Sunday, July 13, 2025
Sunday, July 13, 2025

CBI Investigation ಬೆಂಗಳೂರಿನಲ್ಲಿ ಬಂಧಿತ ಶಂಕಿತ ಉಗ್ರರ ಜಫ್ತಿಯಲ್ಲಿ ಸ್ಫೋಟಕ ಸಹಾಯಕ ಸಾಮಗ್ರಿ ಪತ್ತೆ

Date:

CBI Investigation ಭಯೋತ್ಪಾದನಾ ಕೃತಿಗೆ ಸಂಚರಿಸಿದ ಪ್ರಕರಣದಲ್ಲಿ ಬಂಧಿಸಿರುವ ಶಂಕಿತರಿಂದ ಜಪ್ತಿ ಮಾಡಲಾಗಿರುವ ವಾಕಿ ಟಾಕಿಗಳು , ಬಾಂಬ್ ಸ್ಫೋಟಕ್ಕೆ ಬಳಸುವ ಟ್ರಿಗರ್ ಗಳು ಎಂಬ ಮಾಹಿತಿಯಿಂದ ಸಿಬಿಐ ತನಿಖೆಯಿಂದ ಹೊರ ಬಿದ್ದಿದೆ .

ಬೆಂಗಳೂರಿನ ಹೆಬ್ಬಾಳ ಠಾಣೆ ವ್ಯಾಪ್ತಿಯ ಸುಲ್ತಾನ್ ಪಾಳ್ಯದಲ್ಲಿ ಜುಲೈ 18ರಂದು ಕಾರ್ಯಾಚರಣೆ ನಡೆಸಿದ್ದ ಸಿಬಿಐ ಪೊಲೀಸರು, ಐವರು ಶಂಕಿತರನ್ನು ಬಂಧಿಸಿದ್ದರು. 7 ನಾಡ ಪಿಸ್ತೂಲ್ , 45 ಗುಂಡುಗಳು 12 ಮೊಬೈಲ್ ಡ್ಯಾಗರ್ ಮತ್ತು ನಾಲ್ಕು ವಾಕಿಟಾಕಿ ಮಾದರಿ ಉಪಕರಣಗಳನ್ನು ಜಪ್ತಿ ಮಾಡಿದ್ದರು.

ಈ ಎಲ್ಲಾ ವಸ್ತುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ. ಈ ಸಾಧನೆಗಳ ಪರೀಕ್ಷೆ ನಡೆಸಿರುವ ತಜ್ಞರು ಪ್ರಾಥಮಿಕ ಮಾಹಿತಿ ಹಂಚಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ವಾಕಿ ಟಾಕಿ ಮಾದರಿ ಉಪಕರಣದಲ್ಲಿ ತಂತಿಗಳನ್ನು ಜೋಡಿಸಲಾಗಿದೆ . ಇದು ಬೇರೆ ರೀತಿಯ ಉಪಕರಣವಿರುವ ಅನುಮಾನವಿದೆ . ವಿಧಿ ವಿಜ್ಞಾನ ತಜ್ಞರಿಂದ ನಿಖರ ವರದಿ ಬರಬೇಕಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರು ತಿಳಿಸಿದ್ದಾರೆ.

ಉಗ್ರರ ಬಂಧನ ಪ್ರಕರಣವನ್ನು ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿ ವಿಶೇಷ ತನಿಖಾ ತಂಡವನ್ನು ರಚಿಸಬೇಕು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಹೇಳಿದ್ದಾರೆ.

CBI Investigation ಶಂಕಿತರ ವಿರುದ್ಧ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆಯಡಿ ಹೆಬ್ಬಾಳ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ . ಹೀಗಾಗಿ ಎನ್ಐಎ ಅಧಿಕಾರಿಗಳು ಸಹ ತನಿಖೆ ಆರಂಭಿಸಿದ್ದಾರೆ. ಸಿಬಿಐ ಪೊಲೀಸರ ಜೊತೆ ಎನ್ ಐ ಎ ಅಧಿಕಾರಿಗಳು ಶಂಕಿತರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Miss Universe Karnataka ಚಿಕ್ಕಮಗಳೂರಿನ ಕು.ವಂಶಿ ಅವರಿಗೆ ಮಿಸ್ ಯೂನಿವರ್ಸ್ ಕರ್ನಾಟಕ ಪುರಸ್ಕಾರ

Miss Universe Karnataka ಮಿಸ್ ಯೂನಿವರ್ಸ್ ಕರ್ನಾಟಕ ಸ್ಪರ್ಧೆಯಲ್ಲಿ ವಿಜೇತರಾಗಿರುವ ಚಿಕ್ಕಮಗಳೂರಿನ...

Department of Agriculture ಶೇ 48. ರಷ್ಟು ಮಾರುಕಟ್ಟೆ ಶುಲ್ಕ ವಿಧಿಸಲು ಅವಕಾಶ ಬೇಕೆಂಬ ಮನವಿಯನ್ನ ಪರಿಶೀಲಿಸಲಾಗುತ್ತದೆ- ಸಚಿವ ಶಿವಾನಂದ ಪಾಟೀಲ್

Department of Agriculture ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಮಾರುಕಟ್ಟೆ ಶುಲ್ಕವನ್ನು ಈ ಮೊದಲಿನಂತೆ...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಅರ್ಹತೆಗಳಲ್ಲಿ‌ ತಿದ್ದುಪಡಿ ಆದೇಶ

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಗಾಗಿ ತಿದ್ದುಪಡಿ ಆದೇಶ ಹೊರಡಿಸಲಾಗಿದ್ದು,...

University of Horticultural Sciences ಕೃಷಿ ಪದವಿಧರರು ಕೃಷಿಮಾಡಿ ಅಭಿವೃದ್ಧಿಗೆ ಕೊಡುಗೆ ನೀಡಿ-ನಟ ಶಶಿಕುಮಾರ್

ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ...