Monday, May 4, 2026
Monday, May 4, 2026

Minorities Welfare Department ಸರ್ಕಾರದಿಂದ ಅಲ್ಪ ಸಂಖ್ಯಾತರ ಭವನಕ್ಕೆ ನಿವೇಶನ ಮಂಜೂರು

Date:

Minorities Welfare Department ಚಿಕ್ಕಮಗಳೂರು, ನಗರದ ಜಿಲ್ಲಾ ಪಂಚಾಯ್ತಿ ಸಮೀಪ 10 ಗುಂಟೆ ಜಾಗದಲ್ಲಿ ಮೌಲಾನಾ ಆಜಾದ್ ಅಲ್ಪಸಂಖ್ಯಾತರ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಭೂಮಿ ಮಂಜೂರಾಗಿದೆ ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಮೊಹಮ್ಮದ್ ಶಾಹೀದ್ ರಜ್ವಿ ಹೇಳಿದ್ದಾರೆ.

ಈ ಸಂಬಂಧ ಹೇಳಿಕೆಯಲ್ಲಿ ತಿಳಿಸಿರುವ ಅವರು ಹಿರೇಮಗಳೂರು ಗ್ರಾಮದ ಸರ್ವೆ ನಂ. 1019ರ 10 ಗುಂಟೆ ಪ್ರದೇಶದಲ್ಲಿ 1ಕೋಟಿ ರೂ. ವ್ಯಯಿಸಿ ಮೌಲಾನಾ ಆಜಾದ್ ಅಲ್ಪಸಂಖ್ಯಾತರ ಭವನ ನಿರ್ಮಾಣಕ್ಕಾಗಿ ಜಿಲ್ಲಾಧಿಕಾರಿಗಳು ಜಾಗವನ್ನು ಕಾಯ್ದಿರಿಸಿ ಜಮೀನನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಅಭಿವದ್ಧಿ ನಿಗಮ ಮತ್ತು ಜಿಲ್ಲಾ ವಕ್ಫ್ ಸಲಹಾ ಸಮಿತಿ ಒಳಗೊಂಡ0ತೆ ಮೂರು ಕಾರ್ಯಾಲಯಗಳು ಕಾರ್ಯನಿರ್ವಹಿಸಲು ಸೂಕ್ತ ಸೌಲಭ್ಯ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

Minorities Welfare Department, ಕ್ಷೇತ್ರದ ಶಾಸಕರೊಂದಿಗೆ ಈ ಬಗ್ಗೆ ಚರ್ಚಿಸಿ ಅತಿ ಶೀಘ್ರವಾಗಿ ಶಂಕುಸ್ಥಾಪನೆ ನೆರವೇರಿಸಲಾಗುವುದು. ಜಿಲ್ಲೆಗೆ ಅಲ್ಪಸಂಖ್ಯಾತ ಭವನ ಮತ್ತು ಜಿಲ್ಲಾ ವಕ್ಫ್ ಮಂಡಳಿ ಕಚೇರಿ ನಿರ್ಮಾಣಕ್ಕೆ ಭೂಮಿ ಮಂಜೂರು ಮಾಡಿ ಸಲು ಸಹಕರಿಸಿದ ಶಾಸಕರು ಮತ್ತು ಜಿಲ್ಲಾಧಿಕಾರಿಗಳಿಗೆ ವಕ್ಫ್ ಮಂಡಳಿ ಕೃತಜ್ಞತೆ ಸಲ್ಲಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...