Saturday, September 28, 2024
Saturday, September 28, 2024

Sandipani School ಮಕ್ಕಳಲ್ಲಿ ಸ್ವಾತಂತ್ರ್ಯ ಹೋರಾಟದ ಬಗ್ಗೆ ತಿಳಿಸುವ ರಸಪ್ರಶ್ನೆ ಸ್ಪರ್ಧೆ ಉಪಯುಕ್ತ- ಶಾಸಕ ಚನ್ನಬಸಪ್ಪ

Date:

Sandipani School ಸಾಂದೀಪನಿ ಆಂಗ್ಲ ಶಾಲೆ, ಸಾರಥಿ ಯ್ಯೂಟ್ಯೂಬ್ ಚಾನಲ್ ಮತ್ತು ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ (ಶಿವಮೊಗ್ಗ ಜಿಲ್ಲಾ ಘಟಕ) ಇವರ ಸಹಯೋಗದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಿಸಿದಂತೆ ಅಂತರ ಶಾಲಾ ರಸಪ್ರಶ್ನೆ ಕಾರ್ಯಕ್ರಮವು ಸಾಂದೀಪನಿ ಶಾಲೆಯಲ್ಲಿ ನಡೆಯಿತು.

ನಗರದ ಅನೇಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಸ್ಪರ್ಧೆಯನ್ನು ಕ್ವಿಜ್ ಮಾಸ್ಟರ್ ಹೇಮಂತ್ ಕೇಳ್ಕರ್ ಅವರು ನಡೆಸಿಕೊಟ್ಟರು.

Sandipani School ಈ ಕಾರ್ಯಕ್ರಮದಲ್ಲಿ ಜೈನ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು, ಸಾಂದೀಪನಿ ಆಂಗ್ಲ ಶಾಲೆ ದ್ವಿತೀಯ ಸ್ಥಾನವನ್ನು, ಶ್ರೀರಾಮಕೃಷ್ಣ ಶಾಲೆ ತೃತೀಯ ಸ್ಥಾನವನ್ನು ಪಡೆದುಕೊಂಡರು.

ವಿಜೇತರುಗಳಿಗೆ ಶಿವಮೊಗ್ಗ ವಿಧಾನಸಭಾ ಸದಸ್ಯರಾದ ಶ್ರೀ ಚನ್ನಬಸಪ್ಪ ಇವರು ವಿತರಿಸಿ, ಸ್ವಾತಂತ್ರ್ಯೋತ್ಸವದ ಈ ಸಂದರ್ಭದಲ್ಲಿ ಮಕ್ಕಳಲ್ಲಿ ಸ್ವಾತಂತ್ರ ಹೋರಾಟ ಸಾಗಿ ಬಂದ ಹಾದಿಯನ್ನು ತಿಳಿಸುವ ಸಲುವಾಗಿ ಈ ರಸಪ್ರಶ್ನೆಯು ಉಪಯುಕ್ತವಾಗಿದ್ದು, ಅನೇಕ ವಿಚಾರಗಳನ್ನು ತಿಳಿಯಲು ಸಹಕಾರಿಯಾಯಿತು ಎಂದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀನಿವಾಸ ವರ್ಮ, ಕಾರ್ಯದರ್ಶಿ ಲೋಕೇಶ್, ನಿರ್ದೇಶಕರಾದ ರಾಜಶೇಖರ್, ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ (ಶಿವಮೊಗ್ಗ ಜಿಲ್ಲಾ ಘಟಕ)ದ ಹರೀಶ್ ಪಂಡಿತ್ ಮತ್ತು ನಿರ್ದೇಶಕರುಗಳು, ಸಾರಥಿ ಚಾನಲ್ ನ ಅಜೇಯ ಶ್ರೀನಿವಾಸ್ ಮತ್ತು ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...