Friday, June 13, 2025
Friday, June 13, 2025

Sandipani School ಮಕ್ಕಳಲ್ಲಿ ಸ್ವಾತಂತ್ರ್ಯ ಹೋರಾಟದ ಬಗ್ಗೆ ತಿಳಿಸುವ ರಸಪ್ರಶ್ನೆ ಸ್ಪರ್ಧೆ ಉಪಯುಕ್ತ- ಶಾಸಕ ಚನ್ನಬಸಪ್ಪ

Date:

Sandipani School ಸಾಂದೀಪನಿ ಆಂಗ್ಲ ಶಾಲೆ, ಸಾರಥಿ ಯ್ಯೂಟ್ಯೂಬ್ ಚಾನಲ್ ಮತ್ತು ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ (ಶಿವಮೊಗ್ಗ ಜಿಲ್ಲಾ ಘಟಕ) ಇವರ ಸಹಯೋಗದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಿಸಿದಂತೆ ಅಂತರ ಶಾಲಾ ರಸಪ್ರಶ್ನೆ ಕಾರ್ಯಕ್ರಮವು ಸಾಂದೀಪನಿ ಶಾಲೆಯಲ್ಲಿ ನಡೆಯಿತು.

ನಗರದ ಅನೇಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಸ್ಪರ್ಧೆಯನ್ನು ಕ್ವಿಜ್ ಮಾಸ್ಟರ್ ಹೇಮಂತ್ ಕೇಳ್ಕರ್ ಅವರು ನಡೆಸಿಕೊಟ್ಟರು.

Sandipani School ಈ ಕಾರ್ಯಕ್ರಮದಲ್ಲಿ ಜೈನ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು, ಸಾಂದೀಪನಿ ಆಂಗ್ಲ ಶಾಲೆ ದ್ವಿತೀಯ ಸ್ಥಾನವನ್ನು, ಶ್ರೀರಾಮಕೃಷ್ಣ ಶಾಲೆ ತೃತೀಯ ಸ್ಥಾನವನ್ನು ಪಡೆದುಕೊಂಡರು.

ವಿಜೇತರುಗಳಿಗೆ ಶಿವಮೊಗ್ಗ ವಿಧಾನಸಭಾ ಸದಸ್ಯರಾದ ಶ್ರೀ ಚನ್ನಬಸಪ್ಪ ಇವರು ವಿತರಿಸಿ, ಸ್ವಾತಂತ್ರ್ಯೋತ್ಸವದ ಈ ಸಂದರ್ಭದಲ್ಲಿ ಮಕ್ಕಳಲ್ಲಿ ಸ್ವಾತಂತ್ರ ಹೋರಾಟ ಸಾಗಿ ಬಂದ ಹಾದಿಯನ್ನು ತಿಳಿಸುವ ಸಲುವಾಗಿ ಈ ರಸಪ್ರಶ್ನೆಯು ಉಪಯುಕ್ತವಾಗಿದ್ದು, ಅನೇಕ ವಿಚಾರಗಳನ್ನು ತಿಳಿಯಲು ಸಹಕಾರಿಯಾಯಿತು ಎಂದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀನಿವಾಸ ವರ್ಮ, ಕಾರ್ಯದರ್ಶಿ ಲೋಕೇಶ್, ನಿರ್ದೇಶಕರಾದ ರಾಜಶೇಖರ್, ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ (ಶಿವಮೊಗ್ಗ ಜಿಲ್ಲಾ ಘಟಕ)ದ ಹರೀಶ್ ಪಂಡಿತ್ ಮತ್ತು ನಿರ್ದೇಶಕರುಗಳು, ಸಾರಥಿ ಚಾನಲ್ ನ ಅಜೇಯ ಶ್ರೀನಿವಾಸ್ ಮತ್ತು ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...