Monday, May 19, 2025
Monday, May 19, 2025

Uttaradi Math ಎಲ್ಲ ಜೀವದಲ್ಲೂ ಭಗವಂತನಸನ್ನಿಧಾನವಿರುತ್ತದೆ-ಶ್ರೀ ಸತ್ಯಾತ್ಮ ತೀರ್ಥರು

Date:

Uttaradi Math ಹೊಳೆಹೊನ್ನೂರು, ಎಲ್ಲ ಜೀವದಲ್ಲೂ ಭಗವಂತನ ನಿತ್ಯ ಸನ್ನಿಧಾನ ಇರುತ್ತದೆ ಎಂದು ಉತ್ತರಾದಿ ಮಠದ ಪೀಠಾಧಿಪತಿಗಳಾದ ಶ್ರೀ ಸತ್ಯಾತ್ಮ ತೀರ್ಥರು ಹೇಳಿದರು.

ಬುಧವಾರ 28ನೇ ಚಾತುರ್ಮಾಸ್ಯ ಸಂದರ್ಭ ಇಲ್ಲಿನ ಶ್ರೀ ಸತ್ಯಧರ್ಮ ತೀರ್ಥರ ವೃಂದಾವನ ಸನ್ನಿಧಾನದಲ್ಲಿ ಭಾಗತ ದಶಮ ಸ್ಕಂದ ಪ್ರವಚನ ನೀಡಿದ ಅವರು, ಆಂತರ ಮತ್ತು ಬಾಹ್ಯ ಎಂಬ ಎರಡು ರೀತಿಯಲ್ಲಿ ದೇವರ ಸನ್ನಿಧಾನ ವಿರುತ್ತದೆ ಎಂದರು.

ಜೀವರಲ್ಲಿ ಅನಾದಿ ಕಾಲದಿಂದಲೂ ಇರುವ ಸ್ವಾಭಾವಿಕವಾದ ಆಂತರಿಕ ಸನ್ನಿಧಾನ ಮತ್ತು ಪ್ರತಿಮೆಗಳಲ್ಲಿ ಹಾಗೂ ತೀರ್ಥ ಕ್ಷೇತ್ರಗಳಲ್ಲಿ ಬಾಹ್ಯವಾದ ಸನ್ನಿಧಾನ. ಹೀಗಾಗಿ ಜೀವ ಸ್ವರೂಪಿಯಲ್ಲಿ ಪರಮಾತ್ಮನ ಸನ್ನಿಧಾನ ಇರುತ್ತದೆ. ನಮ್ಮಲ್ಲಿ, ಮತ್ತು ಎದುರು ಇದ್ದವರಲ್ಲಿ, ಎಲ್ಲರಲ್ಲಿ. ಅಲ್ಲದೆ ಎಲ್ಲ ಪ್ರಾಣಿಗಳಲ್ಲೂ ದೇವರ ಸನ್ನಿಧಾನ ಇದೆ ಎಂಬ ಚಿಂತನೆ ನಾವು ಮಾಡಬೇಕು ಎಂದರು.

ಇದಕ್ಕೂ ಮೊದಲು ರಾಮಾಚಾರ್ಯ ಉಮರ್ಜಿ ಪ್ರವಚನ ನೀಡಿದರು.

Uttaradi Math ಉತ್ತರಾದಿ ಮಠದ ದಿವಾನರಾದ ಶಶಿ ಆಚಾರ್ಯ, ಪಂಡಿತರಾದ ನವರತ್ನ ಸುಬ್ಬಣ್ಣಾಚಾರ್ಯ, ಮಠದ ವ್ಯವಸ್ಥಾಪಕ ನವರತ್ನ ಶ್ರೀನಿವಾಸಾಚಾರ್ಯ ಇತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Guarantee scheme ಜನ ಸಾಮಾನ್ಯರ ಬದುಕಿಗೆ ಗ್ಯಾರಂಟಿ ಯೋಜನೆಗಳು ಬೆಳಕಾಗಿವೆ

Guarantee scheme ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ನಾಡಿನ...

Klive Special Article ಭಯೋತ್ಪಾದನೆ‌ ಜಾಗತಿಕ ಜಾಗೃತಿಗೆಸರ್ವಸಮ್ಮತ ಸರ್ವಪಕ್ಷ‌ ನಿಯೋಗ.

Klive Special Article ಪೆಹಲ್ಗಾಂ ದುರಂತದ ನಂತರ ನಡೆದ ಬೆಳವಣಿಗೆಗಳಲ್ಲಿಮೂರು ಸಂಗತಿಗಳು ಸುದ್ದಿಮನೆಯನ್ನ...

Rajesh Keelambi “ಶಾಖಾಹಾರಿ” ನಿರ್ಮಾಪಕ ರಾಜೇಶ್ ಕೀಳಂಬಿ‌ ಅವರಿಗೆಡಾ.ಪುನೀತ್ ರಾಜ್ ಕುಮಾರ್ ಚೊಚ್ಚಲ ನಿರ್ಮಾಪಕ  ಪ್ರಶಸ್ತಿ

Rajesh Keelambi ಶಾಖಾಹಾರಿ ಚಿತ್ರದ ನಿರ್ಮಾಪಕಕೀಳಂಬಿ‌ ಮೀಡಿಯಾ ಲ್ಯಾಬ್ ಸಂಸ್ಥೆಯ ಎಂ.ಡಿ....

Shimog News ಹಿರಿಯೂರು ಕೃಷ್ಣಮೂರ್ತಿ ಸ್ಮರಣೀಯ ವ್ಯಕ್ತಿ,- ದತ್ತಾತ್ರೇಯ ಹೊಸಬಾಳೆ

Shimog News ತಾ.17-5-25 ರ ಶನಿವಾರ ಸಂಜೆ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ...