Monday, December 15, 2025
Monday, December 15, 2025

Uttaradi Mutt ಹೊಳೆಹೊನ್ನೂರಿನಲ್ಲಿ ಶ್ರೀಭೂಸಮೇತ ಶ್ರೀನಿವಾಸ ದೇವರಿಗೆ ವಿಶೇಷ ಪುಷ್ಪಾರ್ಚನೆ

Date:

Uttaradi Mutt ತಿರುಪತಿ ತಿರುಮಲ ದೇವಸ್ಥಾನಮ್‌ ನ ದಾಸಸಾಹಿತ್ಯ ಪ್ರಾಜೆಕ್ಟ್ ಮತ್ತು ಉತ್ತರಾದಿ ಮಠದ ಸಹಯೋಗದಲ್ಲಿ ಶ್ರೀ ಸತ್ಯಾತ್ಮ ತೀರ್ಥರ 28ನೇ ಚಾತುರ್ಮಾಸ ಕಾಲದಲ್ಲಿ ಶ್ರೀಭೂ ಸಮೇತ ಶ್ರೀ ಶ್ರೀನಿವಾಸ ದೇವರಿಗೆ ವಿಶೇಷ ಪುಷ್ಪಾರ್ಚನೆ ಕಾರ್ಯಕ್ರಮ ನಡೆಯಿತು
ಆ.೬ರ ಭಾನುವಾರ ಸಂಜೆ ೪ ರಿಂದ ೬ ಗಂಟೆಯವರೆಗೆ ಈ ಕಾರ್ಯಕ್ರಮ ಶ್ರೀ ಸತ್ಯಾತ್ಮ ತೀರ್ಥರ ಉಪಸ್ಥಿತಿಯಲ್ಲಿ ನಡೆಯಿತು.
ದಾಸ ಸಾಹಿತ್ಯ ಪ್ರಾಜೆಕ್ಟ್ನ ವಿಶೇಷಾಧಿಕಾರಿ ಆನಂದತೀರ್ಥಾಚಾರ್ಯ ಪಗಡಾಲ ನೇತೃತ್ವದ ತಂಡ ಈ ಕಾರ್ಯಕ್ರಮ ನಡೆಸಿಕೊಡಲಾಯಿತು.
ಈ ಕಾರ್ಯಕ್ರಮದ ನಿಮಿತ್ತ ತಿರುಪತಿಯಿಂದಲೇ ಶ್ರೀಭೂ ಸಮೇತ ಶ್ರೀ ಶ್ರೀನಿವಾಸ ದೇವರ ಉತ್ಸವ ಮೂರ್ತಿಯನ್ನು ಕರೆತರಲಾಗಿದೆ.

ಗ್ರಂಥಗಳ ಲೋಕಾರ್ಪಣೆ :

Uttaradi Mutt ಶುಕ್ರವಾರ ಸಂಜೆ ೨೮ನೇ ಚಾತುರ್ಮಾಸ್ಯದ ವಿದ್ವತ್ ಸಭೆಯಲ್ಲಿ ಶ್ರೀ ಸತ್ಯಧರ್ಮರ ಭಾಗವತ ದಶಮ ಸ್ಕಂದ ವ್ಯಾಖ್ಯಾನಾಧಾರಿತ ಅನುಗ್ರಹ ಸಂದೇಶವನ್ನು ಶ್ರೀ ಸತ್ಯಾತ್ಮ ತೀರ್ಥರು ನೀಡಿದರು.
ಧಾರವಾಡದ ಶ್ರೀ ಮಾಧ್ವ ವಿದ್ಯಾಪೀಠ ಸಂಶೋಧನಾ ಸಂಸ್ಥೆ ಹೊರತಂದಿರುವ ಶ್ರೀಮದ್ ಬ್ರಹ್ಮಸೂತ್ರ ಭಾಷ್ಯ ಮತ್ತು ಅಣು ಭಾಷ್ಯ ಗ್ರಂಥಗಳನ್ನು ಶ್ರೀಗಳು ಲೋಕಾರ್ಪಣೆ ಮಾಡಿದರು. ಅಧಿಕ ಮಾಸದ ಅಂಗವಾಗಿ 33 ಪುಸ್ತಕಗಳನ್ನು ಪಂಡಿತರಿಗೆ ಶ್ರೀಗಳ ಹಸ್ತೇನ ದಾನವಾಗಿ ನೀಡಲಾಯಿತು.

ವಿಜಯಪುರದ ಪಂಡಿತ ಸಂಜೀವಾಚಾರ್ಯ ಮದಬಾವಿ ಪ್ರವಚನ ನೀಡಿದರು. ಚಾತುರ್ಮಾಸ್ಯ ಸಮಿತಿಯ ಅಧ್ಯಕ್ಷ ನವರತ್ನ ಸುಬ್ಬಣ್ಣಾಚಾರ್ಯ, ಪಂಡಿತರಾದ ನವರತ್ನ ಶ್ರೀನಿವಾಚಾರ್ಯ, ನವರತ್ನ ಪುರುಷೋತ್ತಮಾಚಾರ್ಯ, ರಘೂತ್ತಮಾಚಾರ್ಯ ಸಂಡೂರು ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...