Monday, August 24, 2026
Monday, August 24, 2026

Loan to Farmers ಶೂನ್ಯ ಬಡ್ಡಿದರದಲ್ಲಿ ಕೃಷಿಕರಿಗೆ ಸಾಲದ ಮಿತಿ ಏರಿಕೆ- ಕೃಷಿ ಸಚಿವ ಚಲುವರಾಯಸ್ವಾಮಿ

Date:

Loan to Farmers ರಾಜ್ಯದ ಕೃಷಿಕರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡಲಾಗುತ್ತಿದ್ದ ಕೃಷಿ ಸಾಲವನ್ನು ರೂ.3 ಲಕ್ಷ ಮಿತಿಯಿಂದ ರೂ. 5 ಲಕ್ಷಕ್ಕೆ ಏರಿಸುವ ಬಗ್ಗೆ ಚಿಂತನೆ ನಡೆದಿದೆ. ಶೀಘ್ರದಲ್ಲಿ ಯೋಜನೆಯ ಅನುಷ್ಠಾನಗೊಳಿಸಲಾಗುವುದು ಎಂದು ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ತಿಳಿಸಿದರು.

ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಾವಣಗೆರೆ, ಚಿತ್ರದುರ್ಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅನುಷ್ಠಾನದಲ್ಲಿರುವ ಕೃಷಿ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಬಾರಿ ವಾಡಿಕೆಯಷ್ಟು ಮುಂಗಾರು ಮಳೆ ಬಿದ್ದಿಲ್ಲ. ಕೃಷಿ ಅಧಿಕಾರಿಗಳು ಕಾಲ ಕಾಲಕ್ಕೆ ಕೃಷಿ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಗ್ರಾಮೀಣ ಭಾಗದಲ್ಲಿ ಕ್ಷೇತ್ರ ಭೇಟಿಗೆ ತೆರಳಿದಾಗ ಅಲ್ಲಿನ ಕೃಷಿಕರ ಸಮಸ್ಯೆಗಳಿಗೆ ಕಿವಿಯಾಗಬೇಕು. ಅದಕ್ಕೆ ಪೂರಕವಾಗಿ ಸೂಕ್ತ ಹಾಗೂ ಸಕಾಲಿಕ ಮಾರ್ಗದರ್ಶನ ನೀಡಿ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕು ಎಂದರು.

Loan to Farmers ಮುಂದಿನ 15 ದಿನದೊಳಗೆ ಕೃಷಿ ಇಲಾಖೆಯಿಂದ ಅನುಷ್ಠಾನಗೊಳ್ಳುವ ವಿವಿಧ ಯೋಜನೆಗಳ ಮಾರ್ಗಸೂಚಿ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...