Monday, February 2, 2026
Monday, February 2, 2026

DSS Chikkamagaluru ಪವಿತ್ರ ವನದ ಸನಿಹ ಮದ್ಯದ ಮಳಿಗೆ ಬೇಡ: ದಸಂಸ ಆಗ್ರಹ

Date:

DSS Chikkamagaluru ಚಿಕ್ಕಮಗಳೂರು ನಗರದ ಪವಿತ್ರವನ ಸಮೀಪ ಮದ್ಯದ ಅಂಗಡಿ ತೆರೆಯದಂತೆ ಸೂಕ್ತ ಕ್ರಮ ವಹಿಸಬೇಕು ಎಂದು ದಲಿತ ಸಂಘರ್ಷ ಸಮಿತಿ (ಪ್ರೊ.ಕೃಷ್ಣಪ್ಪ ಸ್ಥಾಪಿತ) ಬಣ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.

ಈ ಸಂಬಂಧ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದ ದಸಂಸ ಪದಾಧಿಕಾರಿಗಳು ನಗರದ ಜಿ.ಪಂ. ಸಮೀಪವಿರುವ ಪವಿತ್ರವನದ ಸುತ್ತಮುತ್ತಲು ಯಾವುದೇ ಮದ್ಯದಂಗಡಿಗೆ ಅನುಮತಿ ನೀಡಬಾರದು ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ಕಬ್ಬಿಗೆರೆ ಮೋಹನ್‌ಕುಮಾರ್ ಇತ್ತೀಚೆಗೆ ಎಸ್ಟಿ, ಎಸ್ಟಿ ಕುಂದುಕೊರತೆಯ ಸಭೆಯಲ್ಲಿ ಮದ್ಯದ ಅಂಗಡಿಗೆ ಪರವಾನಿಗೆ ನೀಡಬಾರದೆಂದು ಅಬಕಾರಿ ಉಪನಿರೀಕ್ಷಕರು ಮತ್ತು ಪೊಲೀಸ್ ವರಿಷ್ಟಾಧಿಕಾರಿಗಳ ಸಮ್ಮುಖದಲ್ಲಿ ಅರ್ಜಿ ಸಲ್ಲಿಸಲಾಗಿದೆ ಎಂದು ಹೇಳಿದರು.

DSS Chikkamagaluru ಪವಿತ್ರವನದ ಸಮೀಪದ ಪ.ಜಾತಿ ಮತ್ತು ಪ.ಪಂಗಡದ ಬಾಲಕರ ವಿದ್ಯಾರ್ಥಿನಿಲಯ ಮತ್ತು ಅಕ್ಕಪಕ್ಕದಲ್ಲಿ ಸರ್ಕಾರಿ ಇಲಾಖೆ, ಶಾಲೆಗಳಿವೆ. ಮದ್ಯದಂಗಡಿ ತೆರೆದರೆ ಅಲ್ಲಿನ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಲಿದೆ ಮತ್ತು ಬಡಮಕ್ಕಳು ದುಶ್ಚಟಕ್ಕೆ ಬಲಿಯಾಗುವ ಸಂಭವವಿದೆ ಎಂದು ತಿಳಿಸಿದರು.

ಹಲವು ಬಾರಿ ಮದ್ಯದಂಗಡಿ ತೆರೆಯದಂತೆ ಅರ್ಜಿ ನೀಡಿದರೂ ಪವಿತ್ರವನ ಸಮೀಪ ರಿಲಕ್ಸ್ ಬಾರ್ ಅಂಡ್ ರೆಸ್ಟೋರೆಂಟ್ ತೆರೆದಿದ್ದು ಇದನ್ನು ಕೂಡಲೇ ತೆರವುಗೊಳಿಸಬೇಕು. ಒಂದು ತೆರವಿಗೆ ವಿಳಂಭ ನೀತಿ ಅನುಸರಿಸಿದರೆ ಸ್ವಾತಂತ್ರö್ಯ ದಿನಾಚರಣೆ ದಿನಂದು ಚಳುವಳಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಸಂಚಾಲಕಿ ಅರುಣಾಕ್ಷಿ, ವಿಭಾಗೀಯ ಸಂಚಾಲಕ ಟಿ.ಎಲ್.ಗಣೇಶ್, ಮುಖಂಡ ನಂಜುಂಡಪ್ಪ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...