Monday, May 4, 2026
Monday, May 4, 2026

Kuvempu University ಕುವೆಂಪು ವಿವಿಯ ಪ್ರಾಣಿಶಾಸ್ತ್ರ ಸ್ನಾತಕೋತ್ತರ ಪರೀಕ್ಷೆ: ಕು.ಗಾಯತ್ರಿ & ಕು.ದೇವಿಕಾ ಅವರಿಗೆ ಪ್ರಥಮ ಮತ್ತು ದ್ವಿತೀಯ ಶ್ರೇಣಿ

Date:

Kuvempu University ಶಿವಮೊಗ್ಗದ ಮಾನಸ ಟ್ರಸ್ಟ್ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ 2021-22ನೇ ಶೈಕ್ಷಣಿಕ ಸಾಲಿನ ಕುವೆಂಪು ವಿಶ್ವವಿದ್ಯಾಲಯವು ನಡೆಸಿದ ಎಂ.ಎಸ್ಸಿ ಮನ:ಶಾಸ್ತçದ ವಿಭಾಗದ ಸ್ನಾತಕೋತ್ತರ ಪದವಿಯ ಪರೀಕ್ಷೆಗಳಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿನಿಯರಾದ ಕು. ಗಾಯತ್ರಿ ವಿ ಇವರು ಪ್ರಥಮ ರ‍್ಯಾಂಕ್ ಹಾಗೂ ದೇವಿಕಾ ಎಂ ಇವರು ಎರಡನೇ ರ‍್ಯಾಂಕ್ ಗಳಿಸಿರುತ್ತಾರೆ.

ಜುಲೈ 22 ರಂದು ನಡೆಯಲಿರುವ ವಿಶ್ವವಿದ್ಯಾನಿಲಯದ 33ನೇ ಘಟಿಕೋತ್ಸವದಲ್ಲಿ ಕು. ಗಾಯತ್ರಿ ವಿ. ರವರು ಪ್ರಥಮ ರ‍್ಯಾಂಕಿನ ಪ್ರಶಸ್ತಿ ಪತ್ರವನ್ನು ಪಡೆಯಲಿದ್ದಾರೆ.

ಕಾಲೇಜಿನ ಸ್ನಾತಕೋತ್ತರ ಮನ:ಶಾಸ್ತçದ ಮೊದಲ ಬ್ಯಾಚ್‌ನಲ್ಲಿಯೇ ಶೇ.100 ಫಲಿತಾಂಶ ಹಾಗೂ ಎರಡು ರ‍್ಯಾಂಕ್‌ಗಳು ಲಭ್ಯವಾಗಿರುವುದು ಹೆಮ್ಮೆಯಾಗಿದೆ ಎಂದು ಪ್ರಾಂಶುಪಾಲರು ತಿಳಿಸಿರುತ್ತಾರೆ.

ಕಟೀಲ್ ಅಶೋಕ್ ಪೈ ಕಾಲೇಜಿನಲ್ಲಿ ಮನ:ಶಾಸ್ತ್ರ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಮಾನಸ ಆಸ್ಪತ್ರೆಯ ಮೂಲಕ ಕ್ಲಿನಿಕಲ್ ಹಾಗೂ ಕೌನ್ಸಲಿಂಗ್ ಕೌಶಲ್ಯಗಳು, ಮನ:ಶಾಸ್ತçದ ಸಂಶೋಧನಾ ಕೌಶಲ್ಯಗಳ ನೇರ ತರಬೇತಿ ಸಿಗುತ್ತದೆ.

ಆದುದರಿಂದ ಈ ಕಾಲೇಜಿನಲ್ಲಿ ಸ್ನಾತಕೋತ್ತರ Psychology ಪೂರೈಸಿದ ಎಲ್ಲಾ ವಿದ್ಯಾರ್ಥಿಗಳಿಗೂ ನೇರವಾಗಿ ಉದ್ಯೋಗ ದೊರೆತಿದೆ.
ಇದೊಂದು ಅತ್ಯುತ್ತಮ ಶೈಕ್ಷಣಿಕ ಸಾಧನೆ ಎಂದು ಮಾನಸ ಟ್ರಸ್ಟ್ನ ನಿರ್ದೇಶಕರಾದ ಡಾ. ರಜನಿ ಎ. ಪೈ ರವರು ಶ್ಲಾಘಿಸಿದರು.

Kuvempu University ರ‍್ಯಾಂಕ್ ಪಡೆದ ಎಲ್ಲ ವಿದ್ಯಾರ್ಥಿನಿಯರನ್ನು ಮಾನಸ ಟ್ರಸ್ಟ್ನ ಡಾ. ರಜನಿ ಎ. ಪೈ, ಡಾ. ಪ್ರೀತಿ ವಿ. ಶಾನ್‌ಭಾಗ್, ಡಾ. ವಾಮನ್ ಶಾನ್‌ಭಾಗ್, ಸಿಸ್ಟರ್ ಮಾರೀ ಇವ್ಲಿನ್, ಡಾ. ರಾಜೇಂದ್ರ ಚೆನ್ನಿ, ಡಾ. ಅರ್ಚನಾ ಭಟ್ ಕೆ., ಹಾಗೂ ಪ್ರಾಂಶುಪಾಲರಾದ ಡಾ. ಸಂಧ್ಯಾಕಾವೇರಿ ಅಭಿನಂದಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...