Sunday, December 14, 2025
Sunday, December 14, 2025

Thirthahalli to Haralimata Road ತೀರ್ಥಹಳ್ಳಿಯ ಕುರುವಳಿ ಟು ಹರಳಿಮಠ ರಸ್ತೆ ಕೆಸರುಮಯ: ಓಡಾಟಕ್ಕೆ ದುಸ್ಸಾಹಸ

Date:

Thirthahalli to Haralimata Road : ಓಡಾಟಕ್ಕೆ ದುಸ್ಸಾಹಸ ತೀರ್ಥಹಳ್ಳಿಯ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುವಳ್ಳಿಯಿಂದ ಹರಳಿಮಠ ಹೊಗುವ ರಸ್ತೆಯ ಕೊಮನೆ ಬಸ್ ನಿಲ್ದಾಣ ಎದುರು ಅರಣ್ಯ ಇಲಾಖೆ ಅಧಿಕಾರಿಗಳ ಬೆಜಾವಬ್ದಾರಿಯಿಂದ ರಸ್ತೆ ಸಂಪೂರ್ಣ ಕೆಸರು ಮಯವಾಗಿದೆ.

ಈ ಭಾಗದ ಅನೇಕ ಸಾರ್ವಜನಿಕರು, ರೈತರು, ಶಾಲಾ ಮಕ್ಕಳು, ವಯೋವೃದ್ದರು ಈ ಮಾರ್ಗದಲ್ಲಿ ಪಟ್ಟಣಕ್ಕೆ ನಿತ್ಯ ಹೋಗಲು ಬರಲು ಇರುವುದು ಇದೊಂದೆ ಮಾರ್ಗವಾಗಿದ್ದು ಈಗಾಗಲೇ ಈ ಟಾರ್ ರಸ್ತೆ ಈಗ ಕೆಸರಿನ ರಸ್ತೆಯಾಗಿ ಮಾರ್ಪಟ್ಟಿದೆ. ಎರಡು ಮೂರುಜನ ಬೈಕ್ ಸವಾರರು ರಸ್ತೆಯಲ್ಲಿ ಬಿದ್ದ ಘಟನೆ ಕೂಡ ನಡೆದಿದೆ.

ಟಾರ್ ರಸ್ತೆ ಈಗ ಕೆಸರು ರಸ್ತೆಯಾದರು ಕೂಡ ಸಾರ್ವಜನಿಕರು ಕೆಸರಲ್ಲೆ ಓಡಾಡಿದರು ಕೂಡ
ಸಂಬಂಧ ಪಟ್ಟ ಅಧಿಕಾರಿಗಳ ಕಣ್ಣಿಗೆ ಕಾಣುತ್ತಿಲ್ಲ ಎಂಬ ಮಾತು ಅ ಭಾಗದ ಸಾರ್ವಜನಿಕರಿಂದ ಕೇಳಿ ಬರುತ್ತಿದೆ. ದಿನನಿತ್ಯ ನೂರಾರು ಸಾರ್ವಜನಿಕರು, ನೂರಾರು ವಾಹನಗಳು ಸಂಚರಿಸುವ ರಸ್ತೆಯ ಈ ಅವ್ಯವಸ್ಥೆ ಎರಡು ವರ್ಷಗಳಿಂದ ಮುಂದುವರೆಯುತ್ತಿದೆ.

Thirthahalli to Haralimata Road : ಓಡಾಟಕ್ಕೆ ದುಸ್ಸಾಹಸ ಇನ್ನಾದರೂ ಸಂಬಂಧ ಪಟ್ಟ ಅಧಿಕಾರಿಗಳು ಈ ಗ್ರಾಮದ ಕೆಸರುಗದ್ದೆ ರಸ್ತೆ ಕಡೆ ಗಮನಹರಿಸಿ ಸಾರ್ವಜನಿಕರಿಗೆ ಆಗುವ ಸಮಸ್ಯೆಯನ್ನು ಬಗೆಹರಿಸಿ ವಾಹನ ಸಂಚರಿಸಲು ಅನುವು ಮಾಡಿಕೊಡಬೇಕೆಂದು ಬಿಜೆಪಿ ಮುಖಂಡರಾದ ಮುನ್ನೂರು ರಾಮಚಂದ್ರ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...