Monday, December 15, 2025
Monday, December 15, 2025

Good Luck Araike Kendra ಗುಡ್ ಲಕ್ ಆರೈಕೆ ಕೇಂದ್ರದಲ್ಲಿ ಅನ್ನಪೂರ್ಣೇಶ್ವರಿ ದಿನ

Date:

Good Luck Araike Kendra ವೃದ್ಧರು, ಅಸಹಾಯಕರು, ಬುದ್ದಿಮಾಂದ್ಯರು ಹಾಗೂ ಪಾರ್ಶ್ವವಾಯು ಪೀಡಿತರು ಸೇರಿದಂತೆ ಅಗತ್ಯ ಇರುವವರಿಗೆ ಮಾಡುವ ಸೇವಾ ಕಾರ್ಯವು ಶ್ರೇಷ್ಠತೆಯಿಂದ ಕೂಡಿರುತ್ತದೆ ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಹೇಳಿದರು.

ಶಿವಮೊಗ್ಗ ನಗರದ ಪ್ರಿಯದರ್ಶಿನಿ ಬಡಾವಣೆಯಲ್ಲಿರುವ ಗುಡ್‌ಲಕ್ ಆರೈಕೆ ಕೇಂದ್ರದಲ್ಲಿ “ಅನ್ನಪೂಣೇಶ್ವರಿ ದಿನ” ಪ್ರಯುಕ್ತ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ದಿನಸಿ ಸಾಮಾಗ್ರಿ ಅಗತ್ಯ ವಸ್ತುಗಳು ಹಾಗೂ ಆರ್ಥಿಕ ನೆರವು ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಲ್ಲ ಹಿರಿಯನ್ನು ಗೌರವಿಸುವುದು ದೇವರನ್ನು ಪೂಜಿಸಿದಂತೆ. ನಾವು ಮಾಡುವ ಸೇವೆಯು ನಮ್ಮನ್ನು ಸದಾ ಕಾಪಾಡುತ್ತದೆ ರೋಟರಿ ಮುಖಾಂತರ ವರ್ಷದಲ್ಲಿ ಮನುಕುಲ ಸೇವೆಯ ವಿಶೇಷ ಯೋಜನೆಗಳನ್ನು ಅನುಷ್ಠಾನ ಮಾಡಲಾಗುವುದು. ವರ್ಷಪೂರ್ತಿ ಸೇವಾ ಕಾರ್ಯಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.

ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಮಾತನಾಡಿ, ಗುಡ್‌ಲಕ್ ಆರೈಕೆ ಕೇಂದ್ರ ಯಾವುದೇ ಸರ್ಕಾರದ ಅನುದಾನವಿಲ್ಲದೇ ನಡೆಯುತ್ತಿರುವ ಸಂಸ್ಥೆ. ಇಂತಹ ಮಾನವೀಯ ಸಂಸ್ಥೆಗಳಿಗೆ ಸಂಘ ಸಂಸ್ಥೆಗಳ ನೆರವು ಅಗತ್ಯ. ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಮಾಡುತ್ತಿರುವ ಕಾರ್ಯ ಶ್ಲಾಘನೀಯ. ಮುಂದಿನ ದಿನಗಳಲ್ಲಿ ಮತ್ತಷ್ಟು ನೆರವು ಒದಗಿಸಲಿ ಎಂದು ಆಶಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಗುಡ್‌ಲಕ್ ಆರೈಕೆ ಕೇಂದ್ರ ಅಧ್ಯಕ್ಷ ಯು.ರವೀಂದ್ರನಾಥ ಐತಾಳ್ ಮಾತನಾಡಿ, ಇಲ್ಲಿರುವ ಆಶ್ರಮವಾಸಿಗಳಿಗೆ ಜಾಗದ ಕೊರತೆ ಆಗುತ್ತಿದೆ. ಆದ್ದರಿಂದ ಹೊಸ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿದೆ. ಕಟ್ಟಡಕ್ಕೆ ದೇಣಿಗೆ ನೀಡಿ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ತಿಳಿಸಿದರು.

Good Luck Araike Kendra ಸೇವಾ ಕಾರ್ಯಕ್ರಮದಲ್ಲಿ ಮಾಜಿ ಸಹಾಯಕ ಗವರ್ನರ್ ವಸಂತ್ ಹೋಬಳಿದಾರ್, ರೋಟರಿ ಶಿವಮೊಗ್ಗ ಕಾರ್ಯದರ್ಶಿ ಕಿಶೋರ್‌ಕುಮಾರ್, ಪಂಚಾಕ್ಷರಿ ಹಿರೇಮಠ, ಡಾ. ಧನಂಜಯ, ಶಾರದಾ ಶೇಷಗಿರಿಗೌಡ, ದಿವ್ಯಾ ಪ್ರವೀಣ್, ನಾಗರಾಜ.ಎಂ.ಪಿ., ಗಣೇಶ್, ರೋಟರಿ ಶಿವಮೊಗ್ಗ ಪೂರ್ವ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...