Friday, April 10, 2026
Friday, April 10, 2026

CBI Investigation ಬೆಂಗಳೂರಿನಲ್ಲಿ ಬಂಧಿತ ಶಂಕಿತ ಉಗ್ರರ ಜಫ್ತಿಯಲ್ಲಿ ಸ್ಫೋಟಕ ಸಹಾಯಕ ಸಾಮಗ್ರಿ ಪತ್ತೆ

Date:

CBI Investigation ಭಯೋತ್ಪಾದನಾ ಕೃತಿಗೆ ಸಂಚರಿಸಿದ ಪ್ರಕರಣದಲ್ಲಿ ಬಂಧಿಸಿರುವ ಶಂಕಿತರಿಂದ ಜಪ್ತಿ ಮಾಡಲಾಗಿರುವ ವಾಕಿ ಟಾಕಿಗಳು , ಬಾಂಬ್ ಸ್ಫೋಟಕ್ಕೆ ಬಳಸುವ ಟ್ರಿಗರ್ ಗಳು ಎಂಬ ಮಾಹಿತಿಯಿಂದ ಸಿಬಿಐ ತನಿಖೆಯಿಂದ ಹೊರ ಬಿದ್ದಿದೆ .

ಬೆಂಗಳೂರಿನ ಹೆಬ್ಬಾಳ ಠಾಣೆ ವ್ಯಾಪ್ತಿಯ ಸುಲ್ತಾನ್ ಪಾಳ್ಯದಲ್ಲಿ ಜುಲೈ 18ರಂದು ಕಾರ್ಯಾಚರಣೆ ನಡೆಸಿದ್ದ ಸಿಬಿಐ ಪೊಲೀಸರು, ಐವರು ಶಂಕಿತರನ್ನು ಬಂಧಿಸಿದ್ದರು. 7 ನಾಡ ಪಿಸ್ತೂಲ್ , 45 ಗುಂಡುಗಳು 12 ಮೊಬೈಲ್ ಡ್ಯಾಗರ್ ಮತ್ತು ನಾಲ್ಕು ವಾಕಿಟಾಕಿ ಮಾದರಿ ಉಪಕರಣಗಳನ್ನು ಜಪ್ತಿ ಮಾಡಿದ್ದರು.

ಈ ಎಲ್ಲಾ ವಸ್ತುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ. ಈ ಸಾಧನೆಗಳ ಪರೀಕ್ಷೆ ನಡೆಸಿರುವ ತಜ್ಞರು ಪ್ರಾಥಮಿಕ ಮಾಹಿತಿ ಹಂಚಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ವಾಕಿ ಟಾಕಿ ಮಾದರಿ ಉಪಕರಣದಲ್ಲಿ ತಂತಿಗಳನ್ನು ಜೋಡಿಸಲಾಗಿದೆ . ಇದು ಬೇರೆ ರೀತಿಯ ಉಪಕರಣವಿರುವ ಅನುಮಾನವಿದೆ . ವಿಧಿ ವಿಜ್ಞಾನ ತಜ್ಞರಿಂದ ನಿಖರ ವರದಿ ಬರಬೇಕಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರು ತಿಳಿಸಿದ್ದಾರೆ.

ಉಗ್ರರ ಬಂಧನ ಪ್ರಕರಣವನ್ನು ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿ ವಿಶೇಷ ತನಿಖಾ ತಂಡವನ್ನು ರಚಿಸಬೇಕು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಹೇಳಿದ್ದಾರೆ.

CBI Investigation ಶಂಕಿತರ ವಿರುದ್ಧ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆಯಡಿ ಹೆಬ್ಬಾಳ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ . ಹೀಗಾಗಿ ಎನ್ಐಎ ಅಧಿಕಾರಿಗಳು ಸಹ ತನಿಖೆ ಆರಂಭಿಸಿದ್ದಾರೆ. ಸಿಬಿಐ ಪೊಲೀಸರ ಜೊತೆ ಎನ್ ಐ ಎ ಅಧಿಕಾರಿಗಳು ಶಂಕಿತರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

2nd PUC Exam Result 2026 ಪಿಯು (ವಿಜ್ಞಾನ ) ಪರೀಕ್ಷೆ: ಶಿವಮೊಗ್ಗದ ಮಹೀನ್ ಖಾನುಂ ಗೆ600/596 ಸಾಧನೆಯ ಗರಿ.

2nd PUC Exam Result 2026 ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ...

Pace PU College Shivamogga ಶಿವಮೊಗ್ಗ ಪೇಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ ಸುಗ್ಗಿ.

Pace PU College Shivamogga 2025-26ನೇ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-1ಕ್ಕೆ...

CM Siddharamaiah ಚುನಾವಣಾ ಆಯೋಗವು ಗ್ಯಾರಂಟಿ ಯೋಜನೆಗಳ ಲೆಕ್ಕ ಕೇಳಿ ನಮ್ಮನ್ನ ಬೆದರಿಸಲು ಹೊರಟಿದೆ- ಸಿದ್ಧರಾಮಯ್ಯ

CM Siddharamaiah ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಸಂದರ್ಭದಲ್ಲಿ...