Saturday, September 28, 2024
Saturday, September 28, 2024

Araga Jnanendra ಕಾಂಗ್ರೆಸ್ ಸರ್ಕಾರ ತಾನಾಗೇ ಬೀಳಲಿದೆ,ಬಿಜೆಪಿ ಪ್ಲಾನ್ ಅಗತ್ಯವೇ ಇಲ್ಲ -ಆರಗ ಜ್ಞಾನೇಂದ್ರ

Date:

Araga Jnanendra ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಬಿಜೆಪಿ ಪ್ಲಾನ್ ಮಾಡುವ ಅವಶ್ಯಕತೆ ಇಲ್ಲ ಅವರಾಗಿಯೇ ಬೀಳುತ್ತಾರೆ. 135 ಸೀಟ್ ಬಂದಿದೆ ಎಂಬ ಮದದಿಂದ ಆ ಸರ್ಕಾರ ಕೆಲಸ ಮಾಡುತ್ತಿದೆ. ಬಜೆಟ್ ನಲ್ಲಿ 37 ಕಡೆ ಹಿಂದಿನ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಬೈದಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಹಿಂದಿನ ಬಿಜೆಪಿ ಸರ್ಕಾರ ಎಷ್ಟು ಒಳ್ಳೆಯದನ್ನ ಮಾಡಿದೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಸೋಮವಾರ ತುಂಗಾ ನದಿಗೆ ಬಾಗಿನ ಅರ್ಪಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಇತ್ತೀಚಿಗೆ ಅವರ ಮುಖಂಡರಾದ ಬಿ ಕೆ ಹರಿಪ್ರಸಾದ್ ಅವರೇ ಕಾಂಗ್ರೆಸ್ ವಿರುದ್ಧ ಮಾತನಾಡಿದ್ದಾರೆ ಮುಂದಿನ ದಿನಗಳಲ್ಲಿ ಆ ರೀತಿಯಾದ ಕೂಗು ಜಾಸ್ತಿ ಆಗಲಿದೆ. ಕಾಂಗ್ರೆಸ್ ಸರ್ಕಾರ ಬಿದ್ದು ಹೋಗಲಿದೆ ಎಂದರು.

Araga Jnanendra ಮಣಿಪುರದ ವಿಚಾರ ಮಾತನಾಡಿ ಸರ್ಕಾರ ಎಲ್ಲಾ ರೀತಿಯಲ್ಲಿ ಕ್ರಮ ತೆಗೆದುಕೊಳ್ಳುತ್ತಿದೆ. ಜನರನ್ನು ಕೊಲ್ಲುವ ಸ್ಥಿತಿಗೆ ಹೋಗದೆ ಅತ್ಯಂತ ಶಾಂತಿ ರೀತಿಯಲ್ಲಿ ಪರಿಹಾರ ಮಾಡುವಂತ ಕೆಲಸ ಆಗುತ್ತಿದೆ. ಬೇರೆ ಬೇರೆ ಶಕ್ತಿ ಅದರ ಹಿಂದೆ ನಿಂತು ಆಟ ಆಡುತ್ತಿವೆ ಸದ್ಯದಲ್ಲೇ ಎಲ್ಲವೂ ಹೊರಬರಲಿದೆ. ಈಗಾಗಲೇ ಪ್ರಧಾನಿ ಗಳು ಕೂಡ ತಿಳಿಸಿದ್ದಾರೆ ಯಾರನ್ನು ಕೂಡ ಬಿಡುವುದಿಲ್ಲ ಎಂದು ಹಾಗಾಗಿ ಸದ್ಯದಲ್ಲೇ ಯಾರ ಕೈವಾಡ ಇದ್ದರೂ ಹೊರಬರಲಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...