Tuesday, February 3, 2026
Tuesday, February 3, 2026

Department of Empowerment of Persons with Disabilities and Senior Citizens ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ವಿವಿಧ ಯೋಜನೆ ಪಡೆಯಲು ಅರ್ಜಿಆಹ್ವಾನ

Date:

Department of Empowerment of Persons with Disabilities and Senior Citizens 2023-24 ನೇ ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಡಿ ಫಲಾನುಭವಿ ಆಧಾರಿತವಾದ 08 ಯೋಜನೆಗಳಡಿ ಸೌಲಭ್ಯ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆರಿಟ್ ವಿದ್ಯಾರ್ಥಿವೇತನಕ್ಕಾಗಿ ಬಹುಮಾನ ಹಣ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-08-2023 ಹಾಗೂ ಅಂತಿಮ ದಿನಾಂಕ: 31-08-2023 ಆಗಿರುತ್ತದೆ.

ಆನ್‍ಲೈನ್ ಮೂಲಕ ಸಲ್ಲಿಸಿದ ಅರ್ಜಿಗಳ ಹಾರ್ಡ್ ಪ್ರತಿಯನ್ನು ದಾಖಲಾತಿಗಳೊಂದಿಗೆ ಲಗತ್ತಿಸಿ ದ್ವಿಪ್ರತಿಯಲ್ಲಿ ಆಯಾ ತಾಲ್ಲೂಕಿನ ಗ್ರಾ.ಪಂ ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು(ವಿ.ಆರ್.ಡಬ್ಲ್ಯು) ಹಾಗೂ ತಾಲ್ಲೂಕು ಮಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು(ಎಂಆರ್‍ಡಬ್ಲ್ಯು) ಗಳಿಗೆ ನೀಡಬೇಕು.

Department of Empowerment of Persons with Disabilities and Senior Citizens ಹೆಚ್ಚಿನ ಮಾಹಿತಿಗೆ ಆಯಾ ತಾಲ್ಲೂಕಿನ ಎಂಆರ್‍ಡಬ್ಲ್ಯು ದೂ.ಸಂಖ್ಯೆ : ಶಿವಮೊಗ್ಗ 9980150110, ಭದ್ರಾವತಿ 7899137243, ಶಿಕಾರಿಪುರ 9741161346, ತೀರ್ಥಹಳ್ಳಿ 9480767638, ಸಾಗರ 9535247757, ಸೊರಬ 9110493122, ಹೊಸನಗರ 9731922693 ಹಾಗೂ ಜಿಲ್ಲಾ ಅಂಗವಿಕಲರ ಕಚೇರಿಯನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...