Sunday, July 13, 2025
Sunday, July 13, 2025

Municipal Corporation ಬಸ್ ನಿಲ್ದಾಣದೊಳಗಿನ ಮಳಿಗೆಗಳ ಮೇಲೆ ದಾಳಿ: 10 ಕೆಜಿ ನಿಷೇಧಿತ ಪ್ಲಾಸ್ಟಿಕ್ ಪತ್ತೆ

Date:

Municipal Corporation ಚಿಕ್ಕಮಗಳೂರು ನಗರದ ಬಸ್‌ನಿಲ್ದಾಣದ ಒಳಾಂಗಣ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಕೆ ಸಂಬಂಧಿಸಿದ ವಿವಿಧ ವಸ್ತುಗಳನ್ನು ನಗರಸಭಾ ಪೌರಾಯುಕ್ತರ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಸುಮಾರು 10ಕೆಜಿ ಪ್ಲಾಸ್ಟಿಕ್ ಅನ್ನು ವಶಪಡಿಸಿಕೊಂಡರು.

ಬಳಿಕ ಮಾತನಾಡಿದ ಆಯುಕ್ತ ಬಿ.ಸಿ.ಬಸವರಾಜ್ ಪ್ಲಾಸ್ಟಿಕ್ ನಿಷೇಧ ಸಂಬಂಧ ಸರ್ಕಾರ ಹಲವಾರು ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಸಹ ಕೆಲವು ಅಂಗಡಿಮುಂಗಟ್ಟುಗಳು ಅನಧಿಕೃತವಾಗಿ ಬಳಕೆ ಮಾಡುತ್ತಿದ್ದಾರೆ. ಇದರಿಂದ ಪರಿಸರದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದು ಹೇಳಿದರು.

ಪ್ಲಾಸ್ಟಿಕ ನಿಷೇಧಿಸುವ ಸಲುವಾಗಿ ನಗರದ ಪ್ರಮುಖ ಅಂಗಡಿಗಳಲ್ಲಿ ಈಗಾಗಲೇ ಹಲವಾರು ಬಾರಿ ಶಿಸ್ತು ಕ್ರಮ ಕೈಗೊಂಡಿದೆ. ಈ ನಡುವೆ ನಗರದ ಪ್ರಮುಖ ಹೃದಯಭಾಗವಾದ ಬಸ್‌ಸ್ಟ್ಯಾಂಡ್‌ನಲ್ಲೇ ಪ್ಲಾಸ್ಟಿಕ್ ಬಳಕೆ ಮಾಡಿರು ವುದು ಸರಿಯಲ್ಲ ಎಂದು ತಿಳಿಸಿದರು.

Municipal Corporation ಈ ಬಾರಿ ಮಾನವೀಯತೆಯ ನೆಲೆಗಟ್ಟಿನಲ್ಲಿ ಕ್ಷಮಿಸಿ ಅಂಗಡಿದಾರರ ವಿರುದ್ದ ಯಾವುದೇ ಕ್ರಮ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಇದೇ ರೀತಿ ಪ್ಲಾಸ್ಟಿಕ್ ಬಳಕೆಗೆ ಮುಂದಾದಲ್ಲಿ ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಂಡು ಪರವಾನಗಿ ರದ್ದುಪಡಿಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸ್ವಚ್ಚತಾ ಮೇಲ್ವಿಚಾರಕರಾದ ಅಣ್ಣಯ್ಯ, ವಿವೇಕ್, ಹಿರಿಯ ಆರೋಗ್ಯ ನಿರೀಕ್ಷಕ ಕೆ.ಎಸ್. ಈಶ್ವರ್, ಕಿರಿಯ ಆರೋಗ್ಯ ನಿರೀಕ್ಷಕರಾದ ಶಶಿರಾಜ್, ವೆಂಕಟೇಶ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Miss Universe Karnataka ಚಿಕ್ಕಮಗಳೂರಿನ ಕು.ವಂಶಿ ಅವರಿಗೆ ಮಿಸ್ ಯೂನಿವರ್ಸ್ ಕರ್ನಾಟಕ ಪುರಸ್ಕಾರ

Miss Universe Karnataka ಮಿಸ್ ಯೂನಿವರ್ಸ್ ಕರ್ನಾಟಕ ಸ್ಪರ್ಧೆಯಲ್ಲಿ ವಿಜೇತರಾಗಿರುವ ಚಿಕ್ಕಮಗಳೂರಿನ...

Department of Agriculture ಶೇ 48. ರಷ್ಟು ಮಾರುಕಟ್ಟೆ ಶುಲ್ಕ ವಿಧಿಸಲು ಅವಕಾಶ ಬೇಕೆಂಬ ಮನವಿಯನ್ನ ಪರಿಶೀಲಿಸಲಾಗುತ್ತದೆ- ಸಚಿವ ಶಿವಾನಂದ ಪಾಟೀಲ್

Department of Agriculture ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಮಾರುಕಟ್ಟೆ ಶುಲ್ಕವನ್ನು ಈ ಮೊದಲಿನಂತೆ...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಅರ್ಹತೆಗಳಲ್ಲಿ‌ ತಿದ್ದುಪಡಿ ಆದೇಶ

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಗಾಗಿ ತಿದ್ದುಪಡಿ ಆದೇಶ ಹೊರಡಿಸಲಾಗಿದ್ದು,...

University of Horticultural Sciences ಕೃಷಿ ಪದವಿಧರರು ಕೃಷಿಮಾಡಿ ಅಭಿವೃದ್ಧಿಗೆ ಕೊಡುಗೆ ನೀಡಿ-ನಟ ಶಶಿಕುಮಾರ್

ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ...