Sunday, August 2, 2026
Sunday, August 2, 2026

M. B. Patil ಫಾಕ್ಸ್ ಕಾನ್ ಕಂಪನಿಗೆ 300 ಎಕರೆ ಸದ್ಯದಲ್ಲೇ ಹಸ್ತಾಂತರ: ಕಾನೂನು ತೊಡಕು ನಿವಾರಣೆ- ಸಚಿವ ಎಂ ಬಿ ಪಾಟೀಲ

Date:


M. B. Patil ಐಫೋನ್ ತಯಾರಿಸುವ ಬಹುರಾಷ್ಟ್ರೀಯ ಫಾಕ್ಸ್ ಕಾನ್ ಕಂಪನಿಗೆ 300 ಎಕರೆ ಭೂಮಿ ಹಸ್ತಾಂತರಿಸುವ ಸಂಬಂಧ ಇದ್ದ ಕಾನೂನು ತೊಡಕುಗಳನ್ನು ನಿವಾರಿಸಲಾಗಿದೆ. ಶೀಘ್ರವೇ ಕಂಪನಿಗೆ ಜಾಗ ಬಿಟ್ಟುಕೊಡಲಾಗುವುದು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಶುಕ್ರವಾರ ವಿಧಾನಸಭೆಗೆ ತಿಳಿಸಿದರು.

ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಅವರು ಕೇಳಿದ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದರು.

ಕಂಪನಿಗೆ ದೇವನಹಳ್ಳಿ ಮತ್ತು ದೊಡ್ಡಬಳ್ಳಾಪುರ ಹೋಬಳಿಗೆ ಸೇರಿದ ಮಾಹಿತಿ ತಂತ್ರಜ್ಞಾನ ಹೂಡಿಕೆ ವಲಯ (ಐ ಟಿ ಐ ಆರ್) ದಲ್ಲಿ 300 ಎಕರೆ ಜಾಗ ಕೊಡಲಾಗುತ್ತದೆ. ಕಂಪನಿ ಸುಮಾರು 8,500 ಕೋಟಿ ರೂ. ಹೂಡಿ, ತಯಾರಿಕಾ ಘಟಕ ಸ್ಥಾಪಿಸಲಿದೆ. ಭೂಮಿ ಹಸ್ತಾಂತರವಾಗುತ್ತಿದ್ದಂತೆ ಕಂಪನಿಯು ನಿರ್ಮಾಣ ಕಾಮಗಾರಿ ಶುರು ಮಾಡಬಹುದು. ನಿರೀಕ್ಷೆ ಪ್ರಕಾರ ಮುಂದಿನ ವರ್ಷ ಉತ್ಪಾದನೆ ಕೂಡ ಆರಂಭಿಸಲಿದೆ. 50 ಸಾವಿರ ಜನರಿಗೆ ಉದ್ಯೋಗ ದೊರಕಿಸುವ ಈ ಯೋಜನೆಯ ಬಗ್ಗೆ ಸರ್ಕಾರ ಮುತುವರ್ಜಿ ವಹಿಸಿದೆ ಎಂದು ವಿವರಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಕಳೆದ ಮೂರು ವರ್ಷಗಳಲ್ಲಿ 3 ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಸ್ಥಾಪನೆಯಾಗಿವೆ. ಇವು ಸುಮಾರು 110 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದು, 1,450ಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಿವೆ ಎಂದು ಹೇಳಿದರು.


M. B. Patil ಕೈಗಾರಿಕಾ ನೀತಿ (2020-25), ಕರ್ನಾಟಕ ಏರೋಸ್ಪೇಸ್ & ಡಿಫೆನ್ಸ್ ನೀತಿ (2022-27) ಮತ್ತು ವಿದ್ಯುತ್‌ ಚಾಲಿತ ವಾಹನ & ಇಂಧನ ಸಂಗ್ರಹಣೆ ನೀತಿ (2017)ಯಡಿ ನಿಗದಿಗೊಳಿಸಿರುವ ಉತ್ತೇಜಕ ಕ್ರಮಗಳು ಈ ವಲಯದಲ್ಲಿ ಹೆಚ್ಚಿನ ಕೈಗಾರಿಕೆಗಳು ಸ್ಥಾಪನೆಯಾಗಲು ಪೂರಕವಾಗಿವೆ ಎಂದು ಪಾಟೀಲ ಅಭಿಪ್ರಾಯಪಟ್ಟರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...