Saturday, December 6, 2025
Saturday, December 6, 2025

Uttaradi Mutt ಹೊಳೆಹೊನ್ನೂರಿನಲ್ಲಿ ಶ್ರೀಭೂಸಮೇತ ಶ್ರೀನಿವಾಸ ದೇವರಿಗೆ ವಿಶೇಷ ಪುಷ್ಪಾರ್ಚನೆ

Date:

Uttaradi Mutt ತಿರುಪತಿ ತಿರುಮಲ ದೇವಸ್ಥಾನಮ್‌ನ ದಾಸಸಾಹಿತ್ಯ ಪ್ರಾಜೆಕ್ಟ್ ಮತ್ತು ಉತ್ತರಾದಿ ಮಠದ ಸಹಯೋಗದಲ್ಲಿ ಶ್ರೀ ಭೂಸಮೇತ ಶ್ರೀ ಶ್ರೀನಿವಾಸ ದೇವರಿಗೆ ವಿಶೇಷ ಪುಷ್ಪಾರ್ಚನೆ ಕಾರ್ಯಕ್ರಮ ನಡೆಯಿತು.

ಶ್ರೀಸತ್ಯಾತ್ಮ ತೀರ್ಥರ 28ನೇ ಚಾತುರ್ಮಾಸ ಅಂಗವಾಗಿ ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಶ್ರೀಸತ್ಯಾತ್ಮ ತೀರ್ಥ ಶ್ರೀಪಾದರು ಶ್ರೀನಿವಾಸ ದೇವರಿಗೆ ಮಂಗಳಾರತಿ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Uttaradi Mutt ದಾಸ ಸಾಹಿತ್ಯ ಪ್ರಾಜೆಕ್ಟ್ನ ವಿಶೇಷಾಕಾರಿ ಆನಂದತೀರ್ಥಾಚಾರ್ಯ ಪಗಡಾಲ ನೇತೃತ್ವದ ತಂಡ ಈ ಕಾರ್ಯಕ್ರಮ ನಡೆಸಿಕೊಟ್ಟಿತು.
ಈ ಕಾರ್ಯಕ್ರಮದ ನಿಮಿತ್ತ ತಿರುಪತಿಯಿಂದಲೇ ಶ್ರೀಭೂ ಸಮೇತ ಶ್ರೀ ಶ್ರೀನಿವಾಸ ದೇವರ ಉತ್ಸವ ಮೂರ್ತಿಯನ್ನು ಕರೆತರಲಾಗಿತ್ತು.

ಕಾರ್ಯಕ್ರಮದಲ್ಲಿ ಪಂಡಿತರಾದ ಗುತ್ತಲ ರಂಗಾಚಾರ್ಯ, ಸತ್ಯನಾಚಾರ್ಯ ಕಟ್ಟಿಘಿ, ಚಾತುರ್ಮಾಸ್ಯ ಸಮಿತಿಯ ಅಧ್ಯಕ್ಷ ನವರತ್ನ ಸುಬ್ಬಣ್ಣಾಚಾರ್ಯ, ಪಂಡಿತರಾದ ನವರತ್ನ ಶ್ರೀನಿವಾಚಾರ್ಯ, ನವರತ್ನ ಪುರುಷೋತ್ತಮಾಚಾರ್ಯ, ರಘೂತ್ತಮಾಚಾರ್ಯ ಸಂಡೂರು ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...