Monday, December 15, 2025
Monday, December 15, 2025

Bagar Hukum Land ಬಗರ್ ಹುಕುಂ ರೈತರ ಬಗ್ಗೆ ಶಾಸಕ ವಿಜಯೇಂದ್ರ ಅವರದ್ದು ಮೊಸಳೆ ಕಣ್ಣೀರು-ರಾಜ್ಯ ಯುವ ಕಾಂಗ್ರೆಸ್

Date:

Bagar Hukum Land ಬಗರ್ ಹುಕುಂ ರೈತರ ಬಗ್ಗೆ ಶಾಸಕ ಬಿ.ವೈ. ವಿಜಯೇಂದ್ರ ಮೊಸಳೆ ಕಣ್ಣೀರಿಡುತ್ತಿದ್ದಾರೆ ಎಂದು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಚೇತನ್ ವ್ಯಂಗ್ಯವಾಡಿದ್ದಾರೆ.
ಬುಧವಾರ ಸದನದಲ್ಲಿ ಮಾತನಾಡಿರುವ ವಿಜಯೇಂದ್ರ ಅವರು, ಬಗರ್ ಹುಕುಂ ರೈತರಿಗೆ ಅಧಿಕಾರಿಗಳು ನೋಟೀಸ್ ಕೊಡುತ್ತಿದ್ದಾರೆ. ರೈತರ ಸಮಸ್ಯೆ ಬಗೆಹರಿಯುತ್ತಿಲ್ಲ. ಮೂರುತಲೆಮಾರಿನ ದಾಖಲೆಗಳನ್ನು ಕೇಳುತ್ತಿದ್ದಾರೆ. ಇದೆಲ್ಲಾ ರೈತವಿರೋಧಿ ನೀತಿಯಾಗಿದೆ ಎಂದಿದ್ದಾರೆ.

ವಿಜಯೇಂದ್ರ ಅವರು ಈಗ ಶಾಸಕರಾದ ಕೂಡಲೇ ಬಗರ್‍ಹುಕುಂ ರೈತರ ಬಗ್ಗೆ ಮೊಸಳೆ ಕಣ್ಣೀರಿಡುತ್ತಿದ್ದಾರೆ ಎಂದಿದ್ದಾರೆ.

ವಿಜಯೇಂದ್ರ ಅವರ ತಂದೆ ಬಿ.ಎಸ್. ಯಡಿಯೂರಪ್ಪನವರು 4 ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ರೈತಪರ ಹೋರಾಟಗಳ ಮೂಲಕವೇ ರಾಜಕೀಯವಾಗಿ ಬೆಳೆದ ಅವರು ತಮ್ಮ ಅಧಿಕಾರಾವಧಿಯಲ್ಲಿ ಬಗರ್‍ಹುಕುಂ ರೈತರ ಸಮಸ್ಯೆ ಬಗೆಹರಿಸಲಿಲ್ಲ. ಅವರ ಅಣ್ಣ ಬಿ.ವೈ. ರಾಘವೇಂದ್ರ ಅವರು 3 ಬಾರಿ ಸಂಸದರಾಗಿದ್ದಾರೆ.

Bagar Hukum Land ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೂ ಬಗರ್‍ಹುಕುಂ ರೈತರ ಸಮಸ್ಯೆ ಬಗೆಹರಿಸುವ ಗೋಜಿಗೆ ಹೋಗಿಲ್ಲ. ಈಗ ಸದನದಲ್ಲಿ ಬಗರ್ ಹುಕುಂ ರೈತರ ಬಗ್ಗೆ ಮಾತನಾಡುತ್ತಿದ್ದಾರೆ.
ತಮಗೆ ಅಧಿಕಾರ ಇದ್ದಾಗ ರೈತರ ಬಗ್ಗೆ ಕಾಳಜಿ ತೋರಿಸದ ವಿಜಯೇಂದ್ರ ಅವರಿಗೆ ಈಗ ರೈತರ ಬಗ್ಗೆ ಕಾಳಜಿ ಉಂಟಾಗಿದೆ. ಈ ರೀತಿ ರಾಜ್ಯ ಸರ್ಕಾರದ ಮೇಲೆ ಆರೋಪ ಹೊರಿಸುವುದು ಬಿಟ್ಟು, ತಮ್ಮ ಸಹೋದರ ಬಿ.ವೈ. ರಾಘವೇಂದ್ರ ಹಾಗೂ ತಂದೆ ಬಿ.ಎಸ್. ಯಡಿಯೂರಪ್ಪನವರ ಪ್ರಭಾವ ಬಳಸಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲಿ ಎಂದು ಕೆ. ಚೇತನ್ ಸಲಹೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...