Monday, February 2, 2026
Monday, February 2, 2026

Dr. Selvamani ಆಗಸ್ಟ್ 1 ರಿಂದ ಶಿವಮೊಗ್ಗ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಲ್ಲಿ ಇ-ಆಡಳಿತ ಜಾರಿ- ಡಾ.ಸೆಲ್ವಮಣಿ

Date:

Dr. Selvamani  ಆಡಳಿತದಲ್ಲಿ ದಕ್ಷತೆ, ಸ್ಥಿರತೆ ಮತ್ತು ಯೋಜನೆಗಳ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಆಗಸ್ಟ್ 1 ರಿಂದ ಅನ್ವಯಗೊಳ್ಳುವಂತೆ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಇ-ಆಡಳಿತ ವ್ಯವಸ್ಥೆ ಜಾರಿಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಹೇಳಿದರು.

ಅವರು ,  ತಮ್ಮ ಕಚೇರಿ ಸಭಾಂಗಣದಲ್ಲಿ ಶಿವಮೊಗ್ಗ ಮಹಾನಗರಪಾಲಿಕೆ ಸೇರಿದಂತೆ ಜಿಲ್ಲೆಯ  11 ಸ್ಥಳೀಯ ಸಂಸ್ಥೆಗಳಿಗೆ ಅನುಕುಲವಾಗುವಂತೆ ವಿನ್ಯಾಸಗೊಳಿಸಿದ ಇ-ಆಡಳಿತ ತಂತ್ರಾoಶವನ್ನು ಉದ್ಘಾಟಿಸಿದ ನಂತರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಆಫೀಸ್ ವ್ಯವಸ್ಥೆ ಅನುಷ್ಠಾನಗೊಳ್ಳುತ್ತಿರುವ ರಾಜ್ಯದ ಮೊದಲ ಜಿಲ್ಲೆ ಇದಾಗಿದೆ. ಸಾರ್ವಜನಿಕರ ಅಮೂಲ್ಯ ಸಮಯವನ್ನು ಉಳಿಸುವುದಲ್ಲದೆ ಅವರ ಬೇಡಿಕೆಗಳಿಗನುಗುಣವಾಗಿ ಕಾರ್ಯನಿರ್ವಹಿಸಲು ಇ-ತಂತ್ರಾoಶ ಸಹಕಾರಿಯಾಗಲಿದೆ. ಕಡತಗಳ ಅನಗತ್ಯ ವಿಳಂಬವನ್ನು ತಪ್ಪಿಸಿ, ಆಡಳಿತದಲ್ಲಿ ಗುಣಮಟ್ಟವನ್ನು ಸುಧಾರಿಸುವಲ್ಲಿ, ಪಾರದರ್ಶಕತೆ ಕಂಡುಕೊoಡು ಅಧಿಕಾರಿಗಳಿಗೆ ಹೊಣೆಗಾರಿಕೆಯನ್ನು ಸ್ಥಾಪಿಸಿ, ರಚನಾತ್ಮಕವಾಗಿ ಕಾರ್ಯನಿರ್ವಹಿಸುವಲ್ಲಿ ಸಹಕಾರಿಯಾಗಲಿದೆ. ಎಲ್ಲಾ ಅಧಿಕಾರಿಗಳು ಈ ಸದವಕಾಶದ ಲಾಭ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ಎಲ್ಲಾ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಸಲಹೆ ನೀಡಿದರು.

ಸಾರ್ವಜನಿಕರಿಗೆ ಒದಗಿಸುವ ಮಾಹಿತಿಯಲ್ಲಿ ಪಾರದರ್ಶಕತೆ ಮತ್ತು ನಿಖರತೆಯೊಂದಿಗೆ ಸರ್ಕಾರದ ಆಡಳಿತವನ್ನು ವೇಗಗೊಳಿಸುವ ಮಹತ್ವದ ಉದ್ಧೇಶದೊಂದಿಗೆ ಮಾಹಿತಿ ಮತ್ತು ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಲ್ಲಿ ರಾಜ್ಯವು ಮುಂಚೂಣಿಯಲ್ಲಿದೆ ಎಂದ ಅವರು, ಇ-ಆಫೀಸ್ ಕಚೇರಿ ವ್ಯವಸ್ಥೆಯು ಸರಳೀಕೃತ, ಸ್ಪಂದಿಸುವ, ಪರಿಣಾಮಕಾರಿ, ಜವಾಭ್ದಾರಿಯುತ ಮತ್ತು ಪಾರದರ್ಶಕ ಕೆಲಸವನ್ನು ಸಾಧಿಸುವ ಮಾಧ್ಯಮವಾಗಿದೆ. ಇ-ಆಫೀಸ್‌ನ ವೇಗ ಮತ್ತು ದಕ್ಷತೆಯು ಇಲಾಖೆಗಳಿಗೆ ತಿಳುವಳಿಕೆಯುಳ್ಳ ಮತ್ತು ಕ್ಷಿಪ್ರ ನಿರ್ಧಾರಕ್ಕೆ ಸಹಕರಿಸುವುದಲ್ಲದೆ ಬಹುಮುಖ್ಯವಾಗಿ ಅವುಗಳನ್ನು ಕಾಗದ ರಹಿತವಾಗುವಂತೆ ಮಾಡಲಿದೆ ಎಂದು ತಿಳಿಸಿದರು.

Dr. Selvamani  ಈ ಸಂದರ್ಭದಲ್ಲಿ ಸಮುದಾಯ ಸಂಪರ್ಕಾಧಿಕಾರಿ ಮೋಹನ್‌ಕುಮಾರ್, ಇ-ಆಫೀಸ್ ಸಂಪರ್ಕಾಧಿಕಾರಿ ಅನೂಪ್, ಜಿಲ್ಲಾ ನೋಡಲ್ ಅಧಿಕಾರಿ ಸುದೀಪ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...