Saturday, April 19, 2025
Saturday, April 19, 2025

Akashvani Bhadravati ಆಕಾಶವಾಣಿ ಭದ್ರಾವತಿ ಕೇಂದ್ರದಿಂದ “ಯುಎಎಚ್ಎಸ್ ನೇಗಿಲ ಮಿಡಿತ” ಸರಣಿ

Date:

Akashvani Bhadravati ಶಿವಮೊಗ್ಗ, ದಾವಣಗೆರೆ ಹಾಗೂ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿ ಹೊಂದಿರುವ ಆಕಾಶವಾಣಿ ಭದ್ರಾವತಿ FM 103.5 MW 675 KHz ಜುಲೈ 17,2023 ಸೋಮವಾರದಿಂದ ಹೊಸ ಕಾರ್ಯಕ್ರಮ ಸರಣಿಯು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕ ವಿಜ್ಞಾನಗಳ ವಿಶ್ವವಿದ್ಯಾನಿಲಯ,
ಶಿವಮೊಗ್ಗ ಇವರ ಸಹಯೋಗದಲ್ಲಿ ಪ್ರಸಾರವಾಗಲಿದೆ.

“ಯು.ಎ.ಹೆಚ್.ಎಸ್ ನೇಗಿಲ ಮಿಡಿತ” ವಿಶೇಷ ಕಾರ್ಯಕ್ರಮ ಸರಣಿ 17,07,2023 ರಿಂದ 15,07,2023 ವರೆಗೆ ಪ್ರತೀ ದಿನ ಬೆಳಿಗ್ಗೆ 6.40ಕ್ಕೆ
ಮೂಡಿಬರಲಿದೆ.

ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಪ್ರಾಣಿ-ಮೀನು ಸಾಕಾಣಿಕೆ, ಮುಂತಾದ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಶಿವಮೊಗ್ಗದ ಕೆಳದಿ ಶಿವಪ್ಪ
ನಾಯಕ ಕೃಷಿ ಮತ್ತು ತೋಟಗಾರಿಕ ವಿಜ್ಞಾನಗಳ ವಿಶ್ವವಿದ್ಯಾನಿಲಯ, ಕೃಷಿ ವಿಜ್ಞಾನ ಕೇಂದ್ರ ಹಾಗು ಇನ್ನಿತರ ಕೇಂದ್ರಗಳ ವಿಜ್ಞಾನಿಗಳು, ತಜ್ಞರು
ಮತ್ತು ಸಂಶೋಧಕರುಗಳು ಸಮಗ್ರ ಬೆಳೆ ಪದ್ಧತಿ, ಆಧುನಿಕ ಕೃಷಿ ತಂತ್ರಜ್ಞಾನ, ರೋಗ ನಿರ್ವಹಣೆ, ತಳಿ ನಿರ್ವಹಣೆ, ಕೀಟಬಾಧೆ ನಿರ್ವಹಣೆ,
ಮೌಲ್ಯವರ್ಧನೆ, ಮಾರುಕಟ್ಟೆ ಹಾಗು ಇನ್ನಿತರ ಮಾಹಿತಿಗಳನ್ನು ನೀಡುವ ವಿಶೇಷ ಸರಣಿ ‘ಯು.ಎ.ಹೆಚ್.ಎಸ್. ನೇಗಿಲ ಮಿಡಿತ’, ದಿನಾಂಕ 17,07,2023 ರ ಸೋಮವಾರದಿಂದ, ಪ್ರತಿದಿನ ಬೆಳಿಗ್ಗೆ 6.40ಕ್ಕೆ, ಭದ್ರಾವತಿ ಆಕಾಶವಾಣಿ ಕೇಂದ್ರದಿಂದ ಮೂಡಿಬರಲಿದೆ. ಭದ್ರಾವತಿ ಆಕಾಶವಾಣಿ
ಸಿದ್ದಪಡಿಸಿದ ಈ ಕಾರ್ಯಕ್ರಮ ಆಕಾಶವಾಣಿ ಚಿತ್ರದುರ್ಗ, ಮಡಿಕೇರಿ ಹಾಗೂ ಮಂಗಳೂರು ಕೇಂದ್ರಗಳಿಂದಲೂ ಪ್ರಸಾರವಾಗಲಿದೆ.

ರೈತಬಾಂಧವರು ಈ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಬಹುದು.

ಈ ಕಾರ್ಯಕ್ರಮವನ್ನು ಪ್ರಸಾರ ಸಮಯದಲ್ಲಿ NewsOnAir App ನಲ್ಲೂ ಕೇಳಬಹುದು.

ಕೇಳುಗರು ಈ ಕುರಿತು ತಮ್ಮ ಅಭಿಪ್ರಾಯ ಅನಿಸಿಕೆಗಳನ್ನು ವಾಟ್ಸಾಪ್ ಸಂಖ್ಯೆ: 9481572600 ಮುಖಾಂತರ ಹಂಚಿಕೊಳ್ಳಬಹುದು ಎಂದು
Akashvani Bhadravati ಆಕಾಶವಾಣಿ ಭದ್ರಾವತಿಯ ಕಾರ್ಯಕ್ರಮ ಮುಖ್ಯಸ್ಥರು ಕೋರಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akhila Karnataka Sports Karate Association ಕರಾಟೆ ತೀರ್ಪುಗಾರರ ಪರೀಕ್ಷೆಯಲ್ಲಿ ಶಿವಮೊಗ್ಗದ ಶ್ರೀಹರ್ಷ ಉತ್ತೀರ್ಣ

Akhila Karnataka Sports Karate Association ಹುಬ್ಬಳ್ಳಿಯಲ್ಲಿ ಇತ್ತೀಚಿಗೆ ಅಖಿಲ...

ಶಿವಮೊಗ್ಗದಲ್ಲಿ ಯಶಸ್ವಿಯಾಗಿ ನಡೆದ ಕನಕದಾಸರ ಕೀರ್ತನೆ ಗಾಯನ ಸ್ಪರ್ಧೆ

ಶಿವಮೊಗ್ಗ ಕನಕ ಭಜನಾ ಮಂಡಳಿಯವರು ದಶಮಾನೋತ್ಸವ ಕಾರ್ಯಕ್ರಮವನ್ನು ಜಯಂತಿ ಪರಮೇಶ್ವರ್ ರವರ...

Madhu Bangarappa ವಿದ್ಯಾರ್ಥಿಯ ಜನಿವಾರ ತೆಗೆಸಿದ ಪ್ರಕರಣ ಖಂಡನೀಯ- ಸಚಿವ‌ ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ...