Saturday, September 28, 2024
Saturday, September 28, 2024

DSS Chikkamagalur ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಿದರೆ ಸಹಕಾರವಿದೆ- ಸುಬ್ರಹ್ಮಣ್ಯ

Date:

DSS Chikkamagalur ನ.ರಾ.ಪುರ ತಾಲ್ಲೂಕಿನ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಪುನರ್ ರಚನೆ ಹಾಗೂ ಕಾರ್ಯಕರ್ತರ ಸಭೆಯನ್ನು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಿ.ಪಂ. ಮಾಜಿ ಸದಸ್ಯ ಸುಬ್ರಹ್ಮಣ್ಯ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ ದಸಂಸವು 70ರ ದಶಕದಲ್ಲಿ ಬಿ.ಕೃಷ್ಟ್ಣಪ್ಪ ಸ್ಥಾಪಿಸಿದ ಸಂಘಟನೆಯಾಗಿದ್ದು ಈ ಸಮಿತಿಗೆ ಸಂವಿಧಾನ ಸಿದ್ದಾಂತವಿದೆ.

ಪತ್ರಿಕಾಗೋಷ್ಠಿಗೆ ಸೀಮಿತವಾದ ಸಂಘಟನೆಯಲ್ಲ. ರಾಜ್ಯದ ನಾಯಕ ಮಾವಳ್ಳಿ ಶಂಕರ್ ನೇತೃತ್ವದಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲಿ ಸಂಘಟಿಸಲಾಗುತ್ತಿದೆ ಎಂದಿದ್ದಾರೆ.

DSS Chikkamagalur ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಬ್ರಹ್ಮಣ್ಯ ತಾಲ್ಲೂಕಿನಲ್ಲಿ ಹಲವಾರು ಸಮಸ್ಯೆಗಳಿರುವ ಹಿನ್ನೆಲೆಯಲ್ಲಿ ದಸಂಸ ಹಲವಾರು ಸಂಕಷ್ಟಗಳ ನಡುವೆ ಅತ್ಯಂತ ಚುರುಕಿನಿಂದ ಜನಪರವಾದ ಕೆಲಸ ಮಾಡುತ್ತಿದ್ದು ಪ್ರತಿಯೊಬ್ಬರು ಒಗ್ಗಟ್ಟಾಗಿ ಹೋರಾಟ ರೂಪಿಸಿದರೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಮಹೇಂದ್ರ, ತರೀಕೆರೆ ತಾಲ್ಲೂಕಿನ ಸಂಚಾಲ ಕರಾದ ರಾಮಚಂದ್ರ, ಮೌಂಟ್, ಸುಂದರೇಶ್, ಭೀಮ್ ಆರ್ಮಿ ನಾಗರಾಜ್ ಭಾಗವಹಿಸಿದ್ದರು
ಬಳಿಕ ನೂತನ ಸಮಿತಿಗೆ ಸಂಚಾಲಕರಾಗಿ ವಸಂತಕುಮಾರ್, ಅಂಬೇಡ್ಕರ್ ನಗರ ಸಂಘಟನಾ ಸಂಚಾಲಕ ಉಮೇಶ್ ಕೆ.ಕಣಬೂರು, ಮಹೇಶ್ ಭೈರಾಪುರ, ಬಾಬು ಅವರನ್ನು ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...