Sunday, August 2, 2026
Sunday, August 2, 2026

Poor Road Work ಚಿಕ್ಕಮಗಳೂರಿನ ಎಂ.ಜಿ.ರಸ್ತೆ ಕಳಪೆ ಕಾಮಗಾರಿ:ಕಾನೂನು ಕ್ರಮಕ್ಕೆ ಆಗ್ರಹ

Date:

Poor Road Work ಚಿಕ್ಕಮಗಳೂರು, ನಗರದ ಎಂ.ಜಿ.ರಸ್ತೆಯ ದುರಸ್ಥಿ ಕಾಮಗಾರಿಯು ಕಳಪೆಯಾಗಿರುವ ಪರಿಣಾಮ ಗುತ್ತಿಗೆದಾರ ಹಾಗೂ ಹಣ ಬಿಡುಗಡೆ ಮಾಡಿರುವ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳ ಬೇಕು ಎಂದು ನಗರಸಭಾ ಮಾಜಿ ಅಧ್ಯಕ್ಷ ಸಯ್ಯದ್ ಜಮೀಲ್ ಅಹ್ಮದ್ ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಈ ಸಂಬoಧ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಗುರುವಾರ ಮನವಿ ಸಲ್ಲಿಸಿ ಮಾತನಾಡಿದ ಅವರು ಇತ್ತೀಚೆಗೆ ಎಂ.ಜಿ.ರಸ್ತೆಯ ದುರಸ್ಥಿ ಕಾಮಗಾರಿ ತೀವ್ರ ಕಳಪೆಯಿಂದ ಕೂಡಿದೆ. ಈ ಬಗ್ಗೆ ಲೋಕಾಯುಕ್ತ ನ್ಯಾಯಾ ಲಯದಲ್ಲಿ ದಾವೆಯನ್ನು ದಾಖಲಿಸಲಾಗಿದೆ ಎಂದರು.

ಈ ನಡುವೆ ಪ್ರಕರಣವು ನ್ಯಾಯಾಲಯದಲ್ಲಿ ಇರುವಾಗಲೇ ಪುನಃ ಎಂ.ಜಿ.ರಸ್ತೆಗೆ 37 ಲಕ್ಷ ಹಣ ಬಿಡುಗಡೆ ಮಾಡಿ ಕಳಪೆ ಕಾಮಗಾರಿಯನ್ನು ನಡೆಸಿರುತ್ತಾರೆ. ಇದರಿಂದ ರಸ್ತೆಯಲ್ಲೆಲ್ಲಾ ಮಳೆಯ ನೀರು ತುಂಬಿಕೊ0ಡು ಸಾರ್ವಜನಿಕರಿಗೆ ಓಡಾಡದಂತಹ ಸ್ಥಿತಿ ಎದುರಾಗಿದೆ ಎಂದು ಹೇಳಿದರು.

ಆದ್ದರಿಂದ ಕಾಮಗಾರಿ ಕಳಪೆವೆಸಗಿರುವ ಗುತ್ತಿಗೆದಾರ ಹಾಗೂ ಹಣ ಬಿಡುಗಡೆಗೊಳಿಸಿರುವ ಅಧಿಕಾರಿಗಳ ಮೇಲೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕರ ಹಣವನ್ನು ಪೋಲು ಮಾಡುವುದನ್ನು ತಡೆಹಿಡಿಯಬೇಕು ಎಂದು ಒತ್ತಾಯಿಸಿದರು.

Poor Road Work ಈ ಸಂದರ್ಭದಲ್ಲಿ ಎಎಪಿ ಮುಖಂಡ ಈರೇಗೌಡ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...