Monday, August 3, 2026
Monday, August 3, 2026

Rotary East Shivamogga ಪ್ರತಿಯೊಬ್ಬರೂ ಸಸಿನೆಟ್ಟು ಪೋಷಿಸಬೇಕು- ವಿಜಯ್ ಕುಮಾರ್

Date:

Rotary East Shivamogga ಮನುಷ್ಯ ಭೂಮಿಮೇಲೆ ಆರೋಗ್ಯದಿಂದ ಜೀವಿಸಲು ಉತ್ತಮ ಪರಿಸರಬೇಕು. ಪರಿಸರ, ಪ್ರಕೃತಿ ಚನ್ನಾಗಿಲ್ಲದಿದ್ದರೆ ಭೂಮಿ ಮೇಲೆ ಜೀವಿಸುವುದು ತುಂಬಾ ಕಷ್ಟವಾಗುತ್ತದೆ ರಂದು ಮಾಜಿ ಜಿಲ್ಲಾ ಗೌರ್ನರ್ ಜಿ.ವಿಜಯಕುಮಾರ್ ಅವರು ಹೇಳಿದರು.

ಶಿವಮೊಗ್ಗದ ಕೊಮ್ಮನಾಳು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ರೋಟರಿ ಶಿವಮೊಗ್ಗ ಪೂರ್ವ ಇಂಟರಾಕ್ಟ್ ಕ್ಲಬ್ ವತಿಯಿಂದ ವಿಶ್ವ ಪ್ರಕೃತಿ ಸಂರಕ್ಷಣಾ ದಿನವನ್ನು ಸಸಿಗಳನ್ನು ನೆಡುವ ಮೂಲಕ ಆಚರಿಸಿದರು.

ಪ್ರಕೃತಿಯಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆದ ನಾವು ಇಂದು ಪ್ರಕೃತಿಯನ್ನು ಎಷ್ಟು ಸಾದ್ಯವೋ ಅಷ್ಟು ಕಲ್ಮಷ ಗೊಳಿಸುತ್ತಿದ್ದೇವೆ ಪ್ರತಿಯೊಬ್ಬರು ಸಸಿಯನ್ನು ನೆಡುವುದರ ಮೂಲಕ ಅವುಗಳ ಪಾಲನೆ ಪೋಷಣೆ ಮಾಡಬೇಕು ಎಂದರು.

ರೋಟರಿ ಮಾಜಿ ಅಧ್ಯಕ್ಷೆ ಸುಮತಿ ಕುಮಾರ್ ಸ್ವಾಮಿ ಮಾತನಾಡಿ , ಮರ ಗಿಡ ಪರಿಸರ ಸಂರಕ್ಷಣೆಯಿಂದ ಉತ್ತಮ ಆಮ್ಲಜನಕ ಪಡೆಯುವುದರ ಜೊತೆಗೆ ಆರೋಗ್ಯ ಸಹ ಚನ್ನಾಗಿರುತ್ತದೆ. ಪರಿಸರ ಪ್ರಜ್ಞೆಯನ್ನು ಬಾಲ್ಯದಿಂದಲೇ ಮಕ್ಕಳಿಗೆ ಕಲಿಸಬೇಕು ಎಂದರು.

Rotary East Shivamogga ಈ ಸಂದರ್ಭದಲ್ಲಿ ಮಾಜಿ ಕಾರ್ಯದರ್ಶಿ ಕುಮಾರ ಸ್ವಾಮಿ, ಕಾರ್ಯದರ್ಶಿ ಕಿಶೋರ್, ಶಾಲಾ ಮಕ್ಕಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...