Monday, December 15, 2025
Monday, December 15, 2025

Eshwara Khandre ಕಲ್ಯಾಣ ಕರ್ನಾಟಕಕ್ಕೆ ಕ್ರಿಯಾ ಯೋಜನೆ ರೂಪಿಸಿ- ಸಚಿವ ಈಶ್ವರ ಖಂಡ್ರೆ

Date:

Eshwara Khandre ಬೆಂಗಳೂರಿನಲ್ಲಿ ಇಂದು ನಡೆದ ಕೆ.ಕೆ.ಆರ್.ಡಿ.ಬಿ. (ಕಲ್ಯಾಣ ಕರ್ನಾಟಕ) ಪ್ರಗತಿ ಪರಿಶೀಲನಾ ಸಭೆಯಲ್ಲಿ ಅರಣ್ಯ ಸಚಿವ ಈಶ್ವರ. ಖಂಡ್ರೆ ಭಾಗವಹಿಸಿದ್ದರು.

ಕ್ರಿಯಾಯೋಜನೆ ರೂಪಿಸಿ ಕಲ್ಯಾಣ ಕರ್ನಾಟಕ ಅಭಿವೃದ್ಧಿಪಡಿಸಲು ಸಚಿವರು ಸಲಹೆ ನೀಡಿದರು.

ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಈ ಬಾರಿ 3 ಸಾವಿರ ಕೋಟಿ ರೂಪಾಯಿ ಮಂಜೂರಾಗಿದೆ. ವೆಚ್ಚವಾಗದೆ ಉಳಿದಿರುವ 2 ಸಾವಿರ ಕೋಟಿ ರೂಪಾಯಿ ಸೇರಿ ಒಟ್ಟು 5 ಸಾವಿರ ಕೋಟಿ ರೂ ಹಣ ಇದೆ. ಈ ಹಣವನ್ನು ಸಮರ್ಪಕವಾಗಿ ಖರ್ಚು ಮಾಡಿ ನಮ್ಮ ಭಾಗದ 7 ಜಿಲ್ಲೆಗಳ ಅಭಿವೃದ್ಧಿ ಮಾಡಬೇಕು ಎಂದರು.

ಬೆಂಗಳೂರಿನ ವಿಕಾಸಸೌಧದಲ್ಲಿಂದು ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಹಿಂದಿನ ಮೂರು ವರ್ಷಗಳಲ್ಲಿ ಹಂಚಿಕೆಯಾದ ಹಣವನ್ನೂ ವೆಚ್ಚ ಮಾಡದೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ನಿಷ್ಕ್ರಿಯವಾಗಿತ್ತು. ಈಗ ನಮ್ಮ ಸರ್ಕಾರದಲ್ಲಿ ಹಾಗೆ ಆಗಬಾರದು ಎಂದರು. ಹಿಂದಿನ ಸರ್ಕಾರದ ಅವಧಿಯಲ್ಲಿ ಖರ್ಚಾಗದೆ ಉಳಿದ ಹಣ ಮತ್ತು ಈ ಬಾರಿ ಹಂಚಿಕೆಯಾಗಿರುವ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಸಮರ್ಪಕವಾಗಿ ವೆಚ್ಚ ಮಾಡಲು ಮುಂಚಿತವಾಗಿಯೇ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಆಗ್ರಹಿಸಲಾಯಿತು.

ಮಾನದಂಡದ ಪ್ರಕಾರ ದೇಶದಲ್ಲಿ ಶೇ.33ರಷ್ಟು ಹಸಿರು ವಲಯ ವ್ಯಾಪ್ತಿ ಇರಬೇಕು. ರಾಜ್ಯದಲ್ಲಿ ಶೇ.21ರಷ್ಟು ಹಸಿರು ವಲಯ ವ್ಯಾಪ್ತಿ ಇದೆ. ಆದರೆ ಕಲ್ಯಾಣ ಕರ್ನಾಟಕದಲ್ಲಿ ಶೇ.10ಕ್ಕಿಂತ ಕಡಿಮೆ ಇದೆ. ಕೆ.ಕೆ.ಆರ್.ಡಿ.ಬಿ.ವತಿಯಿಂದ ಹಸಿರೀಕರಣಕ್ಕೆ 3 ಸಾವಿರ ಕೋಟಿ ರೂಪಾಯಿಗಳ ಪೈಕಿ ಶೇ.10ರಷ್ಟು ನೀಡಬೇಕು ಎಂದು ಮನವಿ ಮಾಡಲಾಯಿತು.

ಇದಕ್ಕೆ ಸಮರ್ಥಿಸಿದ ಸಚಿವ ಪ್ರಿಯಾಂಕ ಖರ್ಗೆ
, ಹಸಿರು ಗೋಡೆ ನಿರ್ಮಾಣದ ಪ್ರಸ್ತಾಪ ಈ ಹಿಂದೆಯೇ ಇತ್ತು. ಹಸಿರು ವಲಯ ಹೆಚ್ಚಾದರೆ ಮಳೆ ಚೆನ್ನಾಗಿ ಆಗುತ್ತದೆ. ತಾಪಮಾನ ಉತ್ತಮವಾಗಿರುತ್ತದೆ. ಹೀಗಾಗಿ ಕ.ಕ. ಭಾಗದ ಸಚಿವರ ಪ್ರತ್ಯೇಕ ಸಭೆ ಕರೆಯುವಂತೆ ಸಲಹೆ ನೀಡಿದರು.

Eshwara Khandre ಸಭೆಯಲ್ಲಿ ಸಚಿವರುಗಳಾದ ಶರಣ ಪ್ರಕಾಶಬಪಾಟೀಲ್ ,
ಎಸ್ ,ಬಿ.ದರ್ಶನಾಪುರ್,
ರಹೀಂ ಖಾನ್, ಶಿವರಾಜ ತಂಗಡಗಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶ್ಯಾಲಿನಿ ರಜನೀಶ್ ಮತ್ತಿತರರು ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...