Sunday, December 14, 2025
Sunday, December 14, 2025

HD Thammaiah ಶಾಸಕರ ದಲಿತ ವಿರೋಧಿ ನಡೆ ಬಗ್ಗೆ ಜಿಲ್ಲಾ ದಸಂಸ ಅಸಮಾಧಾನ

Date:

HD Thammaiah ದಲಿತ ವಿರೋಧಿ ನೀತಿ ಅನುಸರಿಸುತ್ತಿರುವ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಹೆಚ್.ಡಿ.ತಮ್ಮಯ್ಯ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಸಂಸ (ಪ್ರೊ.ಕೃಷ್ಣಪ್ಪ ಸ್ಥಾಪಿತ) ಮುಖಂಡರುಗಳು ಜಿಲ್ಲಾಡಳಿತ ಮೂಲಕ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.

ಈ ಸಂಬಂಧಿ ಅಪರ ಚಿಕ್ಕಮಗಳೂರು ಜಿಲ್ಲಾಧಿಕಾರಿ ನಾರಾಯಣರೆಡ್ಡಿ ಅವರಿಗೆ ಬುಧವಾರ ಮನವಿ ಸಲ್ಲಿಸಿದ ದಸಂಸ ಪದಾಧಿಕಾರಿಗಳು ದಲಿತ ಸಮುದಾಯದ ನಗರಸಭಾ ಪೌರಾಯುಕ್ತ ಅಧಿಕಾರಿಯನ್ನು ವರ್ಗಾವಣೆಗೊಳಿಸಿ ವಿರೋಧಿ ನಡೆ ಅನುಸರಿಸುತ್ತಿದ್ದಾರೆ ಎಂದು ದೂರಿದರು.

ಈ ವೇಳೆ ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ಕಬ್ಬಿಗೆರೆ ಮೋಹನ್‌ಕುಮಾರ್ ಕಳೆದ ನಾಲ್ಕು ತಿಂಗಳು ನಗರಸಭೆ ಪೌರಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ದಲಿತ ಅಧಿಕಾರಿ ನಗರಸಭೆಯ ಭ್ರಷ್ಟಚಾರವನ್ನು ತಡೆ ಹಿಡಿದು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದರು.

ನಗರ ಸಭೆಯಲ್ಲಿ ಈ ಹಿಂದೆ ಆಯುಕ್ತರಾಗಿ ಕಾರ್ಯನಿರ್ವಹಿಸಿದವರು ಅತಿಹೆಚ್ಚು ಭ್ರಷ್ಟಚಾರವೆಸಗಿದ್ದರು. ಅವರ ವಿರುದ್ಧ ಹಲವಾರು ಕೇಸುಗಳು ಲೋಕಾಯುಕ್ತದಲ್ಲಿ ದಾಖಲಾಗಿತ್ತು. ಈ ಬಗ್ಗೆ ಕ್ಷೇತ್ರದ ಶಾಸಕರು ಸ್ವಜಾತೀಯ ಪ್ರೇಮದಿಂದ ಮೌಖಿಕವಾಗಿ ಮನವಿ ಮಾಡಿ ಭ್ರಷ್ಟç ಅಧಿಕಾರಿಯನ್ನು ರಾಜಕೀಯ ಪ್ರಭಾವ ಬಳಸಿ ಮಗದೊಮ್ಮೆ ಆಯುಕ್ತರಾಗಿ ಮಾಡಿರುವುದು ಜನತೆಯ ದುದೈರ್ವ ಎಂದರು.
ಕ್ಷೇತ್ರದ ಶಾಸಕರು ದಲಿತ ಅಧಿಕಾರಿ ಉಮೇಶ್ ಅವರನ್ನು ವರ್ಗಾವಣೆಗೊಳಿಸಿ ಹಿಂದಿನ ಅಧಿಕಾರಿ ಬಸವರಾಜ್ ಅವರಿಗೆ ಆದ್ಯತೆ ನೀಡಿರುವುದು ಸೂಕ್ತವಲ್ಲ. ಇದನ್ನು ಮುಂದಿನ ದಿನಗಳಲ್ಲಿ ದಲಿತ ಸಮುದಾಯ ಪಾಠ ಕಲಿಸದೇ ಬಿಡುವುದಿಲ್ಲ ಎಂದರು.

ಕಾಂಗ್ರೆಸ್ ಸರ್ಕಾರ ದಲಿತರ ಪರ ಎಂದು ಹೇಳುತ್ತಿದೆಯಾದರೂ ಪೌರಾಯುಕ್ತರ ವರ್ಗಾವಣೆಯ ಈ ನಿರ್ಧಾರ ದಲಿತರಿಗೆ ಮಾಡಿದ ಅನ್ಯಾಯವಾಗಿದೆ. ಈ ಬಗ್ಗೆ ಕಾಂಗ್ರೇಸ್ ದಲಿತ ನಾಯಕರು ಹಾಗೂ ಮುಖಂಡರುಗಳು ಧ್ವನಿ ಎತ್ತದಿರುವುದು ವಿಷಾಧನೀಯ ಎಂದು ತಿಳಿಸಿದರು.

HD Thammaiah ಈ ಸಂದರ್ಭದಲ್ಲಿ ದಸಂಸ ಮಹಿಳಾ ಜಿಲ್ಲಾ ಸಂಚಾಲಕಿ ಅರುಣಾಕ್ಷಿ, ಮುಖಂಡರಾದ ದಿಲೀಪ್, ರೇಣುಕ ಹಾಜರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...