Sunday, August 23, 2026
Sunday, August 23, 2026

Press Trust of Sagar ಪ್ರೆಸ್ ಟ್ರಸ್ಟ್ ಆಫ್ ಸಾಗರ್ ಅಧ್ಯಕ್ಷರಾಗಿ ಗಣಪತಿ‌ ಶಿರಳಗಿ ಆಯ್ಕೆ

Date:

Press Trust of Sagar ಸಾಗರದ ಪತ್ರಿಕಾ ಭವನದಲ್ಲಿ ಇಂದು ನಡೆದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪ್ರೆಸ್ ಟ್ರಸ್ಟ್ ಆಫ್ ಸಾಗರ್ ಇವುಗಳ ಜಂಟಿ ಸರ್ವಸದಸ್ಯರ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಗಣಪತಿ ಶಿರಳಗಿ, ಉಪಾಧ್ಯಕ್ಷ ಲಕ್ಷ್ಮೀ ನಾರಾಯಣ ಹೆಗಡೆ ತಾಳಗುಪ್ಪ, ಕಾರ್ಯದರ್ಶಿ ರಮೇಶ್ ಎನ್., ಖಜಾಂಚಿಯಾಗಿ ಶೈಲೇಂದ್ರ ಎ.ಆರ್. ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಟ್ರಸ್ಟ್ ಅಧ್ಯಕ್ಷ ಎಚ್.ವಿ.ರಾಮಚಂದ್ರರಾವ್ ವಹಿಸಿದ್ದರು. ಟ್ರಸ್ಟ್ ಕಾರ್ಯದರ್ಶಿ ಎಸ್.ವಿ.ಹಿತಕರ ಜೈನ್ ವಾರ್ಷಿಕ ಲೆಕ್ಕ ಪತ್ರ ಮಂಡಿಸಿದರು. ಸಂಘವನ್ನು ಕ್ರಿಯಾಶೀಲವಾಗಿ ನಡೆಸಿಕೊಂಡು ಹೋಗುವ ಕುರಿತು, ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸುವ ಕುರಿತು ಚರ್ಚೆ ನಡೆಯಿತು.
ಟ್ರಸ್ಟಿ ಎ.ಡಿ.ಸುಬ್ರಹ್ಮಣ್ಯ ಭಟ್, ಸಂಘದ ಹಿರಿಯ ಸದಸ್ಯ ಕೆ.ಎನ್.ವೆಂಕಟಗಿರಿ, ಧರ್ಮರಾಜ್, ಪ್ರಶಾಂತಬಾಬು, ವಿಜಯೇಂದ್ರ Press Trust of Sagar ಶಾನಭಾಗ್, ಅಂತೋನಿ, ಸುಕುಮಾರ್, ರೂಪಶ್ರೀ, ರಫಿ, ರವಿ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...