Sunday, December 14, 2025
Sunday, December 14, 2025

Dalit Student Council ಪ.ಜಾತಿ/ ಪ.ಪಂಗಡದ ಸಮುದಾಯಗಳಿಗೆಮೀಸಲಾದ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಸದಿರಲು ಆಗ್ರಹ

Date:

Dalit Student Council ಪ.ಜಾತಿ ಮತ್ತು ಪ.ಪಂಗಡದ ಸಮುದಾಯಗಳಿಗೆ ಮೀಸಲಿರಿಸಿರುವ ಅನು ದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸದೇ ಜನಾಂಗದ ಅಭಿವೃದ್ದಿಗೆ ಉಪಯೋಗಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.

ಈ ಸಂಬಂಧ ಅಪರ ಜಿಲ್ಲಾಧಿಕಾರಿ ನಾರಾಯಣ ಕನಕರೆಡ್ಡಿ ಮೂಲಕ ಮುಖ್ಯಮಂತ್ರಿಗಳಿಗೆ ಬುಧವಾರ ಮನವಿ ಸಲ್ಲಿಸಿದ ಮುಖಂಡರುಗಳು ರಾಜ್ಯ ಸರ್ಕಾರ ಎಸ್ಸಿ, ಎಸ್ಟಿ ಸಮುದಾಯಕ್ಕೆ 11 ಸಾವಿರ ಕೋಟಿ ಮೀಸಲಿರಿ ವುದನ್ನು ಬೇರೆಡೆ ಬಳಸದೇ ಜನಾಂಗದ ಶ್ರೇಯೋಭಿವೃದ್ದಿ ಮಾತ್ರ ಬಳಕೆ ಮಾಡಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ವಿದ್ಯಾರ್ಥಿ ಪರಿಷತ್‌ನ ಜಿಲ್ಲಾ ಸಂಚಾಲಕಿ ಸಂಗೀತ ಪ್ರಸಾದ್ ಪ.ಜಾತಿ, ಪ.ಪಂಗಡ ಸಮುದಾಯಗಳಿಗೆ 11 ಸಾವಿರ ಕೋಟಿ ರೂ. ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿರುವುದು ಖಂಡನೀಯ.

Dalit Student Council ಈ ನಿರ್ಧಾರವನ್ನು ಸರ್ಕಾರ ಕೂಡಲೇ ಕೈಬಿಟ್ಟು ಸಮುದಾಯದ ಏಳಿಗೆಗೆ ಉಪಯೋಗಿಸು ವಂತಾಗಬೇಕು ಎಂದು ಮನವಿ ಮಾಡಿದರು.
ಶೋಷಿತ ಸಮುದಾಯಗಳ ಹಕ್ಕು ಕಿತ್ತುಕೊಂಡು ಘೋಷಣೆಯ ಯೋಜನೆಗಳಿಗಾಗಿ ಸಮುದಾಯದ ಹಣ ಬಳಸದೇ ಜನಾಂಗದಲ್ಲಿರುವ ವಿದ್ಯಾರ್ಥಿಗಳು, ನಿರುದ್ಯೋಗಿ ಯುವಕರು, ಮಹಿಳೆಯರು, ಮಕ್ಕಳು ಹಾಗೂ ರೈತ ಕೂಲಿ ಕಾರ್ಮಿಕರ ಅಭಿವೃದ್ದಿಗೆ ಅನುದಾನ ಮೀಸಲಿಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್‌ನ ಕಾರ್ಯದರ್ಶಿ ಮೋಹನೇಶ್, ಸದಸ್ಯರುಗಳಾದ ಕಾರ್ತೀಕ್, ಕುಮಾರ್, ಸಂಜಯ್, ಶರತ್, ದಸಂಸ ಮುಖಂಡರುಗಳಾದ ಕೇಶವ, ಮಧು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Visvesvaraya Technological University ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ವಿಶೇಷ ಕಾರ್ಯಾಗಾರ

Visvesvaraya Technological University ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ "ಜ್ಞಾನ...

B.Y. Raghavendra ಶಿವಮೊಗ್ಗದಲ್ಲಿ ESIC ಉಪ-ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಬಿ.ವೈ.ರಾಘವೇಂದ್ರ ಮನವಿ

B.Y. Raghavendra ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವರಾದ ಸನ್ಮಾನ್ಯ ಡಾ....

CM Siddharamaih ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸಭೆ

CM Siddharamaih ಸುವರ್ಣ ವಿಧಾನಸೌಧದಲ್ಲಿ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ...