Sunday, December 14, 2025
Sunday, December 14, 2025

M. B. Patil ಪ್ರತಿಷ್ಠಿತ ಟಾಟಾ ಟೆಕ್ನಾಲಜೀಸ್ ಕಂಪನಿಯಿಂದ ರಾಜ್ಯದಲ್ಲಿ ₹ 2000 ಹೂಡಿಕೆ ಪ್ರಸ್ತಾಪ- ಸಚಿವ ಎಂ.ಬಿ.ಪಾಟೀಲ್

Date:

M. B. Patil ಪ್ರತಿಷ್ಠಿತ ಟಾಟಾ ಟೆಕ್ನಾಲಜೀಸ್ ಕಂಪನಿಯು 2000 ಕೋಟಿ ರೂಪಾಯಿ ಹೂಡಿಕೆ ಮಾಡಿ ರಾಜ್ಯದಲ್ಲಿ ಮೂರು ಸಾಮಾನ್ಯ ಎಂಜಿನಿಯರಿಂಗ್ ಸೌಲಭ್ಯಗಳ ಕೇಂದ್ರ (ಸಿ ಇ ಎಫ್ ಸಿ- ಕಾಮನ್ ಎಂಜಿನಿಯರಿಂಗ್ ಫೆಸಿಲಿಟಿ ಸೆಂಟರ್)ಗಳನ್ನು ಸ್ಥಾಪಿಸಲು ಮುಂದೆ ಬಂದಿದೆ.

ಕಂಪನಿಯ ಉನ್ನತ ಅಧಿಕಾರಿಗಳು ಬುಧವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾಗಿ ಈ ಸಂಬಂಧ ಪ್ರಸ್ತಾವ ಸಲ್ಲಿಸಿ ಮಾತುಕತೆ ನಡೆಸಿದರು.

ವಿಶೇಷವಾಗಿ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳನ್ನು (ಎಂಎಸ್ಎಂಇ) ಗಳನ್ನು ಗಮನದಲ್ಲಿರಿಸಿಕೊಂಡು ಈ ಘಟಕಗಳ ಕೇಂದ್ರಗಳನ್ನು ಸ್ಥಾಪಿಸುವುದು ಕಂಪನಿಯ ಉದ್ದೇಶವಾಗಿದೆ. ಸರ್ಕಾರ‌ ಖಾಸಗಿ ಸಹಭಾಗಿತ್ವದ ಪಿಪಿಪಿ ಮಾದರಿಯಲ್ಲಿ ಇದನ್ನು ಸ್ಥಾಪಿಸುವ ಯೋಜನೆಯಿದ್ದು, ಟಾಟಾ ಟೆಕ್ನಾಲಜೀಸ್ ಶೇಕಡ 70ರಷ್ಟು ಹೂಡಿಕೆ ಮಾಡಿದರೆ ಸರ್ಕಾರದ ಪಾಲು ಶೇಕಡ 30ರಷ್ಟು ಇರಲಿದೆ ಎಂದು ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

ಎಂಎಸ್ಎಂಇಗಳಿಗಾಗಿ ಸಿ.ಇ.ಎಫ್.ಸಿ. ಸ್ಥಾಪನೆ ಸಂಬಂಧ ಪ್ರಸ್ತಾವ ಸಲ್ಲಿಕೆಯಾಗಿರುವುದು ರಾಜ್ಯದಲ್ಲಿ ಇದೇ ಮೊದಲು ಎನ್ನಲಾಗಿದೆ.

ಪ್ರತಿ ಒಂದು ಕೇಂದ್ರಕ್ಕೆ ಸುಮಾರು 630 ಕೋಟಿ ರೂಪಾಯಿ ವೆಚ್ಚವಾಗಲಿದೆ.
ಇವುಗಳಿಂದ ಈಗ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾಪನೆಯಾಗುತ್ತಿರುವ
ಅಡ್ವಾನ್ಸ್ ಮ್ಯಾನಫ್ಯಾಕ್ಚರಿಂಗ್ 4.0, ಎಲೆಕ್ಟ್ರಿಕ್ ವೆಹಿಕಲ್ ಟೆಸ್ಟಿಂಗ್ ಮತ್ತು ಬಾಹ್ಯಾಕಾಶ ಹಾಗೂ ರಕ್ಷಣಾ ವಲಯದ ಉದ್ದಿಮೆಗಳಿಗೆ ಹೆಚ್ಚಿನ ಉಪಯೋಗ ಆಗುತ್ತದೆ. ಅದೇ ರೀತಿ ಈ ವಲಯಗಳ ಸ್ಟಾರ್ಟ್ ಅಪ್ ಗಳಿಗೂ ಇದರಿಂದ ಹೆಚ್ಚಿನ ಅನುಕೂಲವಾಗುತ್ತದೆ ಎಂದು ವಿವರಿಸಿದರು.

ಈ ಪ್ರಸ್ತಾವ‌ ಸ್ವಾಗತಾರ್ಹ. ಸರ್ಕಾರವೂ ಎಂ.ಎಸ್.ಎಂ.ಇ.ಗಳನ್ನು ಬಲಪಡಿಸಲು ಒತ್ತು ಕೊಟ್ಟಿದೆ. ಪ್ರತಿ ಕೇಂದ್ರಕ್ಕೆ ಸುಮಾರು ಐದು ಎಕರೆಯಷ್ಟು ಜಾಗ ಬೇಕಾಗಲಿದ್ದು, ಇದನ್ನು ಎಲ್ಲಿ ಕೊಡಬೇಕೆಂಬ ಬಗ್ಗೆ ಬರುವ ದಿನಗಳಲ್ಲಿ ನಿರ್ಧರಿಸಲಾಗುತ್ತದೆ ಎಂದು ಅವರು ಹೇಳಿದರು.

ಟಾಟಾ ಟೆಕ್ನಾಲಜೀಸ್ ಅಧ್ಯಕ್ಷ ಪವನ್ ಭಗೇರಿಯಾ, ಉಪಾಧ್ಯಕ್ಷ ಪುಷ್ಕರಾಜ್ ಕೌಲಗೂಡ್, ಮುಖ್ಯಸ್ಥ ಪ್ರವೀಣ್ ದಿವೇಕರ್ ಅವರು ಇದ್ದರು.
M. B. Patil ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ ಅವರೂ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...