Monday, December 15, 2025
Monday, December 15, 2025

DSS Chikkamagaluru ಪವಿತ್ರ ವನದ ಸನಿಹ ಮದ್ಯದ ಮಳಿಗೆ ಬೇಡ: ದಸಂಸ ಆಗ್ರಹ

Date:

DSS Chikkamagaluru ಚಿಕ್ಕಮಗಳೂರು ನಗರದ ಪವಿತ್ರವನ ಸಮೀಪ ಮದ್ಯದ ಅಂಗಡಿ ತೆರೆಯದಂತೆ ಸೂಕ್ತ ಕ್ರಮ ವಹಿಸಬೇಕು ಎಂದು ದಲಿತ ಸಂಘರ್ಷ ಸಮಿತಿ (ಪ್ರೊ.ಕೃಷ್ಣಪ್ಪ ಸ್ಥಾಪಿತ) ಬಣ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.

ಈ ಸಂಬಂಧ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದ ದಸಂಸ ಪದಾಧಿಕಾರಿಗಳು ನಗರದ ಜಿ.ಪಂ. ಸಮೀಪವಿರುವ ಪವಿತ್ರವನದ ಸುತ್ತಮುತ್ತಲು ಯಾವುದೇ ಮದ್ಯದಂಗಡಿಗೆ ಅನುಮತಿ ನೀಡಬಾರದು ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ಕಬ್ಬಿಗೆರೆ ಮೋಹನ್‌ಕುಮಾರ್ ಇತ್ತೀಚೆಗೆ ಎಸ್ಟಿ, ಎಸ್ಟಿ ಕುಂದುಕೊರತೆಯ ಸಭೆಯಲ್ಲಿ ಮದ್ಯದ ಅಂಗಡಿಗೆ ಪರವಾನಿಗೆ ನೀಡಬಾರದೆಂದು ಅಬಕಾರಿ ಉಪನಿರೀಕ್ಷಕರು ಮತ್ತು ಪೊಲೀಸ್ ವರಿಷ್ಟಾಧಿಕಾರಿಗಳ ಸಮ್ಮುಖದಲ್ಲಿ ಅರ್ಜಿ ಸಲ್ಲಿಸಲಾಗಿದೆ ಎಂದು ಹೇಳಿದರು.

DSS Chikkamagaluru ಪವಿತ್ರವನದ ಸಮೀಪದ ಪ.ಜಾತಿ ಮತ್ತು ಪ.ಪಂಗಡದ ಬಾಲಕರ ವಿದ್ಯಾರ್ಥಿನಿಲಯ ಮತ್ತು ಅಕ್ಕಪಕ್ಕದಲ್ಲಿ ಸರ್ಕಾರಿ ಇಲಾಖೆ, ಶಾಲೆಗಳಿವೆ. ಮದ್ಯದಂಗಡಿ ತೆರೆದರೆ ಅಲ್ಲಿನ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಲಿದೆ ಮತ್ತು ಬಡಮಕ್ಕಳು ದುಶ್ಚಟಕ್ಕೆ ಬಲಿಯಾಗುವ ಸಂಭವವಿದೆ ಎಂದು ತಿಳಿಸಿದರು.

ಹಲವು ಬಾರಿ ಮದ್ಯದಂಗಡಿ ತೆರೆಯದಂತೆ ಅರ್ಜಿ ನೀಡಿದರೂ ಪವಿತ್ರವನ ಸಮೀಪ ರಿಲಕ್ಸ್ ಬಾರ್ ಅಂಡ್ ರೆಸ್ಟೋರೆಂಟ್ ತೆರೆದಿದ್ದು ಇದನ್ನು ಕೂಡಲೇ ತೆರವುಗೊಳಿಸಬೇಕು. ಒಂದು ತೆರವಿಗೆ ವಿಳಂಭ ನೀತಿ ಅನುಸರಿಸಿದರೆ ಸ್ವಾತಂತ್ರö್ಯ ದಿನಾಚರಣೆ ದಿನಂದು ಚಳುವಳಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಸಂಚಾಲಕಿ ಅರುಣಾಕ್ಷಿ, ವಿಭಾಗೀಯ ಸಂಚಾಲಕ ಟಿ.ಎಲ್.ಗಣೇಶ್, ಮುಖಂಡ ನಂಜುಂಡಪ್ಪ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...