Sunday, December 14, 2025
Sunday, December 14, 2025

Independence Day ಏಕತೆಯೇ ಶಕ್ತಿ: ವೈದ್ಯರೆಲ್ಲರೂ ಆರೋಗ್ಯಕರ ಸಮಾಜ‌ ನಿರ್ಮಿಸೋಣ- ಡಾ.ಎಂ.ಎಸ್.ಅರುಣ್

Date:

Independence Day ನಾವು ನಮ್ಮ ಇಂದಿನ ದಿನವನ್ನು ಉತ್ತಮ ನಾಳೆಗಾಗಿ ಬಳಸಿಕೊಳ್ಳಬೇಕು. ಏಕತೆಯೇ ಶಕ್ತಿ. ಹಾಗಾಗಿ ವೈದ್ಯ ಸಮೂಹ ಒಂದಾಗಿ ಒಂದು ಆರೋಗ್ಯಕರ ಸಮಾಜ ನಿರ್ಮಾಣ ಮಾಡುವತ್ತ ನಮ್ಮ ಸಂಘದ ಚಟುವಟಿಕೆಗಳನ್ನು ಕಾರ್ಯರೂಪಕ್ಕೆ ತರುವತ್ತ ಇಂದು ಪ್ರಯತ್ನ ಸಾಗಿದೆ . ನಮ್ಮ ದೇಶವನ್ನು ಶಕ್ತಿಯುತ ಮತ್ತು ವಿಶ್ವದಲ್ಲಿ ಗೌರವಾನ್ವಿತವಾಗಿಸಲು ನಾವು ಎಲ್ಲ ಪ್ರಯತ್ನಗಳನ್ನು ಮಾಡಬೇಕಾಗಿದೆ. ನಾವು ಒಂದಾಗೋಣ, ಕಷ್ಟಪಟ್ಟು ಕೆಲಸ ಮಾಡೋಣ ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷರಾದ ಡಾ . ಅರುಣ್ .ಎಂ .ಎಸ್ ಅವರು ಹೇಳಿದರು .

77ನೇ ಸ್ವಾತಂತ್ರ ದಿನಾಚರಣೆಯನ್ನು ಭಾರತೀಯ ವೈದ್ಯಕೀಯ ಸಂಘ ಅತ್ಯಂತ ಸಡಗರದಿಂದ ಆಚರಿಸಲಾಯಿತು .

100 ಕ್ಕೂ ಹೆಚ್ಚು ಸದಸ್ಯರ ಭಾಗವಹಿಸುವಿಕೆಯೊಂದಿಗೆ ಹಬ್ಬದ ವಾತಾವರಣದೊಂದಿಗೆ ಸಮಾರಂಭ ನಡೆಯಿತು .
ಅಧ್ಯಕ್ಷ ಡಾ.ಅರುಣ್ ಎಂ ಎಸ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಪ್ರತಿಯೊಬ್ಬರು ತಮ್ಮ ಕೈಲಾದಷ್ಟು ಕೆಲಸ ಮಾಡಿ ಸಮಾಜದ ಉನ್ನತಿಗೆ ಹೇಗೆ ಸಹಾಯ ಮಾಡಬಹುದು ಎಂಬ ಸಂದೇಶ ನೀಡಿದರು.

14.8.2023 ನೇ ತಾರೀಖು ಮುಕ್ತಾಯವಾದ ಒಂದು ತಿಂಗಳ ಅವಧಿಯ ಅಧಿಕಸ್ಯ ಅಧಿಕಫಲಂ ಮೆಗಾ ಆರೋಗ್ಯ ಜಾಗೃತಿ ಶಿಬಿರದಲ್ಲಿ ಶುಭಮಂಗಳ ಕಲ್ಯಾಣ ಮಂಟಪದಲ್ಲಿ ಭಾಗವಹಿಸಿದ ವೈದ್ಯರಿಗೆ ಐಎಂಎ ಪಿನ್‌ಗಳನ್ನು ವಿತರಿಸಲಾಯಿತು. ದೂರದರ್ಶನದ ಹಿಂದಿನ ಕಾಲದ ಮಿಲೇ ಸುರ್ ಮೇರಾ ತುಮ್ಹಾರಾ ಗೀತೆಯನ್ನು ಸದಸ್ಯರಾದ ಡಾ.ದಯಾನಂದ್, ಡಾ.ರೇಖಾ, ಡಾ.ಚೇತನ್, ಡಾ.ರಾಮಚಂದ್ರ ಬಾದಾಮಿ, ಡಾ.ರಕ್ಷಾ ರಾವ್ ಮತ್ತು ಡಾ.ಝೀನತ್ ಅವರು ಕರೋಕೆಯೊಂದಿಗೆ ಪ್ರಸ್ತುತಪಡಿಸಿದರು.

ಉಪಹಾರದೊಂದಿಗೆ ಅಧಿವೇಶನ ಮುಕ್ತಾಯವಾಯಿತು.

Independence Day ಕಾರ್ಯದರ್ಶಿ ಡಾ . ರಕ್ಷಾ ರಾವ್ ಕಾರ್ಯಕ್ರಮ ನಿರೂಪಿಸಿದರು . ಖಜಾಂಚಿ ಡಾ. ಶಶಿಧರ್ ವಂದನಾರ್ಪಣೆ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...