Friday, March 20, 2026
Friday, March 20, 2026

Uttaradi Math ಎಲ್ಲ ಜೀವದಲ್ಲೂ ಭಗವಂತನಸನ್ನಿಧಾನವಿರುತ್ತದೆ-ಶ್ರೀ ಸತ್ಯಾತ್ಮ ತೀರ್ಥರು

Date:

Uttaradi Math ಹೊಳೆಹೊನ್ನೂರು, ಎಲ್ಲ ಜೀವದಲ್ಲೂ ಭಗವಂತನ ನಿತ್ಯ ಸನ್ನಿಧಾನ ಇರುತ್ತದೆ ಎಂದು ಉತ್ತರಾದಿ ಮಠದ ಪೀಠಾಧಿಪತಿಗಳಾದ ಶ್ರೀ ಸತ್ಯಾತ್ಮ ತೀರ್ಥರು ಹೇಳಿದರು.

ಬುಧವಾರ 28ನೇ ಚಾತುರ್ಮಾಸ್ಯ ಸಂದರ್ಭ ಇಲ್ಲಿನ ಶ್ರೀ ಸತ್ಯಧರ್ಮ ತೀರ್ಥರ ವೃಂದಾವನ ಸನ್ನಿಧಾನದಲ್ಲಿ ಭಾಗತ ದಶಮ ಸ್ಕಂದ ಪ್ರವಚನ ನೀಡಿದ ಅವರು, ಆಂತರ ಮತ್ತು ಬಾಹ್ಯ ಎಂಬ ಎರಡು ರೀತಿಯಲ್ಲಿ ದೇವರ ಸನ್ನಿಧಾನ ವಿರುತ್ತದೆ ಎಂದರು.

ಜೀವರಲ್ಲಿ ಅನಾದಿ ಕಾಲದಿಂದಲೂ ಇರುವ ಸ್ವಾಭಾವಿಕವಾದ ಆಂತರಿಕ ಸನ್ನಿಧಾನ ಮತ್ತು ಪ್ರತಿಮೆಗಳಲ್ಲಿ ಹಾಗೂ ತೀರ್ಥ ಕ್ಷೇತ್ರಗಳಲ್ಲಿ ಬಾಹ್ಯವಾದ ಸನ್ನಿಧಾನ. ಹೀಗಾಗಿ ಜೀವ ಸ್ವರೂಪಿಯಲ್ಲಿ ಪರಮಾತ್ಮನ ಸನ್ನಿಧಾನ ಇರುತ್ತದೆ. ನಮ್ಮಲ್ಲಿ, ಮತ್ತು ಎದುರು ಇದ್ದವರಲ್ಲಿ, ಎಲ್ಲರಲ್ಲಿ. ಅಲ್ಲದೆ ಎಲ್ಲ ಪ್ರಾಣಿಗಳಲ್ಲೂ ದೇವರ ಸನ್ನಿಧಾನ ಇದೆ ಎಂಬ ಚಿಂತನೆ ನಾವು ಮಾಡಬೇಕು ಎಂದರು.

ಇದಕ್ಕೂ ಮೊದಲು ರಾಮಾಚಾರ್ಯ ಉಮರ್ಜಿ ಪ್ರವಚನ ನೀಡಿದರು.

Uttaradi Math ಉತ್ತರಾದಿ ಮಠದ ದಿವಾನರಾದ ಶಶಿ ಆಚಾರ್ಯ, ಪಂಡಿತರಾದ ನವರತ್ನ ಸುಬ್ಬಣ್ಣಾಚಾರ್ಯ, ಮಠದ ವ್ಯವಸ್ಥಾಪಕ ನವರತ್ನ ಶ್ರೀನಿವಾಸಾಚಾರ್ಯ ಇತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...