Thursday, June 18, 2026
Thursday, June 18, 2026

Poor Road Work ಚಿಕ್ಕಮಗಳೂರಿನ ಎಂ.ಜಿ.ರಸ್ತೆ ಕಳಪೆ ಕಾಮಗಾರಿ:ಕಾನೂನು ಕ್ರಮಕ್ಕೆ ಆಗ್ರಹ

Date:

Poor Road Work ಚಿಕ್ಕಮಗಳೂರು, ನಗರದ ಎಂ.ಜಿ.ರಸ್ತೆಯ ದುರಸ್ಥಿ ಕಾಮಗಾರಿಯು ಕಳಪೆಯಾಗಿರುವ ಪರಿಣಾಮ ಗುತ್ತಿಗೆದಾರ ಹಾಗೂ ಹಣ ಬಿಡುಗಡೆ ಮಾಡಿರುವ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳ ಬೇಕು ಎಂದು ನಗರಸಭಾ ಮಾಜಿ ಅಧ್ಯಕ್ಷ ಸಯ್ಯದ್ ಜಮೀಲ್ ಅಹ್ಮದ್ ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಈ ಸಂಬoಧ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಗುರುವಾರ ಮನವಿ ಸಲ್ಲಿಸಿ ಮಾತನಾಡಿದ ಅವರು ಇತ್ತೀಚೆಗೆ ಎಂ.ಜಿ.ರಸ್ತೆಯ ದುರಸ್ಥಿ ಕಾಮಗಾರಿ ತೀವ್ರ ಕಳಪೆಯಿಂದ ಕೂಡಿದೆ. ಈ ಬಗ್ಗೆ ಲೋಕಾಯುಕ್ತ ನ್ಯಾಯಾ ಲಯದಲ್ಲಿ ದಾವೆಯನ್ನು ದಾಖಲಿಸಲಾಗಿದೆ ಎಂದರು.

ಈ ನಡುವೆ ಪ್ರಕರಣವು ನ್ಯಾಯಾಲಯದಲ್ಲಿ ಇರುವಾಗಲೇ ಪುನಃ ಎಂ.ಜಿ.ರಸ್ತೆಗೆ 37 ಲಕ್ಷ ಹಣ ಬಿಡುಗಡೆ ಮಾಡಿ ಕಳಪೆ ಕಾಮಗಾರಿಯನ್ನು ನಡೆಸಿರುತ್ತಾರೆ. ಇದರಿಂದ ರಸ್ತೆಯಲ್ಲೆಲ್ಲಾ ಮಳೆಯ ನೀರು ತುಂಬಿಕೊ0ಡು ಸಾರ್ವಜನಿಕರಿಗೆ ಓಡಾಡದಂತಹ ಸ್ಥಿತಿ ಎದುರಾಗಿದೆ ಎಂದು ಹೇಳಿದರು.

ಆದ್ದರಿಂದ ಕಾಮಗಾರಿ ಕಳಪೆವೆಸಗಿರುವ ಗುತ್ತಿಗೆದಾರ ಹಾಗೂ ಹಣ ಬಿಡುಗಡೆಗೊಳಿಸಿರುವ ಅಧಿಕಾರಿಗಳ ಮೇಲೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕರ ಹಣವನ್ನು ಪೋಲು ಮಾಡುವುದನ್ನು ತಡೆಹಿಡಿಯಬೇಕು ಎಂದು ಒತ್ತಾಯಿಸಿದರು.

Poor Road Work ಈ ಸಂದರ್ಭದಲ್ಲಿ ಎಎಪಿ ಮುಖಂಡ ಈರೇಗೌಡ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...