Thursday, March 19, 2026
Thursday, March 19, 2026

Youth Hostel of Association India ಚಾರಣದಿಂದ ದೇಹ,ಮನಸ್ಸು ಸದೃಢ- ಸುನೀಲ್ ಕುಮಾರ್

Date:

Youth Hostel of Association India ಚಾರಣ ಚಟುವಟಿಕೆಯಲ್ಲಿ ಎಲ್ಲರೂ ತೊಡಗಿಸಿಕೊಳ್ಳಬೇಕು. ಚಾರಣದಲ್ಲಿ ಪಾಲ್ಗೊಳ್ಳುವುದರಿಂದ ದೇಹ ಮನಸ್ಸು ಸದೃಢಗೊಳ್ಳುವುದರ ಜತೆಯಲ್ಲಿ ಸಂತೋಷ ನಮ್ಮದಾಗುತ್ತದೆ ಎಂದು ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಜಿ.ಸುನೀಲ್‌ಕುಮಾರ್ ಹೇಳಿದರು.

ಯೂತ್ ಹಾಸ್ಟೆಲ್ ಆಫ್ ಅಸೋಸಿಯೇಷನ್ ಇಂಡಿಯಾ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಮಳೆಗಾಲದ ಚಾರಣಕ್ಕೆ ಚಾಲನೆ ನೀಡಿ ಮಾತನಾಡಿ, ಸ್ಥಳೀಯ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಚಾರಣಗಳನ್ನು ಪ್ರತಿ ವರ್ಷ ಜಿಲ್ಲಾ ಘಟಕದ ಆಯೋಜಿಸುತ್ತಿದ್ದು, ನೂರಾರು ಜನರು ಚಾರಣದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದ್ದಾರೆ ಎಂದು ತಿಳಿಸಿದರು.

ಚಾರಣ ಮಾಡುವುದರಿಂದ ಸಸ್ಯ ಸಂಕುಲ ಹಾಗೂ ಜೀವ ವೈವಿಧ್ಯತೆಯ ಪರಿಚಯ ಆಗುತ್ತದೆ. ಪರಿಸರದ ವಿಶೇಷತೆ ಬಗ್ಗೆ ತಿಳಿಯುತ್ತದೆ. ಹೋಗೆರೆಖನ ಪರ್ವತಕ್ಕೆ 20 ಕಿಮೀ ಚಾರಣದಲ್ಲಿ 64 ಸದಸ್ಯರು ಪಾಲ್ಗೊಂಡಿರುವುದು ವಿಶೇಷ. ಮಹಿಳೆಯರು, ಮಕ್ಕಳು ಅತ್ಯಂತ ಖುಷಿಯಿಂದ ಪಾಲ್ಗೊಂಡಿರುವುದು ಸಂತಸದ ಸಂಗತಿ ಎಂದರು.

Youth Hostel of Association India ಇದೇ ಸಂದರ್ಭದಲ್ಲಿ ಯೂತ್ ಹಾಸ್ಟೆಲ್ ಜಿಲ್ಲಾ ಚೇರ‍್ಮನ್ ಹರೀಶ್ ಪಂಡಿತ್ ಮಾತನಾಡಿ, ಚಾರಣದಿಂದ ಸಹ ಪ್ರವಾಸಿಗಳೊಂದಿಗೆ ಉತ್ತಮ ಸಂವಹನ ನಡೆಸುವ ಜತೆಯಲ್ಲಿ ಮಾಹಿತಿ ವಿನಿಮಯ ಆಗುತ್ತದೆ. ಮಾನಸಿಕ ದುಗುಡ ಕಡಿಮೆಯಾಗಿ ಉತ್ಸಾಹ ಹೆಚ್ಚುತ್ತದೆ. ದೇಹದ ಶಕ್ತಿ ಸಾಮಾರ್ಥ್ಯದ ಅರಿವಾಗುತ್ತದೆ ಎಂದು ಹೇಳಿದರು.

ಯೂತ್ ಹಾಸ್ಟೆಲ್ ರಾಜ್ಯ ಸಂಘದ ಮಾಜಿ ಉಪಾಧ್ಯಕ್ಷ ಜಿ.ವಿಜಯ್‌ಕುಮಾರ್ ಮಾತನಾಡಿ, ತುಂಬಾ ಕಡಿಮೆ ಖರ್ಚಿನಲ್ಲಿ ಅತ್ಯಂತ ವ್ಯವಸ್ಥಿತವಾಗಿ ಚಾರಣಗಳನ್ನು ಯೂತ್ ಹಾಸ್ಟೆಲ್ ಆಯೋಜಿಸುತ್ತದೆ. ಹೆಚ್ಚು ಹೆಚ್ಚು ಜನರು ಯೂತ್ ಹಾಸ್ಟೆಲ್ ಸದಸ್ಯರಾಗಬೇಕು. ಮಳೆಯಲ್ಲಿ ನಡೆದ ಚಾರಣ ವಿಶೇಷ ಅನುಭವ ಎಂದು ತಿಳಿಸಿದರು.

ಚಾರಣದಲ್ಲಿ ಕಾರ್ಯದರ್ಶಿ ಪ್ರಶಾಂತ್, ಉಮೇಶ್ ಅಕ್ಕಸಾಲಿ, ರಾಘವೇಂದ್ರ, ಬದ್ರಿನಾಥ್, ಸುನೀಲ್, ಜಿಲ್ಲಾ ಘಟಕದ ನಿರ್ದೇಶಕರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...