Thursday, June 18, 2026
Thursday, June 18, 2026

Department of Social Welfare ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಿಗೆ ಪ್ರವೇಶ ಪರೀಕ್ಷೆ

Date:

Department of Social Welfare ಶಿವಮೊಗ್ಗ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯು 2023-24ನೇ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಿಗೆ 6ನೇ ತರಗತಿಗೆ ವಿಶೇಷ ದುರ್ಬಲ ವರ್ಗದಡಿ ಗುರುತಿಸಲ್ಪಟ್ಟ ಪೌರ ಕಾರ್ಮಿಕರ/ ಸಫಾಯಿ ಕರ್ಮಚಾರಿ/ ಮ್ಯಾನ್ಯುಯಲ್ ಸ್ಯಾ0ವೆಂಜರ್/ ಸ್ಮಶಾನ ಕಾರ್ಮಿಕರ/ ದೇವದಾಸಿ/ ಅಲೆಮಾರಿ/ ಅರೆ ಅಲೆಮಾರಿ ಸಮುದಾಯದ ಮಕ್ಕಳಿಗೆ ಪ್ರವೇಶ ಪರೀಕ್ಷೆಯಿಲ್ಲದೆ ಪ್ರವೇಶ ಕಲ್ಪಿಸಲು ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ವಸತಿ ಶಾಲೆಗಳಲ್ಲಿ 6 ರಿಂದ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ಉಚಿತ ವಸತಿ, ಊಟ ಸಹಿತ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು, ಆಸಕ್ತರು ಹತ್ತಿರದ ಯಾವುದಾದರೂ ಮೊರಾರ್ಜಿ ದೇಸಾಯಿ/ ಕಿತ್ತೂರು ರಾಣಿ ಚೆನ್ನಮ್ಮ/ ಶ್ರೀಮತಿ ಇಂದಿರಾ ಗಾಂಧಿ/ ಡಾ. ಬಿ.ಆರ್. ಅಂಬೇಡ್ಕರ್/ ಅಟಲ್ ಬಿಹಾರಿ ವಾಜಪೇಯಿ/ ಶ್ರೀ ನಾರಾಯಣ ಗುರು ವಸತಿ ಶಾಲೆಗಳಿಗೆ ಭೇಟಿ ನೀಡಿ, ಹೆಚ್ಚಿನ ಮಾಹಿತಿ ಪಡೆದು ೬ನೇ ತರಗತಿ ದಾಖಲಾತಿಗಾಗಿ ಸೂಕ್ತ ದಾಖಲೆಗಳೊಂದಿಗೆ ತಮ್ಮ ಮನವಿಯನ್ನು ಜುಲೈ- ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Department of Social Welfare ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಪ್ರಾಂಶುಪಾಲರು 9964760766 , ಭದ್ರಾವತಿ-990220754, ತೀರ್ಥಹಳ್ಳಿ-9972662860, ಸಾಗರ – 9449758378, ಹೊಸನಗರ-9620793267, ಶಿಕಾರಿಪುರ 9901325156 ಹಾಗೂ ಸೊರಬ-9740934526 ಗಳನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...