Wednesday, May 6, 2026
Wednesday, May 6, 2026

Municipal Corporation ಬಸ್ ನಿಲ್ದಾಣದೊಳಗಿನ ಮಳಿಗೆಗಳ ಮೇಲೆ ದಾಳಿ: 10 ಕೆಜಿ ನಿಷೇಧಿತ ಪ್ಲಾಸ್ಟಿಕ್ ಪತ್ತೆ

Date:

Municipal Corporation ಚಿಕ್ಕಮಗಳೂರು ನಗರದ ಬಸ್‌ನಿಲ್ದಾಣದ ಒಳಾಂಗಣ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಕೆ ಸಂಬಂಧಿಸಿದ ವಿವಿಧ ವಸ್ತುಗಳನ್ನು ನಗರಸಭಾ ಪೌರಾಯುಕ್ತರ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಸುಮಾರು 10ಕೆಜಿ ಪ್ಲಾಸ್ಟಿಕ್ ಅನ್ನು ವಶಪಡಿಸಿಕೊಂಡರು.

ಬಳಿಕ ಮಾತನಾಡಿದ ಆಯುಕ್ತ ಬಿ.ಸಿ.ಬಸವರಾಜ್ ಪ್ಲಾಸ್ಟಿಕ್ ನಿಷೇಧ ಸಂಬಂಧ ಸರ್ಕಾರ ಹಲವಾರು ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಸಹ ಕೆಲವು ಅಂಗಡಿಮುಂಗಟ್ಟುಗಳು ಅನಧಿಕೃತವಾಗಿ ಬಳಕೆ ಮಾಡುತ್ತಿದ್ದಾರೆ. ಇದರಿಂದ ಪರಿಸರದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದು ಹೇಳಿದರು.

ಪ್ಲಾಸ್ಟಿಕ ನಿಷೇಧಿಸುವ ಸಲುವಾಗಿ ನಗರದ ಪ್ರಮುಖ ಅಂಗಡಿಗಳಲ್ಲಿ ಈಗಾಗಲೇ ಹಲವಾರು ಬಾರಿ ಶಿಸ್ತು ಕ್ರಮ ಕೈಗೊಂಡಿದೆ. ಈ ನಡುವೆ ನಗರದ ಪ್ರಮುಖ ಹೃದಯಭಾಗವಾದ ಬಸ್‌ಸ್ಟ್ಯಾಂಡ್‌ನಲ್ಲೇ ಪ್ಲಾಸ್ಟಿಕ್ ಬಳಕೆ ಮಾಡಿರು ವುದು ಸರಿಯಲ್ಲ ಎಂದು ತಿಳಿಸಿದರು.

Municipal Corporation ಈ ಬಾರಿ ಮಾನವೀಯತೆಯ ನೆಲೆಗಟ್ಟಿನಲ್ಲಿ ಕ್ಷಮಿಸಿ ಅಂಗಡಿದಾರರ ವಿರುದ್ದ ಯಾವುದೇ ಕ್ರಮ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಇದೇ ರೀತಿ ಪ್ಲಾಸ್ಟಿಕ್ ಬಳಕೆಗೆ ಮುಂದಾದಲ್ಲಿ ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಂಡು ಪರವಾನಗಿ ರದ್ದುಪಡಿಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸ್ವಚ್ಚತಾ ಮೇಲ್ವಿಚಾರಕರಾದ ಅಣ್ಣಯ್ಯ, ವಿವೇಕ್, ಹಿರಿಯ ಆರೋಗ್ಯ ನಿರೀಕ್ಷಕ ಕೆ.ಎಸ್. ಈಶ್ವರ್, ಕಿರಿಯ ಆರೋಗ್ಯ ನಿರೀಕ್ಷಕರಾದ ಶಶಿರಾಜ್, ವೆಂಕಟೇಶ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.

ಒಂದು ಮತ ತಾನೆ. ಎಂಬ ನಿರ್ಲಕ್ಷ್ಯ ಬಹಳ ಅಭ್ಯರ್ಥಿಗಳಲ್ಲಿದೆ. ಆದರೆ ಆ...

Ballari News ಪಾರಾಗುವ ಬಗೆ ಹೇಗೆ?. ಬಳ್ಳಾರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ನೀಡಿರುವ ಮಾಹಿತಿ ಎಲ್ಲರಿಗೂ ಅನ್ವಯ

Ballari News ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ...

S.N. Channabasappa ಪಶುವೈದ್ಯಕೀಯ ಮತ್ತು‌ ಮೀನುಗಾರಿಕೆ ವಿಜ್ಞಾನ ವಿವಿಗಳ ನೌಕರರಿಗೆ ನೀಡುತ್ತಿರುವ ಎನ್ ಪಿ ಎ ಕಡಿತ: ಶಾಸಕ ಚೆನ್ನಿ ಅವರಿಂದ ಖಂಡನೆ

S.N. Channabasappa "ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ...

Summer ಬೇಸಿಗೆಯ ಬಿರುಬಿಸಿಲು!. ಜಾನುವಾರು ರಕ್ಷಣೆಗೆ ಪಶುವೈದ್ಯಕೀಯ ಕಾಲೇಜಿನ ತಜ್ಞರ ಮಾರ್ಗದರ್ಶನ – ಮಾಹಿತಿ ಇಲ್ಲಿದೆ.

Summer ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ...