Monday, May 4, 2026
Monday, May 4, 2026

Chikkamagaluru ಪ್ರೇಮಿಗಳ ದಾರುಣ ಅಂತ್ಯದ ಬಗ್ಗೆ ಆರೋಪಿಗಳಿಗೆ ಶಿಕ್ಷೆ ನೀಡಲು ದಸಂಸ ಒತ್ತಾಯ

Date:

Chikkamagaluru ದಲಿತ ಯುವಕ ಮತ್ತು ಮೇಲ್ವರ್ಗದ ಯುವತಿ ಪರಸ್ಪರ ಪ್ರೇಮಿಸಿದ ಕಾರಣ ಕುಟುಂಬದವರು ಮಗಳನ್ನು ಹತ್ಯೆಗೈದು ಯುವಕನ ಸಾವಿನ ಕಾರಣವಾಗಿದೆ. ಅಂತಹವರ ವಿರುದ್ಧ ಕಠಿಣ ಶಿಕ್ಷೆ ವಿಧಿಸಿ ಗಡಿಪಾರು ಮಾಡಬೇಕು ಎಂದು ಜಿಲ್ಲಾ ದಸಂಸ (ಪ್ರೊ.ಕೃಷ್ಣಪ್ಪ ಸ್ಥಾಪಿತ) ರಾಜ್ಯ ಸರ್ಕಾರವನ್ನು ಒತ್ತಾಯಿ ಸಿದ್ದಾರೆ.

ಈ ಸಂಬಂಧ ಗುರುವಾರ ಹೇಳಿಕೆಯಲ್ಲಿ ತಿಳಿಸಿರುವ ದಸಂಸ ಜಿಲ್ಲಾ ಸಂಚಾಲಕ ಕಬ್ಬಿಕೆರೆ ಮೋಹನ್ ಕುಮಾರ್ ಅವರು ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಗಂಗಾರಾಜು ಎಂಬುವ ದಲಿತ ಯುವಕ ಮೇಲ್ವರ್ಗದ ಯುವತಿ ಕೀರ್ತಿ ಪರಸ್ಪರ ಪ್ರೇಮಿಸುತ್ತಿದ್ದರು. ಇದನ್ನು ಸಹಿಸಲಾಗದ ಆಕೆಯ ಕುಟುಂಬದವರು ಕತ್ತುಹಿಸುಕಿ ಕೊಲೆಗೈದಿರುವುದಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.
ಕೀರ್ತಿ ಕುಟುಂಬದವರು ಹೀನಾಯವಾಗಿ ಹತ್ಯೆಗೈದಿರುವ ಪರಿಣಾಮ ಇದನ್ನು ಸಹಿಸಿಕೊಳ್ಳಲಾರದ ಯುವಕ ಗಂಗಾರಾಜು ಆತ್ಮಹತ್ಯೆಗೆ ಶರಣಾಗಿರುವ ಧಾರುಣ ಘಟನೆ ಸಂಭವಿಸಿದೆ. ಈ ಸಂಬಂಧ ರಾಜ್ಯಸರ್ಕಾರ ಯುವತಿ ಯ ಕುಟುಂಬದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Chikkamagaluru ಜಾತ್ಯಾತೀತ ದೇಶದಲ್ಲಿ ಹೊಸ ಉತ್ಸಾಹವನ್ನಿಟ್ಟುಕೊಂಡು ಪ್ರೇಮಿಸಿದ ಜೋಡಿಗಳನ್ನು ಕೇವಲ ಜಾತಿ ಆಧಾರದ ಹೆಸರಿನಲ್ಲಿ ಕತ್ತುಹಿಸುಕಿ ಕೊಲೆಗೈದಿರುವುದು ದುರ್ದೈವದ ಸಂಗತಿ. ಇಂತಹ ಹೀನಾಮನಸ್ಸಿನ ವ್ಯಕ್ತಿಗಳಿ ಗೆ ರಾಜ್ಯಸರ್ಕಾರ ಕಠಿಣ ಶಿಕ್ಷೆ ವಿಧಿಸಿ ದೇಶದಿಂದ ಗಡಿಪಾರು ಮಾಡಬೇಕು ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...