ರಾಂಡ್ ಮಾಡುವ ಮೂಲಕ ಅನುಕೂಲ ಕಲ್ಪಿಸಲಾಗಿದೆ ಎಂದಿದ್ದಾರೆ.
ಒಟ್ಟಾರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು 15ನೇ ಬಾರಿಗೆ ಮಂಡಿಸಿರುವ ಬಜೆಟ್ ಸಾರ್ವಜನಿಕ, ಜನಪರ ಹಾಗೂ ಅಭಿವೃದ್ದಿಪರ ಬಜೆಟ್ ಆಗಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...