Sunday, December 14, 2025
Sunday, December 14, 2025

CBI Investigation ಬೆಂಗಳೂರಿನಲ್ಲಿ ಬಂಧಿತ ಶಂಕಿತ ಉಗ್ರರ ಜಫ್ತಿಯಲ್ಲಿ ಸ್ಫೋಟಕ ಸಹಾಯಕ ಸಾಮಗ್ರಿ ಪತ್ತೆ

Date:

CBI Investigation ಭಯೋತ್ಪಾದನಾ ಕೃತಿಗೆ ಸಂಚರಿಸಿದ ಪ್ರಕರಣದಲ್ಲಿ ಬಂಧಿಸಿರುವ ಶಂಕಿತರಿಂದ ಜಪ್ತಿ ಮಾಡಲಾಗಿರುವ ವಾಕಿ ಟಾಕಿಗಳು , ಬಾಂಬ್ ಸ್ಫೋಟಕ್ಕೆ ಬಳಸುವ ಟ್ರಿಗರ್ ಗಳು ಎಂಬ ಮಾಹಿತಿಯಿಂದ ಸಿಬಿಐ ತನಿಖೆಯಿಂದ ಹೊರ ಬಿದ್ದಿದೆ .

ಬೆಂಗಳೂರಿನ ಹೆಬ್ಬಾಳ ಠಾಣೆ ವ್ಯಾಪ್ತಿಯ ಸುಲ್ತಾನ್ ಪಾಳ್ಯದಲ್ಲಿ ಜುಲೈ 18ರಂದು ಕಾರ್ಯಾಚರಣೆ ನಡೆಸಿದ್ದ ಸಿಬಿಐ ಪೊಲೀಸರು, ಐವರು ಶಂಕಿತರನ್ನು ಬಂಧಿಸಿದ್ದರು. 7 ನಾಡ ಪಿಸ್ತೂಲ್ , 45 ಗುಂಡುಗಳು 12 ಮೊಬೈಲ್ ಡ್ಯಾಗರ್ ಮತ್ತು ನಾಲ್ಕು ವಾಕಿಟಾಕಿ ಮಾದರಿ ಉಪಕರಣಗಳನ್ನು ಜಪ್ತಿ ಮಾಡಿದ್ದರು.

ಈ ಎಲ್ಲಾ ವಸ್ತುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ. ಈ ಸಾಧನೆಗಳ ಪರೀಕ್ಷೆ ನಡೆಸಿರುವ ತಜ್ಞರು ಪ್ರಾಥಮಿಕ ಮಾಹಿತಿ ಹಂಚಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ವಾಕಿ ಟಾಕಿ ಮಾದರಿ ಉಪಕರಣದಲ್ಲಿ ತಂತಿಗಳನ್ನು ಜೋಡಿಸಲಾಗಿದೆ . ಇದು ಬೇರೆ ರೀತಿಯ ಉಪಕರಣವಿರುವ ಅನುಮಾನವಿದೆ . ವಿಧಿ ವಿಜ್ಞಾನ ತಜ್ಞರಿಂದ ನಿಖರ ವರದಿ ಬರಬೇಕಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರು ತಿಳಿಸಿದ್ದಾರೆ.

ಉಗ್ರರ ಬಂಧನ ಪ್ರಕರಣವನ್ನು ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿ ವಿಶೇಷ ತನಿಖಾ ತಂಡವನ್ನು ರಚಿಸಬೇಕು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಹೇಳಿದ್ದಾರೆ.

CBI Investigation ಶಂಕಿತರ ವಿರುದ್ಧ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆಯಡಿ ಹೆಬ್ಬಾಳ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ . ಹೀಗಾಗಿ ಎನ್ಐಎ ಅಧಿಕಾರಿಗಳು ಸಹ ತನಿಖೆ ಆರಂಭಿಸಿದ್ದಾರೆ. ಸಿಬಿಐ ಪೊಲೀಸರ ಜೊತೆ ಎನ್ ಐ ಎ ಅಧಿಕಾರಿಗಳು ಶಂಕಿತರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...